<p><strong>ಹಾವೇರಿ: </strong>ಮಳೆ ನೀರನ್ನು ಹರಿಬಿಡದೆ ತೋಟಗಳಲ್ಲಿ ಚಿಕ್ಕ ಬದುವುಗಳನ್ನು ನಿರ್ಮಿಸಿ ನೀರು ಭೂಮಿಯಲ್ಲಿ ಇಂಗುವಂತೆ ಮಾಡುವುದರಿಂದ ಭೂ ಸವಕಳಿ ತಡೆಗಟ್ಟಬಹುದು ಎಂದು ತಾಲ್ಲೂಕಿನ ಅಕ್ಕೂರ ಗ್ರಾಮದ ಪ್ರಗತಿಪರ ರೈತ ಪರಮೇಶ್ವರಯ್ಯ ಸಾಲಿಮಠ ತಿಳಿಸಿದರು.<br /> <br /> ಬೆಂಗಳೂರನಲ್ಲಿ ಇತ್ತೀಚೆಗೆ ನಡದ ಅಂತರ್ರಾಷ್ಟ್ರೀಯ ಕೃಷಿ ಮೇಳದಲ್ಲಿ ‘ರೈತರಿಂದ ರೈತರಿಗಾಗಿ’ ಏರ್ಪಡಿಸಿದ್ದ ಚರ್ಚಾಗೋಷ್ಠಿಯಲ್ಲಿ ಭಾಗವಹಿಸಿ ಮಳೆ ನೀರು ಕೊಯ್ಲು ಹಾಗೂ ಅಂತರ್ಜಲ ಮರುಪೂರಣ ಕ್ರಮಗಳ ಬಗ್ಗೆ ಮಾತನಾಡಿದ ಕುರಿತು ಅವರು ಅನುಭವ ಹಂಚಿಕೊಂಡರು.<br /> <br /> ತಮ್ಮ ಜಮೀನಿನಲ್ಲಿ ಭೂ ಸವಕಳಿ ತಡೆಗಟ್ಟುವ ಕುರಿತು ಪ್ರಾಯೋಗ ಮಾಡಿದ್ದು, ಇದರಿಂದ ಅಂತರ್ಜಲ ಮಟ್ಟ ಸುಧಾರಿಸುವ ಜತೆಗೆ ಬೆಳೆಗಳಿಗೆ ಸಮರ್ಪಕ ನೀರು ದೊರೆತು ಉತ್ತಮ ಇಳುವರಿ ಪಡೆಯಲು ಸಾಧ್ಯವಾಗಿದೆ ಎಂದರು.<br /> <br /> ಅನಾವಶ್ಯಕ ಹಳ್ಳವನ್ನು ಸೇರುತ್ತಿದ್ದ ಮಳೆ ನೀರನ್ನು ಚರಂಡಿಗಳ ಮೂಲಕ ಕೃಷಿ ಹೊಂಡಕ್ಕೆ ಚರಂಡಿಗಳ ಹರಿಯುವಂತೆ ಮಾಡಿದೆ. ಈ ಕ್ರಮದಿಂದ ಕೃಷಿ ಹೊಂಡ ತುಂಬಿತಲ್ಲದೇ, ವರ್ಷವಿಡಿ ಜಮೀನು ತೇವಾಂಶದಿಂದ ಕೂಡಿರುತ್ತದೆ. ಇದರಿಂದ ಕೊಳವೆ ಬಾವಿಯಲ್ಲಿ ನೀರಿನ ಮಟ್ಟವು ಕೂಡ ಹೆಚ್ಚಾಗಿದೆ ಎಂದರು.<br /> <br /> ರಾಜ್ಯ ಕೃಷಿ ಆಯೋಗದ ಅಧ್ಯಕ್ಷ ಡಾ.ಎಸ್.ಎ.ಪಾಟೀಲ ಗೋಷ್ಠಿ ಅಧ್ಯಕ್ಷತೆ ವಹಿಸಿದ್ದರು. ಕೃಷಿ ವಿವಿಯ ಬೇಸಾಯ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಕೃಷ್ಣಮೂರ್ತಿ ಸರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಪ್ರಗತಿಪರ ರೈತರು ತಮ್ಮ ಕೃಷಿ ಅನುಭವಗಳನ್ನು ಹಂಚಿಕೊಂಡರು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>ಮಳೆ ನೀರನ್ನು ಹರಿಬಿಡದೆ ತೋಟಗಳಲ್ಲಿ ಚಿಕ್ಕ ಬದುವುಗಳನ್ನು ನಿರ್ಮಿಸಿ ನೀರು ಭೂಮಿಯಲ್ಲಿ ಇಂಗುವಂತೆ ಮಾಡುವುದರಿಂದ ಭೂ ಸವಕಳಿ ತಡೆಗಟ್ಟಬಹುದು ಎಂದು ತಾಲ್ಲೂಕಿನ ಅಕ್ಕೂರ ಗ್ರಾಮದ ಪ್ರಗತಿಪರ ರೈತ ಪರಮೇಶ್ವರಯ್ಯ ಸಾಲಿಮಠ ತಿಳಿಸಿದರು.<br /> <br /> ಬೆಂಗಳೂರನಲ್ಲಿ ಇತ್ತೀಚೆಗೆ ನಡದ ಅಂತರ್ರಾಷ್ಟ್ರೀಯ ಕೃಷಿ ಮೇಳದಲ್ಲಿ ‘ರೈತರಿಂದ ರೈತರಿಗಾಗಿ’ ಏರ್ಪಡಿಸಿದ್ದ ಚರ್ಚಾಗೋಷ್ಠಿಯಲ್ಲಿ ಭಾಗವಹಿಸಿ ಮಳೆ ನೀರು ಕೊಯ್ಲು ಹಾಗೂ ಅಂತರ್ಜಲ ಮರುಪೂರಣ ಕ್ರಮಗಳ ಬಗ್ಗೆ ಮಾತನಾಡಿದ ಕುರಿತು ಅವರು ಅನುಭವ ಹಂಚಿಕೊಂಡರು.<br /> <br /> ತಮ್ಮ ಜಮೀನಿನಲ್ಲಿ ಭೂ ಸವಕಳಿ ತಡೆಗಟ್ಟುವ ಕುರಿತು ಪ್ರಾಯೋಗ ಮಾಡಿದ್ದು, ಇದರಿಂದ ಅಂತರ್ಜಲ ಮಟ್ಟ ಸುಧಾರಿಸುವ ಜತೆಗೆ ಬೆಳೆಗಳಿಗೆ ಸಮರ್ಪಕ ನೀರು ದೊರೆತು ಉತ್ತಮ ಇಳುವರಿ ಪಡೆಯಲು ಸಾಧ್ಯವಾಗಿದೆ ಎಂದರು.<br /> <br /> ಅನಾವಶ್ಯಕ ಹಳ್ಳವನ್ನು ಸೇರುತ್ತಿದ್ದ ಮಳೆ ನೀರನ್ನು ಚರಂಡಿಗಳ ಮೂಲಕ ಕೃಷಿ ಹೊಂಡಕ್ಕೆ ಚರಂಡಿಗಳ ಹರಿಯುವಂತೆ ಮಾಡಿದೆ. ಈ ಕ್ರಮದಿಂದ ಕೃಷಿ ಹೊಂಡ ತುಂಬಿತಲ್ಲದೇ, ವರ್ಷವಿಡಿ ಜಮೀನು ತೇವಾಂಶದಿಂದ ಕೂಡಿರುತ್ತದೆ. ಇದರಿಂದ ಕೊಳವೆ ಬಾವಿಯಲ್ಲಿ ನೀರಿನ ಮಟ್ಟವು ಕೂಡ ಹೆಚ್ಚಾಗಿದೆ ಎಂದರು.<br /> <br /> ರಾಜ್ಯ ಕೃಷಿ ಆಯೋಗದ ಅಧ್ಯಕ್ಷ ಡಾ.ಎಸ್.ಎ.ಪಾಟೀಲ ಗೋಷ್ಠಿ ಅಧ್ಯಕ್ಷತೆ ವಹಿಸಿದ್ದರು. ಕೃಷಿ ವಿವಿಯ ಬೇಸಾಯ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಕೃಷ್ಣಮೂರ್ತಿ ಸರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಪ್ರಗತಿಪರ ರೈತರು ತಮ್ಮ ಕೃಷಿ ಅನುಭವಗಳನ್ನು ಹಂಚಿಕೊಂಡರು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>