<p>ಚಾಮರಾಜನಗರ: ‘ಮಹಿಳೆ ತನ್ನಲ್ಲಿರುವ ತ್ಯಾಗ ಮನೋಭಾವದಿಂದ ಎಲ್ಲರ ಮನಸ್ಸನ್ನು ಗೆದ್ದಿದ್ದಾಳೆ’ ಎಂದು ಸಂತ ಪೌಲರ ದೇವಾಲಯದ ಧರ್ಮಗುರು ಕ್ರಿಸ್ಟಿ ಸ್ಯಾಂ ಹೇಳಿದರು. ನಗರದ ಸಂತ ಜೋಸೆಫರ ಸೇವಾ ಸಂಸ್ಥೆಯಿಂದ ಈಚೆಗೆ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಕುಟುಂಬದಲ್ಲಿ ಹೆಣ್ಣಿನ ಪಾತ್ರ ಹೆಚ್ಚಿದೆ. ಹಿಂದೆ ಮಹಿಳೆಯರು ನಾಲ್ಕು ಗೋಡೆಗೆ ಸೀಮಿತರಾಗಿದ್ದರು. ಪ್ರಸ್ತುತ ಎಲ್ಲ ಕ್ಷೇತ್ರದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಮಹಿಳೆ ಅಭಿವೃದ್ಧಿ ಹೊಂದಿದರೆ ಮಾತ್ರ ಕುಟುಂಬ ಪ್ರಗತಿ ಕಾಣಲಿದೆ ಎಂದು ಹೇಳಿದರು.<br /> <br /> ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಜಿಲ್ಲಾ ಸಂಚಾಲಕಿ ರಮಾ ಮಾತನಾಡಿ, ಆಧುನಿಕಯುಗದಲ್ಲಿ ಮಹಿಳೆಯರು ಪುರುಷನಿಗೆ ಸರಿಸಮಾನವಾಗಿ ಎಲ್ಲ ರಂಗದಲ್ಲೂ ಛಾಪು ಮೂಡಿಸುತ್ತಿದ್ದಾರೆ ಎಂದು ಹೇಳಿದರು.<br /> <br /> ಪರಕೀಯರೊಂದಿಗೆ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ವೀರ ಮಹಿಳೆಯರನ್ನು ನಾವಿಂದು ಸ್ಮರಿಸಬೇಕಾಗಿದೆ ಎಂದ ಅವರು, ಮಹಿಳೆಯರು ಸ್ತ್ರೀಶಕ್ತಿ ಸಂಘಗಳ ಮೂಲಕ ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ ಎಂದರು.<br /> <br /> ಎಸ್ಎಂಎಂಐ ಸಂಸ್ಥೆ ಮುಖ್ಯಸ್ಥೆ ಆಲಿನ್ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ಆಲಿನ್, ರಮಾ, ರಜಿನಾ, ಮಹದೇವಮ್ಮ ಅವರನ್ನು ಸನ್ಮಾನಿಸಲಾಯಿತು.<br /> <br /> ಕಾರ್ಯಕ್ರಮದಲ್ಲಿ ಸಂತ ಜೋಸೆಫರ ಶಾಲೆಯ ಮುಖ್ಯೋಪಾಧ್ಯಾಯಿನಿ ಉತ್ತರಿಕಾ ಮೇರಿ, ರಜಿನಾ, ಅನ್ನಮೇರಿ, ಅಸಂತ, ರಜಿನಾ, ಫ್ಲೋರಿನಾ, ನಾಗೇಶ್ ಸೋಸ್ಲೆ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: ‘ಮಹಿಳೆ ತನ್ನಲ್ಲಿರುವ ತ್ಯಾಗ ಮನೋಭಾವದಿಂದ ಎಲ್ಲರ ಮನಸ್ಸನ್ನು ಗೆದ್ದಿದ್ದಾಳೆ’ ಎಂದು ಸಂತ ಪೌಲರ ದೇವಾಲಯದ ಧರ್ಮಗುರು ಕ್ರಿಸ್ಟಿ ಸ್ಯಾಂ ಹೇಳಿದರು. ನಗರದ ಸಂತ ಜೋಸೆಫರ ಸೇವಾ ಸಂಸ್ಥೆಯಿಂದ ಈಚೆಗೆ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಕುಟುಂಬದಲ್ಲಿ ಹೆಣ್ಣಿನ ಪಾತ್ರ ಹೆಚ್ಚಿದೆ. ಹಿಂದೆ ಮಹಿಳೆಯರು ನಾಲ್ಕು ಗೋಡೆಗೆ ಸೀಮಿತರಾಗಿದ್ದರು. ಪ್ರಸ್ತುತ ಎಲ್ಲ ಕ್ಷೇತ್ರದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಮಹಿಳೆ ಅಭಿವೃದ್ಧಿ ಹೊಂದಿದರೆ ಮಾತ್ರ ಕುಟುಂಬ ಪ್ರಗತಿ ಕಾಣಲಿದೆ ಎಂದು ಹೇಳಿದರು.<br /> <br /> ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಜಿಲ್ಲಾ ಸಂಚಾಲಕಿ ರಮಾ ಮಾತನಾಡಿ, ಆಧುನಿಕಯುಗದಲ್ಲಿ ಮಹಿಳೆಯರು ಪುರುಷನಿಗೆ ಸರಿಸಮಾನವಾಗಿ ಎಲ್ಲ ರಂಗದಲ್ಲೂ ಛಾಪು ಮೂಡಿಸುತ್ತಿದ್ದಾರೆ ಎಂದು ಹೇಳಿದರು.<br /> <br /> ಪರಕೀಯರೊಂದಿಗೆ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ವೀರ ಮಹಿಳೆಯರನ್ನು ನಾವಿಂದು ಸ್ಮರಿಸಬೇಕಾಗಿದೆ ಎಂದ ಅವರು, ಮಹಿಳೆಯರು ಸ್ತ್ರೀಶಕ್ತಿ ಸಂಘಗಳ ಮೂಲಕ ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ ಎಂದರು.<br /> <br /> ಎಸ್ಎಂಎಂಐ ಸಂಸ್ಥೆ ಮುಖ್ಯಸ್ಥೆ ಆಲಿನ್ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ಆಲಿನ್, ರಮಾ, ರಜಿನಾ, ಮಹದೇವಮ್ಮ ಅವರನ್ನು ಸನ್ಮಾನಿಸಲಾಯಿತು.<br /> <br /> ಕಾರ್ಯಕ್ರಮದಲ್ಲಿ ಸಂತ ಜೋಸೆಫರ ಶಾಲೆಯ ಮುಖ್ಯೋಪಾಧ್ಯಾಯಿನಿ ಉತ್ತರಿಕಾ ಮೇರಿ, ರಜಿನಾ, ಅನ್ನಮೇರಿ, ಅಸಂತ, ರಜಿನಾ, ಫ್ಲೋರಿನಾ, ನಾಗೇಶ್ ಸೋಸ್ಲೆ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>