<p><strong>ಶಿವಮೊಗ್ಗ: </strong>ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ಶಿಫಾರಸ್ಸಿನಂತೆ ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಕಲ್ಪಿಸಬೇಕೆಂದು ಒತ್ತಾಯಿಸಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಅರೆಬೆತ್ತಲೆ ಪ್ರತಿಭಟನೆ ನಡೆಸಿತು.<br /> <br /> ಸದಾಶಿವ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಿ ಈಗಾಗಲೇ ವರ್ಷ ಕಳೆದಿದೆ. ಈ ವರದಿಯಲ್ಲಿ ಮಾದಿಗ ಸಮಾಜಕ್ಕೆ ಅಥವಾ ಇತರ ಸಮಾಜಕ್ಕೆ ಮೀಸಲಾತಿಯಲ್ಲಿ ಆಗುತ್ತಿದ್ದ ತಾರತಮ್ಯ ಪರಿಶಿಷ್ಟ ಜಾತಿಗಳಲ್ಲಿನ ಇತರೆ ಎಲ್ಲ ಜಾತಿಗಳಿಗಿಂತ ಹೆಚ್ಚಾಗಿದೆ ಎಂದು ತಿಳಿಸಿದೆ.<br /> <br /> ಹಾಗೆಯೇ ಶೇ. 6ರಷ್ಟು ಒಳ ಮೀಸಲಾತಿ ಕಲ್ಪಿಸುವಂತೆ ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಇದುವರೆಗೂ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ಹಿಂದಿನ ಸರ್ಕಾರ, ವರದಿಯಲ್ಲಿನ ಶಿಫಾರಸು ಅನುಷ್ಠಾನಕ್ಕೆ ಯಾವುದೇ ಕ್ರಮಕೈಗೊಳ್ಳದೆ, ನಿರ್ಲಕ್ಷ್ಯವಹಿಸಿತ್ತು. ಈ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಿತಿಯ ಶಿಫಾರಸು ಜಾರಿಗೊಳಿಸಬೇಕು. ಈ ಮೂಲಕ ಮಾದಿಗ ಸಮುದಾಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.<br /> <br /> ಪ್ರತಿಭಟನೆಯ ನೇತೃತ್ವವನ್ನು ಸಮಿತಿಯ ಜಿಲ್ಲಾ ಗೌರವಾಧ್ಯಕ್ಷ ಬಿ.ಎ.ಭಾನುಪ್ರಸಾದ್, ಜಿಲ್ಲಾಧ್ಯಕ್ಷ ಗಂಗಾಧರ್, ಪ್ರಧಾನ ಕಾರ್ಯದರ್ಶಿ ಆರ್.ರಂಗನಾಥ್, ಮುಖಂಡರಾದ ರಾಮಚಂದ್ರ, ವೆಂಕಟೇಶ್, ಯಶವಂತ್, ವೆಂಕಟೇಶ್, ಹರೀಶ್ಬಾಬು, ಸೆಂದಿಲ್ ಕುಮಾರ್, ರಾಮು ಮತ್ತಿತರರು ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ಶಿಫಾರಸ್ಸಿನಂತೆ ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಕಲ್ಪಿಸಬೇಕೆಂದು ಒತ್ತಾಯಿಸಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಅರೆಬೆತ್ತಲೆ ಪ್ರತಿಭಟನೆ ನಡೆಸಿತು.<br /> <br /> ಸದಾಶಿವ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಿ ಈಗಾಗಲೇ ವರ್ಷ ಕಳೆದಿದೆ. ಈ ವರದಿಯಲ್ಲಿ ಮಾದಿಗ ಸಮಾಜಕ್ಕೆ ಅಥವಾ ಇತರ ಸಮಾಜಕ್ಕೆ ಮೀಸಲಾತಿಯಲ್ಲಿ ಆಗುತ್ತಿದ್ದ ತಾರತಮ್ಯ ಪರಿಶಿಷ್ಟ ಜಾತಿಗಳಲ್ಲಿನ ಇತರೆ ಎಲ್ಲ ಜಾತಿಗಳಿಗಿಂತ ಹೆಚ್ಚಾಗಿದೆ ಎಂದು ತಿಳಿಸಿದೆ.<br /> <br /> ಹಾಗೆಯೇ ಶೇ. 6ರಷ್ಟು ಒಳ ಮೀಸಲಾತಿ ಕಲ್ಪಿಸುವಂತೆ ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಇದುವರೆಗೂ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ಹಿಂದಿನ ಸರ್ಕಾರ, ವರದಿಯಲ್ಲಿನ ಶಿಫಾರಸು ಅನುಷ್ಠಾನಕ್ಕೆ ಯಾವುದೇ ಕ್ರಮಕೈಗೊಳ್ಳದೆ, ನಿರ್ಲಕ್ಷ್ಯವಹಿಸಿತ್ತು. ಈ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಿತಿಯ ಶಿಫಾರಸು ಜಾರಿಗೊಳಿಸಬೇಕು. ಈ ಮೂಲಕ ಮಾದಿಗ ಸಮುದಾಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.<br /> <br /> ಪ್ರತಿಭಟನೆಯ ನೇತೃತ್ವವನ್ನು ಸಮಿತಿಯ ಜಿಲ್ಲಾ ಗೌರವಾಧ್ಯಕ್ಷ ಬಿ.ಎ.ಭಾನುಪ್ರಸಾದ್, ಜಿಲ್ಲಾಧ್ಯಕ್ಷ ಗಂಗಾಧರ್, ಪ್ರಧಾನ ಕಾರ್ಯದರ್ಶಿ ಆರ್.ರಂಗನಾಥ್, ಮುಖಂಡರಾದ ರಾಮಚಂದ್ರ, ವೆಂಕಟೇಶ್, ಯಶವಂತ್, ವೆಂಕಟೇಶ್, ಹರೀಶ್ಬಾಬು, ಸೆಂದಿಲ್ ಕುಮಾರ್, ರಾಮು ಮತ್ತಿತರರು ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>