<p><strong>ಬೀದರ್:</strong> ‘ಮಾಹಿತಿ ಹಕ್ಕು ಕಾಯ್ದೆ ಜಾರಿಯಾಗಿ ಎಂಟು ವರ್ಷಗಳೇ ಕಳೆದಿವೆ. ಆದರೂ ಕಾಯ್ದೆ ಕುರಿತು ಕಾರ್ಯಾಗಾರ ನಡೆಯುತ್ತದೆ ಎಂದರೆ ಇನ್ನೂ ಆಡಳಿತ ವ್ಯವಸ್ಥೆಯಲ್ಲಿ ಮಾಹಿತಿ ಹಕ್ಕು ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೆ ಬಂದಿಲ್ಲ ಎಂಬುದಕ್ಕೆ ನಿದರ್ಶನ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಶಿವಯ್ಯ ಹೇಳಿದರು.<br /> <br /> ಜಿಲ್ಲಾಡಳಿತ ಹಾಗೂ ಮೈಸೂರು ಆಡಳಿತ ತರಬೇತಿ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳಿಗೆ ನಗರದ ರಂಗಮಂದಿರದಲ್ಲಿ ಆಯೋಜಿಸಿದ್ದ ‘ಮಾಹಿತಿ ಹಕ್ಕು ಕಾಯ್ದೆ–2005’ ಕುರಿತ ಎರಡು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.<br /> <br /> ‘ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಕಚೇರಿಗೆ ಯಾವುದಾದರೂ ಒಂದು ಅರ್ಜಿ ಬಂದರೂ ಕಚೇರಿಯ ಅಧಿಕಾರಿಗಳು ಭಯ ಪಡುತ್ತಿದ್ದಾರೆ. ಒಂದು ವೇಳೆ ಮಾಹಿತಿ ಸರಿಯಾದ ಸಮಯಕ್ಕೆ ನೀಡದಿದ್ದಲ್ಲಿ ದಂಡ ವಿಧಿಸಲಾಗುತ್ತದೆ ಎನ್ನುವ ಭಯ ಇದಕ್ಕೆ ಕಾರಣ’ ಎಂದು ತಿಳಿಸಿದರು.<br /> <br /> ‘ಸಾರ್ವಜನಿಕರು ಕಾಯ್ದೆ ಮೂಲಕ ಮಾಹಿತಿ ಪಡೆಯಲು ಆಸಕ್ತಿ ಹೊಂದಿದ್ದಾರೆ. ಅಧಿಕಾರಿಗಳು ಕಾಯ್ದೆಯನ್ನು ಅರ್ಥ ಮಾಡಿಕೊಂಡು ಪರಿಣಾಮಕಾರಿಯಾಗಿ ಜಾರಿಗೆ ತರಲು ಒತ್ತು ನೀಡಬೇಕು. ಕಾಯ್ದೆ ಕುರಿತು ತಿಳಿಯದಿದ್ದಲ್ಲಿ ಅನುಭವಿಗಳನ್ನು ಕೇಳಿ ತಿಳಿದುಕೊಳ್ಳಬೇಕು’ ಎಂದರು.<br /> <br /> ಜಿಲ್ಲಾ ತರಬೇತಿ ಸಂಸ್ಥೆಯ ಉಪ ಪ್ರಾಚಾರ್ಯ ಬಿ.ಎಸ್.ಸ್ವಾಮಿ, ಮೈಸೂರಿನ ಜಿ.ಮಲ್ಲೇಶ್ವರಪ್ಪ, ಜಿ.ಜಿ. ಹೆಗಡೆ ಉಪಸ್ಥಿತರಿದ್ದರು.<br /> ನಂತರ ನಡೆದ ಕಾರ್ಯಾಗಾರದಲ್ಲಿ ಕಾಯ್ದೆ ಕುರಿತ ವಿವಿಧ ಪ್ರಶ್ನೆಗಳಿಗೆ ಉತ್ತರಿಸಿದ ರಾಜ್ಯ ನಗರಾಭಿವೃದ್ಧಿ ಸಂಸ್ಥೆಯ ಸಿ.ಅಶೋಕ, ಯಾವುದೇ ರಜೆ ಅಥವಾ ಭಾನುವಾರ ಇದ್ದರೂ, ನಾಗರಿಕರು ಅರ್ಜಿ ಸಲ್ಲಿಸಿದ ದಿನದಿಂದ 30 ದಿನಗಳ ಒಳಗೆ ತಪ್ಪದೇ ಮಾಹಿತಿ ನೀಡಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ಮಾಹಿತಿ ಹಕ್ಕು ಕಾಯ್ದೆ ಜಾರಿಯಾಗಿ ಎಂಟು ವರ್ಷಗಳೇ ಕಳೆದಿವೆ. ಆದರೂ ಕಾಯ್ದೆ ಕುರಿತು ಕಾರ್ಯಾಗಾರ ನಡೆಯುತ್ತದೆ ಎಂದರೆ ಇನ್ನೂ ಆಡಳಿತ ವ್ಯವಸ್ಥೆಯಲ್ಲಿ ಮಾಹಿತಿ ಹಕ್ಕು ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೆ ಬಂದಿಲ್ಲ ಎಂಬುದಕ್ಕೆ ನಿದರ್ಶನ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಶಿವಯ್ಯ ಹೇಳಿದರು.<br /> <br /> ಜಿಲ್ಲಾಡಳಿತ ಹಾಗೂ ಮೈಸೂರು ಆಡಳಿತ ತರಬೇತಿ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳಿಗೆ ನಗರದ ರಂಗಮಂದಿರದಲ್ಲಿ ಆಯೋಜಿಸಿದ್ದ ‘ಮಾಹಿತಿ ಹಕ್ಕು ಕಾಯ್ದೆ–2005’ ಕುರಿತ ಎರಡು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.<br /> <br /> ‘ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಕಚೇರಿಗೆ ಯಾವುದಾದರೂ ಒಂದು ಅರ್ಜಿ ಬಂದರೂ ಕಚೇರಿಯ ಅಧಿಕಾರಿಗಳು ಭಯ ಪಡುತ್ತಿದ್ದಾರೆ. ಒಂದು ವೇಳೆ ಮಾಹಿತಿ ಸರಿಯಾದ ಸಮಯಕ್ಕೆ ನೀಡದಿದ್ದಲ್ಲಿ ದಂಡ ವಿಧಿಸಲಾಗುತ್ತದೆ ಎನ್ನುವ ಭಯ ಇದಕ್ಕೆ ಕಾರಣ’ ಎಂದು ತಿಳಿಸಿದರು.<br /> <br /> ‘ಸಾರ್ವಜನಿಕರು ಕಾಯ್ದೆ ಮೂಲಕ ಮಾಹಿತಿ ಪಡೆಯಲು ಆಸಕ್ತಿ ಹೊಂದಿದ್ದಾರೆ. ಅಧಿಕಾರಿಗಳು ಕಾಯ್ದೆಯನ್ನು ಅರ್ಥ ಮಾಡಿಕೊಂಡು ಪರಿಣಾಮಕಾರಿಯಾಗಿ ಜಾರಿಗೆ ತರಲು ಒತ್ತು ನೀಡಬೇಕು. ಕಾಯ್ದೆ ಕುರಿತು ತಿಳಿಯದಿದ್ದಲ್ಲಿ ಅನುಭವಿಗಳನ್ನು ಕೇಳಿ ತಿಳಿದುಕೊಳ್ಳಬೇಕು’ ಎಂದರು.<br /> <br /> ಜಿಲ್ಲಾ ತರಬೇತಿ ಸಂಸ್ಥೆಯ ಉಪ ಪ್ರಾಚಾರ್ಯ ಬಿ.ಎಸ್.ಸ್ವಾಮಿ, ಮೈಸೂರಿನ ಜಿ.ಮಲ್ಲೇಶ್ವರಪ್ಪ, ಜಿ.ಜಿ. ಹೆಗಡೆ ಉಪಸ್ಥಿತರಿದ್ದರು.<br /> ನಂತರ ನಡೆದ ಕಾರ್ಯಾಗಾರದಲ್ಲಿ ಕಾಯ್ದೆ ಕುರಿತ ವಿವಿಧ ಪ್ರಶ್ನೆಗಳಿಗೆ ಉತ್ತರಿಸಿದ ರಾಜ್ಯ ನಗರಾಭಿವೃದ್ಧಿ ಸಂಸ್ಥೆಯ ಸಿ.ಅಶೋಕ, ಯಾವುದೇ ರಜೆ ಅಥವಾ ಭಾನುವಾರ ಇದ್ದರೂ, ನಾಗರಿಕರು ಅರ್ಜಿ ಸಲ್ಲಿಸಿದ ದಿನದಿಂದ 30 ದಿನಗಳ ಒಳಗೆ ತಪ್ಪದೇ ಮಾಹಿತಿ ನೀಡಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>