<p>ಚಳ್ಳಕೆರೆ: ಮಣ್ಣು ಪರೀಕ್ಷೆ ಮಾಡಿಸಿ ರೈತರು ವ್ಯವಸಾಯ ಮಾಡುವುದರಿಂದ ಹೆಚ್ಚು ಇಳುವರಿಯನ್ನು ಪಡೆಯಬಹುದು ಎಂದು ಕೃಷಿ ಸಹಾಯಕ ನಿರ್ದೇಶಕಿ ಡಾ.ಜಿ.ಎಸ್.ಸ್ಫೂರ್ತಿ ಹೇಳಿದರು.<br /> <br /> ತಾಲ್ಲೂಕಿನ ಹಿರೇಹಳ್ಳಿಯಲ್ಲಿ ಬಬ್ಬೂರು ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ಇಲಾಖೆ ಈಚೆಗೆ ಆಯೋಜಿಸಿದ್ದ ವಿಶ್ವ ಮಣ್ಣು ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> ರೈತ ತನ್ನ ಜಮೀನಿನ ಮಣ್ಣನ್ನು ಆರೋಗ್ಯವಾಗಿಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು. ವ್ಶೆಜ್ಞಾನಿಕವಾಗಿ ಮಣ್ಣು ಪರೀಕ್ಷೆ ಮಾಡಿಸಿ ವ್ಯವಸಾಯವನ್ನು ಮಾಡಬೇಕು. ರಾಸಾಯನಿಕ ಗೊಬ್ಬರ ಅಧಿಕವಾಗಿ ಬಳಸುವುದರಿಂದ ಮಣ್ಣಿನ ಫಲವತ್ತತೆಗೆ ಹಾನಿಯುಂಟಾಗುತ್ತದೆ ಎಂದು ಹೇಳಿದರು.<br /> <br /> ಡಾ.ಸರ್ವಜ್ಞ ಸಾಲೀಮಠ ಮಾತನಾಡಿ, ರೈತರು ತಮ್ಮ ಜಮೀನಿನಲ್ಲಿರುವ ಮಣ್ಣನ್ನು ಪರೀಕ್ಷೆಗೊಳಪಡಿಸುವುದು ಅತ್ಯಂತ ಅವಶ್ಯಕವಾಗಿದೆ. ಮನುಷ್ಯನಲ್ಲಿ ರಕ್ತ ಕಡಿಮೆಯಾಗಿ ನಿಶ್ಯಕ್ತನಾಗುವಂತೆ ಮಣ್ಣಿನಲ್ಲಿ ಸಾವಯವ ಅಂಶ ಕಡಿಮೆಯಾದರೆ ಶಕ್ತಿ ಕಳೆದುಕೊಳ್ಳುತ್ತದೆ.<br /> <br /> ಮಣ್ಣಿನಲ್ಲಿನ ಪೋಷಕಾಂಶಗಳ ಕೊರತೆಯಿಂದ ಹೆಚ್ಚಿನ ಇಳುವರಿ ಪಡೆಯಲು ರೈತರು ವಿಫಲರಾಗುತ್ತಾರೆ. ಹೆಚ್ಚಿನ ಇಳುವರಿ ಪಡೆದು ಆರ್ಥಿಕವಾಗಿ ಸಬಲರಾಗಲು ವ್ಶೆಜ್ಞಾನಿಕವಾಗಿ ಲಭ್ಯವಿರುವ ಸೇವೆಯನ್ನು ಕೃಷಿ ವಿಜ್ಞಾನ ಕೇಂದ್ರದಿಂದ ಪಡೆದು ಬೆಳೆಯಲ್ಲಿ ಹೆಚ್ಚು ಇಳುವರಿಯನ್ನು ಪಡೆಯಿರಿ ಎಂದು ಸಲಹೆ ನೀಡಿದರು.<br /> <br /> ಕೃಷಿ ವಿಜ್ಞಾನ ಕೇಂದ್ರದ ಕಾರ್ಯಕ್ರಮ ಸಂಯೋಜಕ ಡಾ.ಡಿ.ಚಂದ್ರಪ್ಪ, ಜಿಪಂ ಸದಸ್ಯೆ ಲಕ್ಷೀದೇವಿ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಚಂದ್ರಪ್ಪ, ಸದಸ್ಯ ಚಂದ್ರಣ್ಣ ಕೃಷಿ ವಿಜ್ಞಾನ ಕೇಂದ್ರ ವಿಜ್ಞಾನಿ ಓಂಕಾರಪ್ಪ, ಕೃಷಿ ಅಧಿಕಾರಿ ಕಿರಣ್ ಕುಮಾರ್, ಆಂಜನೇಯ, ಧನಂಜಯ, ಬೈಯಣ್ಣ, ಜಯಣ್ಣ, ರುದ್ರಮುನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಳ್ಳಕೆರೆ: ಮಣ್ಣು ಪರೀಕ್ಷೆ ಮಾಡಿಸಿ ರೈತರು ವ್ಯವಸಾಯ ಮಾಡುವುದರಿಂದ ಹೆಚ್ಚು ಇಳುವರಿಯನ್ನು ಪಡೆಯಬಹುದು ಎಂದು ಕೃಷಿ ಸಹಾಯಕ ನಿರ್ದೇಶಕಿ ಡಾ.ಜಿ.ಎಸ್.ಸ್ಫೂರ್ತಿ ಹೇಳಿದರು.<br /> <br /> ತಾಲ್ಲೂಕಿನ ಹಿರೇಹಳ್ಳಿಯಲ್ಲಿ ಬಬ್ಬೂರು ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ಇಲಾಖೆ ಈಚೆಗೆ ಆಯೋಜಿಸಿದ್ದ ವಿಶ್ವ ಮಣ್ಣು ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> ರೈತ ತನ್ನ ಜಮೀನಿನ ಮಣ್ಣನ್ನು ಆರೋಗ್ಯವಾಗಿಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು. ವ್ಶೆಜ್ಞಾನಿಕವಾಗಿ ಮಣ್ಣು ಪರೀಕ್ಷೆ ಮಾಡಿಸಿ ವ್ಯವಸಾಯವನ್ನು ಮಾಡಬೇಕು. ರಾಸಾಯನಿಕ ಗೊಬ್ಬರ ಅಧಿಕವಾಗಿ ಬಳಸುವುದರಿಂದ ಮಣ್ಣಿನ ಫಲವತ್ತತೆಗೆ ಹಾನಿಯುಂಟಾಗುತ್ತದೆ ಎಂದು ಹೇಳಿದರು.<br /> <br /> ಡಾ.ಸರ್ವಜ್ಞ ಸಾಲೀಮಠ ಮಾತನಾಡಿ, ರೈತರು ತಮ್ಮ ಜಮೀನಿನಲ್ಲಿರುವ ಮಣ್ಣನ್ನು ಪರೀಕ್ಷೆಗೊಳಪಡಿಸುವುದು ಅತ್ಯಂತ ಅವಶ್ಯಕವಾಗಿದೆ. ಮನುಷ್ಯನಲ್ಲಿ ರಕ್ತ ಕಡಿಮೆಯಾಗಿ ನಿಶ್ಯಕ್ತನಾಗುವಂತೆ ಮಣ್ಣಿನಲ್ಲಿ ಸಾವಯವ ಅಂಶ ಕಡಿಮೆಯಾದರೆ ಶಕ್ತಿ ಕಳೆದುಕೊಳ್ಳುತ್ತದೆ.<br /> <br /> ಮಣ್ಣಿನಲ್ಲಿನ ಪೋಷಕಾಂಶಗಳ ಕೊರತೆಯಿಂದ ಹೆಚ್ಚಿನ ಇಳುವರಿ ಪಡೆಯಲು ರೈತರು ವಿಫಲರಾಗುತ್ತಾರೆ. ಹೆಚ್ಚಿನ ಇಳುವರಿ ಪಡೆದು ಆರ್ಥಿಕವಾಗಿ ಸಬಲರಾಗಲು ವ್ಶೆಜ್ಞಾನಿಕವಾಗಿ ಲಭ್ಯವಿರುವ ಸೇವೆಯನ್ನು ಕೃಷಿ ವಿಜ್ಞಾನ ಕೇಂದ್ರದಿಂದ ಪಡೆದು ಬೆಳೆಯಲ್ಲಿ ಹೆಚ್ಚು ಇಳುವರಿಯನ್ನು ಪಡೆಯಿರಿ ಎಂದು ಸಲಹೆ ನೀಡಿದರು.<br /> <br /> ಕೃಷಿ ವಿಜ್ಞಾನ ಕೇಂದ್ರದ ಕಾರ್ಯಕ್ರಮ ಸಂಯೋಜಕ ಡಾ.ಡಿ.ಚಂದ್ರಪ್ಪ, ಜಿಪಂ ಸದಸ್ಯೆ ಲಕ್ಷೀದೇವಿ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಚಂದ್ರಪ್ಪ, ಸದಸ್ಯ ಚಂದ್ರಣ್ಣ ಕೃಷಿ ವಿಜ್ಞಾನ ಕೇಂದ್ರ ವಿಜ್ಞಾನಿ ಓಂಕಾರಪ್ಪ, ಕೃಷಿ ಅಧಿಕಾರಿ ಕಿರಣ್ ಕುಮಾರ್, ಆಂಜನೇಯ, ಧನಂಜಯ, ಬೈಯಣ್ಣ, ಜಯಣ್ಣ, ರುದ್ರಮುನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>