<p><strong>ಮಂಡ್ಯ:</strong> ಕೆಆರ್ಎಸ್ ಅಣೆಕಟ್ಟೆಯಿಂದ ಬೇಸಿಗೆ ಬೆಳೆಗೆ ನೀರು ಬಿಡುವುದಿಲ್ಲ. ಆದರೆ, ಬೆಂಗಳೂರು, ಮೈಸೂರು, ಮಂಡ್ಯ ನಗರಗಳ ಕುಡಿಯುವ ನೀರಿಗೆ ಯಾವುದೇ ತೊಂದರೆ ಇಲ್ಲ ಎಂದು ವಸತಿ ಸಚಿವ ಅಂಬರೀಷ್್ ಹೇಳಿದರು.<br /> <br /> ಜಿಲ್ಲೆಯ ಕೆಆರ್ಎಸ್ನಲ್ಲಿ ಶನಿವಾರ ನಡೆದ ಕಾವೇರಿ ಸಲಹಾ ಸಮಿತಿ ಸಭೆಯ ನಂತರ ಅವರು ಈ ಮಾಹಿತಿ ನೀಡಿದರು.<br /> <br /> ಅಣೆಕಟ್ಟೆಯಲ್ಲಿ 18 ಟಿಎಂಸಿ ಅಡಿ ನೀರು ಇರುವುದರಿಂದ ಬೇಸಿಗೆ ಬೆಳೆಗೆ ನೀರು ಬಿಡಲು ಸಾಧ್ಯವಿಲ್ಲ. ಅಣೆಕಟ್ಟೆಯಲ್ಲಿರುವ ನೀರಿನ ಪೈಕಿ 4.4 ಟಿಎಂಸಿ ಅಡಿ ನೀರನ್ನು ಕುಡಿಯುವ ನೀರಿಗೆಂದು ಕಾಯ್ದಿರಿಸಲಾಗಿದೆ ಎಂದರು.<br /> <br /> ಜಿಲ್ಲೆಯಲ್ಲಿ ಈಗ ಬೆಳೆದು ನಿಂತಿರುವ ಬೆಳೆಗೆ ಕಟ್ಟು ಪದ್ಧತಿಯಲ್ಲಿ ನೀರು ಬಿಡಲಾಗುವುದು. ಹೊಸದಾಗಿ ಯಾವುದೇ ಬೆಳೆ ಬಿತ್ತನೆ ಮಾಡಬಾರದು ಎಂದು ಅವರು ರೈತರಲ್ಲಿ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಕೆಆರ್ಎಸ್ ಅಣೆಕಟ್ಟೆಯಿಂದ ಬೇಸಿಗೆ ಬೆಳೆಗೆ ನೀರು ಬಿಡುವುದಿಲ್ಲ. ಆದರೆ, ಬೆಂಗಳೂರು, ಮೈಸೂರು, ಮಂಡ್ಯ ನಗರಗಳ ಕುಡಿಯುವ ನೀರಿಗೆ ಯಾವುದೇ ತೊಂದರೆ ಇಲ್ಲ ಎಂದು ವಸತಿ ಸಚಿವ ಅಂಬರೀಷ್್ ಹೇಳಿದರು.<br /> <br /> ಜಿಲ್ಲೆಯ ಕೆಆರ್ಎಸ್ನಲ್ಲಿ ಶನಿವಾರ ನಡೆದ ಕಾವೇರಿ ಸಲಹಾ ಸಮಿತಿ ಸಭೆಯ ನಂತರ ಅವರು ಈ ಮಾಹಿತಿ ನೀಡಿದರು.<br /> <br /> ಅಣೆಕಟ್ಟೆಯಲ್ಲಿ 18 ಟಿಎಂಸಿ ಅಡಿ ನೀರು ಇರುವುದರಿಂದ ಬೇಸಿಗೆ ಬೆಳೆಗೆ ನೀರು ಬಿಡಲು ಸಾಧ್ಯವಿಲ್ಲ. ಅಣೆಕಟ್ಟೆಯಲ್ಲಿರುವ ನೀರಿನ ಪೈಕಿ 4.4 ಟಿಎಂಸಿ ಅಡಿ ನೀರನ್ನು ಕುಡಿಯುವ ನೀರಿಗೆಂದು ಕಾಯ್ದಿರಿಸಲಾಗಿದೆ ಎಂದರು.<br /> <br /> ಜಿಲ್ಲೆಯಲ್ಲಿ ಈಗ ಬೆಳೆದು ನಿಂತಿರುವ ಬೆಳೆಗೆ ಕಟ್ಟು ಪದ್ಧತಿಯಲ್ಲಿ ನೀರು ಬಿಡಲಾಗುವುದು. ಹೊಸದಾಗಿ ಯಾವುದೇ ಬೆಳೆ ಬಿತ್ತನೆ ಮಾಡಬಾರದು ಎಂದು ಅವರು ರೈತರಲ್ಲಿ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>