<p>ಬೆಂಗಳೂರು: ‘ಬೆಳಗಾವಿಯಲ್ಲಿ ಮಿಲಿಟರಿ ಆಡಳಿತ ನಡೆಯುತ್ತಿದೆ. ಅಲ್ಲಿನ ಜಿಲ್ಲಾಡಳಿತ ಕನ್ನಡಿಗರನ್ನು ತುಳಿಯುತ್ತಿದ್ದರೆ, ಪೊಲೀಸರು ದಬ್ಬಾಳಿಕೆ ನಡೆಸುತ್ತಿದ್ದಾರೆ’ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆರೋಪಿಸಿದರು.<br /> <br /> ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಕನ್ನಡಿಗರ ಪರವಾಗಿಲ್ಲ. ಕನ್ನಡ ಪರ ಸಂಘಟನೆಗಳ ಮೇಲೆ ನಾನಾ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಎಂಇಎಸ್ ಶಾಸಕರು ರಾಜ್ಯ ಮತ್ತು ಕನ್ನಡಿಗರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ವಿರೋಧಿಸಿ ಬೆಳಗಾವಿಯಲ್ಲಿ ಪ್ರತಿಭಟಿಸಲು ಕನ್ನಡಪರ ಸಂಘಟನೆಗಳು ನಿರ್ಧರಿಸಿದ್ದವು. ಅದರಂತೆ ಬುಧವಾರ ಬೆಳಗಾವಿಗೆ ಹೊರಟಿದ್ದ ಸಂಘಟನೆಗಳನ್ನು ಪೊಲೀಸರು ಶಿಗ್ಗಾವಿಯ ಬಳಿಯೇ ತಡೆದು ನಿಲ್ಲಿಸಿದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ‘ಶಿಗ್ಗಾವಿಯಿಂದ ಮುಂದೆ ಹೋಗಲು ಬಿಡದ ಪೊಲೀಸರು ಬೆಂಗಳೂರಿಗೆ ಹಿಂತಿರುಗುವಂತೆ ಸೂಚಿಸಿದರು. ಹೀಗೆ ನಮ್ಮ ರಾಜ್ಯದಲ್ಲೇ ನಮಗೆ ಸಂಚರಿಸದಂತೆ ತಡೆದ ಈ ಪೊಲೀಸರು ಯಾರು’ ಎಂದು ಪ್ರಶ್ನಿಸಿದರು.<br /> <br /> <strong>ಎಸ್ಮಾಗೆ ವಿರೋಧ: </strong>ಎಸ್ಮಾ ಕಾಯ್ದೆಗೆ ಅಧಿವೇಶನದಲ್ಲಿ ಅನುಮೋದನೆ ನೀಡಿರುವುದು ದುರಂತದ ಸಂಗತಿ. ಇದು ಕಾರ್ಮಿಕ ವಿರೋಧಿ ಮತ್ತು ಅಪಾಯಕಾರಿ ಕಾಯ್ದೆ. ಕಾರ್ಮಿಕರ ಹೋರಾಟಗಳನ್ನು ಹತ್ತಿಕ್ಕಲು ಇದನ್ನು ಜಾರಿಗೆ ತರಲಾಗಿದೆ. ಈ ಸಂಬಂಧ ಸದ್ಯದಲ್ಲೇ ಕಾರ್ಮಿಕರ ಸಂಘಟನೆಗಳೊಂದಿಗೆ ಚರ್ಚಿಸಿ, ಪ್ರತಿಭಟನೆ ನಡೆಸಲು ನಿರ್ಧರಿಸಲಾಗುವುದು ಎಂದು ತಿಳಿಸಿದರು.<br /> <br /> ನಿರ್ಮಾಪಕ ಸಾ.ರಾ.ಗೋವಿಂದು ಮಾತನಾಡಿ, ‘ಕನ್ನಡಪರ ಸಂಘಟನೆಗಳ ಹೋರಾಟದ ಫಲವಾಗಿ ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಾಣವಾಗಿದೆ. ಆದರೆ ಅಂತಹ ಸಂಘಟನೆಗಳನ್ನೇ ಬೆಳಗಾವಿಗೆ ಬರಬೇಡಿ ಎಂದು ಪೊಲೀಸರು ತಡೆಯುತ್ತಿದ್ದಾರೆ. ಇದು ಸರಿಯಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಬೆಳಗಾವಿಯಲ್ಲಿ ಮಿಲಿಟರಿ ಆಡಳಿತ ನಡೆಯುತ್ತಿದೆ. ಅಲ್ಲಿನ ಜಿಲ್ಲಾಡಳಿತ ಕನ್ನಡಿಗರನ್ನು ತುಳಿಯುತ್ತಿದ್ದರೆ, ಪೊಲೀಸರು ದಬ್ಬಾಳಿಕೆ ನಡೆಸುತ್ತಿದ್ದಾರೆ’ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆರೋಪಿಸಿದರು.<br /> <br /> ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಕನ್ನಡಿಗರ ಪರವಾಗಿಲ್ಲ. ಕನ್ನಡ ಪರ ಸಂಘಟನೆಗಳ ಮೇಲೆ ನಾನಾ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಎಂಇಎಸ್ ಶಾಸಕರು ರಾಜ್ಯ ಮತ್ತು ಕನ್ನಡಿಗರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ವಿರೋಧಿಸಿ ಬೆಳಗಾವಿಯಲ್ಲಿ ಪ್ರತಿಭಟಿಸಲು ಕನ್ನಡಪರ ಸಂಘಟನೆಗಳು ನಿರ್ಧರಿಸಿದ್ದವು. ಅದರಂತೆ ಬುಧವಾರ ಬೆಳಗಾವಿಗೆ ಹೊರಟಿದ್ದ ಸಂಘಟನೆಗಳನ್ನು ಪೊಲೀಸರು ಶಿಗ್ಗಾವಿಯ ಬಳಿಯೇ ತಡೆದು ನಿಲ್ಲಿಸಿದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ‘ಶಿಗ್ಗಾವಿಯಿಂದ ಮುಂದೆ ಹೋಗಲು ಬಿಡದ ಪೊಲೀಸರು ಬೆಂಗಳೂರಿಗೆ ಹಿಂತಿರುಗುವಂತೆ ಸೂಚಿಸಿದರು. ಹೀಗೆ ನಮ್ಮ ರಾಜ್ಯದಲ್ಲೇ ನಮಗೆ ಸಂಚರಿಸದಂತೆ ತಡೆದ ಈ ಪೊಲೀಸರು ಯಾರು’ ಎಂದು ಪ್ರಶ್ನಿಸಿದರು.<br /> <br /> <strong>ಎಸ್ಮಾಗೆ ವಿರೋಧ: </strong>ಎಸ್ಮಾ ಕಾಯ್ದೆಗೆ ಅಧಿವೇಶನದಲ್ಲಿ ಅನುಮೋದನೆ ನೀಡಿರುವುದು ದುರಂತದ ಸಂಗತಿ. ಇದು ಕಾರ್ಮಿಕ ವಿರೋಧಿ ಮತ್ತು ಅಪಾಯಕಾರಿ ಕಾಯ್ದೆ. ಕಾರ್ಮಿಕರ ಹೋರಾಟಗಳನ್ನು ಹತ್ತಿಕ್ಕಲು ಇದನ್ನು ಜಾರಿಗೆ ತರಲಾಗಿದೆ. ಈ ಸಂಬಂಧ ಸದ್ಯದಲ್ಲೇ ಕಾರ್ಮಿಕರ ಸಂಘಟನೆಗಳೊಂದಿಗೆ ಚರ್ಚಿಸಿ, ಪ್ರತಿಭಟನೆ ನಡೆಸಲು ನಿರ್ಧರಿಸಲಾಗುವುದು ಎಂದು ತಿಳಿಸಿದರು.<br /> <br /> ನಿರ್ಮಾಪಕ ಸಾ.ರಾ.ಗೋವಿಂದು ಮಾತನಾಡಿ, ‘ಕನ್ನಡಪರ ಸಂಘಟನೆಗಳ ಹೋರಾಟದ ಫಲವಾಗಿ ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಾಣವಾಗಿದೆ. ಆದರೆ ಅಂತಹ ಸಂಘಟನೆಗಳನ್ನೇ ಬೆಳಗಾವಿಗೆ ಬರಬೇಡಿ ಎಂದು ಪೊಲೀಸರು ತಡೆಯುತ್ತಿದ್ದಾರೆ. ಇದು ಸರಿಯಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>