<p><strong>ಬ್ರಹ್ಮಾವರ: </strong>ಹಿರಿಯರ ಮಾರ್ಗದರ್ಶನ, ಸಲಹೆ ಸೂಚನೆಗಳಿಂದ ಸಂಘಟನೆ ಬೆಳೆಯಲು ಸಾಧ್ಯ ಎಂದು ಕೀರ್ತಿನಗರದ ರಾಘವೇಂದ್ರ ಭಜನಾ ಮಂದಿರದ ಆಡಳಿತ ಮೊಕ್ತೇಸರ ಕುಮಾರ್ ಶೆಟ್ಟಿ ಹೇಳಿದರು.<br /> <br /> ಕುಂಜಾಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರೂರು ಕೀರ್ತಿನಗರದಲ್ಲಿ ಶನಿವಾರ ಅವರು ಸ್ಪಂದನ ಯುವ ವೃಂದವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಗ್ರಾಮಾಂತರ ಪ್ರದೇಶದ ಅಭಿವೃದ್ಧಿಗೆ ಸಹಕಾರಿಯಾಗುವ ಯುವ ಸಂಘಟನೆಗಳು ಅಲ್ಲಿಯ ಪ್ರತಿಭೆಗಳನ್ನು ಹೊರತರುವ ಪ್ರಯತ್ನವನ್ನೂ ಮಾಡುತ್ತಿರುವುದು ಶ್ಲಾಘನೀಯ. ಯುವಸಂಘಟನೆಗಳು ಮನೋರಂಜನೆಗೆ ಸೀಮಿತವಾಗಿರದೆ ಸಮಾಜಸೇವೆಯಲ್ಲೂ ಸಕ್ರಿಯವಾಗಿರಬೇಕು ಎಂದು ಅವರು ಸಲಹೆ ನೀಡಿದರು.<br /> <br /> ಕುಂಜಾಲು ಗ್ರಾ.ಪಂ ಮಾಜಿ ಉಪಾಧ್ಯಕ್ಷ ರಾಜೀವ ಕುಲಾಲ ಅಧ್ಯಕ್ಷತೆ ವಹಿಸಿದ್ದರು.<br /> <br /> ಜಿ.ಪಂ. ಸದಸ್ಯೆ ಗೋಪಿ ಕೆ. ನಾಯ್ಕ, ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಜ್ಯೋತಿ ನಾಯ್ಕ, ಕುಂಜಾಲು ಗ್ರಾ.ಪಂ ಮಾಜಿ ಅಧ್ಯಕ್ಷ ರಘುರಾಮ್ ಶೆಟ್ಟಿ, ಯುವ ವೃಂದದ ನೂತನ ಅಧ್ಯಕ್ಷ ಚಂದ್ರಶೇಖರ್ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.<br /> <br /> ಸಮಾರಂಭದಲ್ಲಿ ಶತಾಯುಷಿ ಕುರ್ಡುಂಜೆ ಕೊರಗಯ್ಯ ಶೆಟ್ಟಿ ದಂಪತಿ, ನಾಟಿ ವೈದ್ಯ ಬಾಬು ನಾಯ್ಕ ಮತ್ತು ತಂದೂರಿ ಬಟ್ಟಿ ತಯಾರಕ ಮಂಜು ಕುಲಾಲ್ ಅವರನ್ನು ಸನ್ಮಾನಿಸಲಾಯಿತು.<br /> <br /> ಯುವ ವೃಂದದ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ದೈಹಿಕ ಶಿಕ್ಷಕ ಶ್ರೀಕಾಂತ್ ಸಾಮಂತ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ರಹ್ಮಾವರ: </strong>ಹಿರಿಯರ ಮಾರ್ಗದರ್ಶನ, ಸಲಹೆ ಸೂಚನೆಗಳಿಂದ ಸಂಘಟನೆ ಬೆಳೆಯಲು ಸಾಧ್ಯ ಎಂದು ಕೀರ್ತಿನಗರದ ರಾಘವೇಂದ್ರ ಭಜನಾ ಮಂದಿರದ ಆಡಳಿತ ಮೊಕ್ತೇಸರ ಕುಮಾರ್ ಶೆಟ್ಟಿ ಹೇಳಿದರು.<br /> <br /> ಕುಂಜಾಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರೂರು ಕೀರ್ತಿನಗರದಲ್ಲಿ ಶನಿವಾರ ಅವರು ಸ್ಪಂದನ ಯುವ ವೃಂದವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಗ್ರಾಮಾಂತರ ಪ್ರದೇಶದ ಅಭಿವೃದ್ಧಿಗೆ ಸಹಕಾರಿಯಾಗುವ ಯುವ ಸಂಘಟನೆಗಳು ಅಲ್ಲಿಯ ಪ್ರತಿಭೆಗಳನ್ನು ಹೊರತರುವ ಪ್ರಯತ್ನವನ್ನೂ ಮಾಡುತ್ತಿರುವುದು ಶ್ಲಾಘನೀಯ. ಯುವಸಂಘಟನೆಗಳು ಮನೋರಂಜನೆಗೆ ಸೀಮಿತವಾಗಿರದೆ ಸಮಾಜಸೇವೆಯಲ್ಲೂ ಸಕ್ರಿಯವಾಗಿರಬೇಕು ಎಂದು ಅವರು ಸಲಹೆ ನೀಡಿದರು.<br /> <br /> ಕುಂಜಾಲು ಗ್ರಾ.ಪಂ ಮಾಜಿ ಉಪಾಧ್ಯಕ್ಷ ರಾಜೀವ ಕುಲಾಲ ಅಧ್ಯಕ್ಷತೆ ವಹಿಸಿದ್ದರು.<br /> <br /> ಜಿ.ಪಂ. ಸದಸ್ಯೆ ಗೋಪಿ ಕೆ. ನಾಯ್ಕ, ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಜ್ಯೋತಿ ನಾಯ್ಕ, ಕುಂಜಾಲು ಗ್ರಾ.ಪಂ ಮಾಜಿ ಅಧ್ಯಕ್ಷ ರಘುರಾಮ್ ಶೆಟ್ಟಿ, ಯುವ ವೃಂದದ ನೂತನ ಅಧ್ಯಕ್ಷ ಚಂದ್ರಶೇಖರ್ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.<br /> <br /> ಸಮಾರಂಭದಲ್ಲಿ ಶತಾಯುಷಿ ಕುರ್ಡುಂಜೆ ಕೊರಗಯ್ಯ ಶೆಟ್ಟಿ ದಂಪತಿ, ನಾಟಿ ವೈದ್ಯ ಬಾಬು ನಾಯ್ಕ ಮತ್ತು ತಂದೂರಿ ಬಟ್ಟಿ ತಯಾರಕ ಮಂಜು ಕುಲಾಲ್ ಅವರನ್ನು ಸನ್ಮಾನಿಸಲಾಯಿತು.<br /> <br /> ಯುವ ವೃಂದದ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ದೈಹಿಕ ಶಿಕ್ಷಕ ಶ್ರೀಕಾಂತ್ ಸಾಮಂತ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>