<p>ಬೆಂಗಳೂರು: ‘ಮಕ್ಕಳಿಗೆ ಶೈಕ್ಷಣಿಕ ಜ್ಞಾನವನ್ನಷ್ಟೇ ನೀಡಿದರೆ ಸಾಲದು; ಅವರಿಗೆ ಸಾಮಾಜಿಕ ಜವಾಬ್ದಾರಿ ಮತ್ತು ಉತ್ತಮ ಜೀವನ ಮೌಲ್ಯಗಳನ್ನೂ ಹೇಳಿಕೊಡಬೇಕು’ ಎಂದು ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ರಿಜಿಸ್ಟ್ರಾರ್ ಡಾ.ಎನ್.ಮೋಹನ್ ದಾಸ್ ಅಭಿಪ್ರಾಯಪಟ್ಟರು.<br /> <br /> ಐಐಎಸ್ಸಿ ಕೇಂದ್ರೀಯ ವಿದ್ಯಾಲಯದ 34ನೇ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ವಿಶ್ವದ ಬೇರಾವುದೇ ರಾಷ್ಟ್ರಗಳಿಗಿಂತ ಭಾರತದಲ್ಲಿ ಹೆಚ್ಚಿನ ಸಂಖ್ಯೆಯ ಯುವ ಜನರಿದ್ದಾರೆ. ಈ ವಿಚಾರದಲ್ಲಿ ಮುಂದಿನ ಹಲವು ವರ್ಷಗಳ ಕಾಲ ಭಾರತವನ್ನು ಹಿಂದಿಕ್ಕಲು ಬೇರಾವುದೇ ದೇಶಗಳಿಗೆ ಸಾಧ್ಯವಾಗುವುದಿಲ್ಲ’ ಎಂದು ಅವರು ಹೇಳಿದರು.<br /> <br /> ಪ್ರಾಂಶುಪಾಲ ಕೆ.ಎನ್.ಭಟ್ ಮಾತನಾಡಿ, ‘ನಮ್ಮ ವಿದ್ಯಾಲಯದ ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಮಾತ್ರವಲ್ಲದೇ ರಾಷ್ಟ್ರಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ’ ಎಂಧರು.<br /> <br /> ಸ್ವಾಮಿ ವಿವೇಕಾನಂದರ ಜೀವನ ಸಾಧನೆ ನಿರೂಪಿಸುವ ನೃತ್ಯ ನಾಟಕ, ವಿಶಿಷ್ಟ ಶೈಲಿಯ ಟರ್ಕಿ ಮತ್ತು ಫ್ಯೂಷನ್ ನೃತ್ಯ, ವೃದ್ಧಾಪ್ಯದ ಕಷ್ಟಗಳನ್ನು ವಿವರಿಸುವ ಆಂಗ್ಲ ನಾಟಕ, ವಿವಿಧ ರಾಜ್ಯಗಳ ನೃತ್ಯ ಪ್ರಕಾರಗಳ ಪ್ರದರ್ಶನವು ನೋಡುಗರ ಕಣ್ಮನ ಸೆಳೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಮಕ್ಕಳಿಗೆ ಶೈಕ್ಷಣಿಕ ಜ್ಞಾನವನ್ನಷ್ಟೇ ನೀಡಿದರೆ ಸಾಲದು; ಅವರಿಗೆ ಸಾಮಾಜಿಕ ಜವಾಬ್ದಾರಿ ಮತ್ತು ಉತ್ತಮ ಜೀವನ ಮೌಲ್ಯಗಳನ್ನೂ ಹೇಳಿಕೊಡಬೇಕು’ ಎಂದು ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ರಿಜಿಸ್ಟ್ರಾರ್ ಡಾ.ಎನ್.ಮೋಹನ್ ದಾಸ್ ಅಭಿಪ್ರಾಯಪಟ್ಟರು.<br /> <br /> ಐಐಎಸ್ಸಿ ಕೇಂದ್ರೀಯ ವಿದ್ಯಾಲಯದ 34ನೇ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ವಿಶ್ವದ ಬೇರಾವುದೇ ರಾಷ್ಟ್ರಗಳಿಗಿಂತ ಭಾರತದಲ್ಲಿ ಹೆಚ್ಚಿನ ಸಂಖ್ಯೆಯ ಯುವ ಜನರಿದ್ದಾರೆ. ಈ ವಿಚಾರದಲ್ಲಿ ಮುಂದಿನ ಹಲವು ವರ್ಷಗಳ ಕಾಲ ಭಾರತವನ್ನು ಹಿಂದಿಕ್ಕಲು ಬೇರಾವುದೇ ದೇಶಗಳಿಗೆ ಸಾಧ್ಯವಾಗುವುದಿಲ್ಲ’ ಎಂದು ಅವರು ಹೇಳಿದರು.<br /> <br /> ಪ್ರಾಂಶುಪಾಲ ಕೆ.ಎನ್.ಭಟ್ ಮಾತನಾಡಿ, ‘ನಮ್ಮ ವಿದ್ಯಾಲಯದ ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಮಾತ್ರವಲ್ಲದೇ ರಾಷ್ಟ್ರಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ’ ಎಂಧರು.<br /> <br /> ಸ್ವಾಮಿ ವಿವೇಕಾನಂದರ ಜೀವನ ಸಾಧನೆ ನಿರೂಪಿಸುವ ನೃತ್ಯ ನಾಟಕ, ವಿಶಿಷ್ಟ ಶೈಲಿಯ ಟರ್ಕಿ ಮತ್ತು ಫ್ಯೂಷನ್ ನೃತ್ಯ, ವೃದ್ಧಾಪ್ಯದ ಕಷ್ಟಗಳನ್ನು ವಿವರಿಸುವ ಆಂಗ್ಲ ನಾಟಕ, ವಿವಿಧ ರಾಜ್ಯಗಳ ನೃತ್ಯ ಪ್ರಕಾರಗಳ ಪ್ರದರ್ಶನವು ನೋಡುಗರ ಕಣ್ಮನ ಸೆಳೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>