<p><strong>ನೆಲಮಂಗಲ: </strong>‘ಮಧ್ಯರಾತ್ರಿವರೆಗೂ ಬಾರ್ ಮತ್ತು ರೆಸ್ಟೊರೆಂಟ್ಗಳನ್ನು ತೆರೆಯಲು ಅವಕಾಶ ನೀಡಿರುವುದು ಸರಿಯಲ್ಲ ಎಂದು ನಿವೃತ್ತ ಪೊಲೀಸ್ ಆಯುಕ್ತ ಜ್ಯೋತಿ ಪ್ರಕಾಶ್ ಮಿರ್ಜಿ ಅಭಿಪ್ರಾಯಪಟ್ಟರು.<br /> <br /> ಇಲ್ಲಿಗೆ ಸಮೀಪದ ಹಂಚಿಪುರದಲ್ಲಿ ಚಾಮುಂಡೇಶ್ವರಿ ಸ್ಪೋರ್ಟ್ಸ್ ಕ್ಲಬ್ ಏರ್ಪಡಿಸಿದ್ದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಜೇತರಾದವರಿಗೆ ₨25,555 ನಗದು ಮತ್ತು ಟ್ರೋಫಿ ವಿತರಿಸಿ ಮಾತನಾಡಿದರು.<br /> <br /> ‘ತಡರಾತ್ರಿವರೆಗೆ ಬಾರ್ಗಳು ತೆರೆಯುವುದರಿಂದ ಎಟಿಎಂ ಕಳ್ಳತನ, ಸರಗಳವು ಸೇರಿದಂತೆ ಅಪರಾಧ ಪ್ರಕರಣಗಳು ಹೆಚ್ಚುತ್ತವೆ. ಅವುಗಳನ್ನು ನಿಯಂತ್ರಿಸಲು ಪೊಲೀಸರು ಮತ್ತು ಬಾರ್ ಕಾರ್ಮಿಕರಿಗೆ ಕಷ್ಟ’ ಎಂದರು.<br /> <br /> ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷ ಸಚ್ಚಿದಾನಂದಮೂರ್ತಿ ವಿವಿಧ ಬಹುಮಾನಗಳನ್ನು ವಿತರಿಸಿದರು. ಗ್ರಾ. ಪಂ. ಅಧ್ಯಕ್ಷ ಸುರೇಶ್, ತಾಲ್ಲೂಕು ಪಂಚಾಯ್ತಿ ಮಾಜಿ ಸದಸ್ಯ ಸಂಪತ್, ಮಾಜಿ ಅಧ್ಯಕ್ಷ ಬೈರೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ: </strong>‘ಮಧ್ಯರಾತ್ರಿವರೆಗೂ ಬಾರ್ ಮತ್ತು ರೆಸ್ಟೊರೆಂಟ್ಗಳನ್ನು ತೆರೆಯಲು ಅವಕಾಶ ನೀಡಿರುವುದು ಸರಿಯಲ್ಲ ಎಂದು ನಿವೃತ್ತ ಪೊಲೀಸ್ ಆಯುಕ್ತ ಜ್ಯೋತಿ ಪ್ರಕಾಶ್ ಮಿರ್ಜಿ ಅಭಿಪ್ರಾಯಪಟ್ಟರು.<br /> <br /> ಇಲ್ಲಿಗೆ ಸಮೀಪದ ಹಂಚಿಪುರದಲ್ಲಿ ಚಾಮುಂಡೇಶ್ವರಿ ಸ್ಪೋರ್ಟ್ಸ್ ಕ್ಲಬ್ ಏರ್ಪಡಿಸಿದ್ದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಜೇತರಾದವರಿಗೆ ₨25,555 ನಗದು ಮತ್ತು ಟ್ರೋಫಿ ವಿತರಿಸಿ ಮಾತನಾಡಿದರು.<br /> <br /> ‘ತಡರಾತ್ರಿವರೆಗೆ ಬಾರ್ಗಳು ತೆರೆಯುವುದರಿಂದ ಎಟಿಎಂ ಕಳ್ಳತನ, ಸರಗಳವು ಸೇರಿದಂತೆ ಅಪರಾಧ ಪ್ರಕರಣಗಳು ಹೆಚ್ಚುತ್ತವೆ. ಅವುಗಳನ್ನು ನಿಯಂತ್ರಿಸಲು ಪೊಲೀಸರು ಮತ್ತು ಬಾರ್ ಕಾರ್ಮಿಕರಿಗೆ ಕಷ್ಟ’ ಎಂದರು.<br /> <br /> ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷ ಸಚ್ಚಿದಾನಂದಮೂರ್ತಿ ವಿವಿಧ ಬಹುಮಾನಗಳನ್ನು ವಿತರಿಸಿದರು. ಗ್ರಾ. ಪಂ. ಅಧ್ಯಕ್ಷ ಸುರೇಶ್, ತಾಲ್ಲೂಕು ಪಂಚಾಯ್ತಿ ಮಾಜಿ ಸದಸ್ಯ ಸಂಪತ್, ಮಾಜಿ ಅಧ್ಯಕ್ಷ ಬೈರೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>