<p>ಬೀದರ್: ರಾಷ್ಟ್ರೀಯ ಜನಪದ ಸಾಹಿತ್ಯ ಸಮ್ಮೇಳನ ಮಾ. 26 ರಿಂದ 28ರವರೆಗೆ ನಗರದ ಜಿಲ್ಲಾ ರಂಗಮಂದಿರದಲ್ಲಿ ನಡೆಯಲಿದೆ ಎಂದು ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ. ಬಸವರಾಜ ಪಾಟೀಲ್ ಅಷ್ಟೂರು ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಸಮ್ಮೇಳನದ ವಿವರ ನೀಡಿದರು.<br /> <br /> ಮಾ. 26 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ರಂಗಮಂದಿರದಲ್ಲಿ ಜನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಂಬಳಿಕೆ ಹಿರಿಯಣ್ಣ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.<br /> <br /> ಅಂದು ಮಧ್ಯಾಹ್ನ 3ಕ್ಕೆ ಜನಪದ ಕಲಾ ತಂಡಗಳ ಪ್ರದರ್ಶನವಿದ್ದು, 24 ಕಲಾ ತಂಡಗಳು ಪ್ರದರ್ಶನ ನೀಡಲಿವೆ ಎಂದು ಹೇಳಿದರು.<br /> ಮಾ.27 ರಂದು ಬೆಳಿಗ್ಗೆ 9 ಗಂಟೆಗೆ ಬೀದರ್ ಜಿಲ್ಲೆಯ ಜನಪದ ಕುರಿತ ಮೊದಲ ಗೋಷ್ಠಿ, ಬೆಳಿಗ್ಗೆ 11.30 ಗಂಟೆಗೆ ಹೈದರಾಬಾದ್ ಕರ್ನಾಟಕ ಭಜನೆ ಹಾಡುಗಳು ಕುರಿತ ಎರಡನೇ ಗೋಷ್ಠಿ, ಮಧ್ಯಾಹ್ನ ಭಾರತದ ಜನಪದ ರಂಗಕಲೆಗಳು ಕುರಿತ ಮೂರನೇ ಗೋಷ್ಠಿ ನಡೆಯಲಿದೆ ಎಂದು ತಿಳಿಸಿದರು.<br /> <br /> ಮಾ.28 ರಂದು ಬೆಳಿಗ್ಗೆ 9 ಗಂಟೆಗೆ ಜನಪದ ಕಲೆಗಳ ಪರಿಷ್ಕರಣೆ ಅಗತ್ಯತೆ ಕುರಿತ ನಾಲ್ಕನೇ ಗೋಷ್ಠಿ, ಬೆಳಿಗ್ಗೆ 11.30 ಗಂಟೆಗೆ ಕರ್ನಾಟಕ ಜನಪದ ಸಾಹಿತ್ಯ ಸಂಶೋಧನೆ ಕುರಿತ ಐದನೇ ಗೋಷ್ಠಿ ಜರುಗಲಿದೆ. ಮಧ್ಯಾಹ್ನ 3 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಹೇಳಿದರು.<br /> <br /> ಸಮ್ಮೇಳನದಲ್ಲಿ ಜನಪದ ಕ್ಷೇತ್ರದಲ್ಲಿ ಸಾಧನೆಗೈದ 26 ಜನರಿಗೆ ಜನಪದ ಕಾರಂಜಿ, ಜನಪದ ದೀಪ್ತಿ, ಜನಪದ ಸಂಜೀವಿನಿ ಹಾಗೂ ಜನಪದ ಜ್ಯೋತಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.<br /> <br /> ರಾಷ್ಟ್ರೀಯ ಜನಪದ ಸಾಹಿತ್ಯ ಸಮ್ಮೇಳನದ ಸಂಚಾಲಕ ಡಾ. ಜಗನ್ನಾಥ ಹೆಬ್ಬಾಳೆ, ಕರ್ನಾಟಕ ಸಾಹಿತ್ಯ ಸಂಘದ ಅಧ್ಯಕ್ಷ ಹಣಮಂತಪ್ಪ ಪಾಟೀಲ್, ಕರ್ನಾಟಕ ಕಾಲೇಜು ಪ್ರಾಚಾರ್ಯ ಪ್ರೊ. ಆರ್.ಎಂ. ನಂದಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ರಾಷ್ಟ್ರೀಯ ಜನಪದ ಸಾಹಿತ್ಯ ಸಮ್ಮೇಳನ ಮಾ. 26 ರಿಂದ 28ರವರೆಗೆ ನಗರದ ಜಿಲ್ಲಾ ರಂಗಮಂದಿರದಲ್ಲಿ ನಡೆಯಲಿದೆ ಎಂದು ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ. ಬಸವರಾಜ ಪಾಟೀಲ್ ಅಷ್ಟೂರು ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಸಮ್ಮೇಳನದ ವಿವರ ನೀಡಿದರು.<br /> <br /> ಮಾ. 26 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ರಂಗಮಂದಿರದಲ್ಲಿ ಜನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಂಬಳಿಕೆ ಹಿರಿಯಣ್ಣ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.<br /> <br /> ಅಂದು ಮಧ್ಯಾಹ್ನ 3ಕ್ಕೆ ಜನಪದ ಕಲಾ ತಂಡಗಳ ಪ್ರದರ್ಶನವಿದ್ದು, 24 ಕಲಾ ತಂಡಗಳು ಪ್ರದರ್ಶನ ನೀಡಲಿವೆ ಎಂದು ಹೇಳಿದರು.<br /> ಮಾ.27 ರಂದು ಬೆಳಿಗ್ಗೆ 9 ಗಂಟೆಗೆ ಬೀದರ್ ಜಿಲ್ಲೆಯ ಜನಪದ ಕುರಿತ ಮೊದಲ ಗೋಷ್ಠಿ, ಬೆಳಿಗ್ಗೆ 11.30 ಗಂಟೆಗೆ ಹೈದರಾಬಾದ್ ಕರ್ನಾಟಕ ಭಜನೆ ಹಾಡುಗಳು ಕುರಿತ ಎರಡನೇ ಗೋಷ್ಠಿ, ಮಧ್ಯಾಹ್ನ ಭಾರತದ ಜನಪದ ರಂಗಕಲೆಗಳು ಕುರಿತ ಮೂರನೇ ಗೋಷ್ಠಿ ನಡೆಯಲಿದೆ ಎಂದು ತಿಳಿಸಿದರು.<br /> <br /> ಮಾ.28 ರಂದು ಬೆಳಿಗ್ಗೆ 9 ಗಂಟೆಗೆ ಜನಪದ ಕಲೆಗಳ ಪರಿಷ್ಕರಣೆ ಅಗತ್ಯತೆ ಕುರಿತ ನಾಲ್ಕನೇ ಗೋಷ್ಠಿ, ಬೆಳಿಗ್ಗೆ 11.30 ಗಂಟೆಗೆ ಕರ್ನಾಟಕ ಜನಪದ ಸಾಹಿತ್ಯ ಸಂಶೋಧನೆ ಕುರಿತ ಐದನೇ ಗೋಷ್ಠಿ ಜರುಗಲಿದೆ. ಮಧ್ಯಾಹ್ನ 3 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಹೇಳಿದರು.<br /> <br /> ಸಮ್ಮೇಳನದಲ್ಲಿ ಜನಪದ ಕ್ಷೇತ್ರದಲ್ಲಿ ಸಾಧನೆಗೈದ 26 ಜನರಿಗೆ ಜನಪದ ಕಾರಂಜಿ, ಜನಪದ ದೀಪ್ತಿ, ಜನಪದ ಸಂಜೀವಿನಿ ಹಾಗೂ ಜನಪದ ಜ್ಯೋತಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.<br /> <br /> ರಾಷ್ಟ್ರೀಯ ಜನಪದ ಸಾಹಿತ್ಯ ಸಮ್ಮೇಳನದ ಸಂಚಾಲಕ ಡಾ. ಜಗನ್ನಾಥ ಹೆಬ್ಬಾಳೆ, ಕರ್ನಾಟಕ ಸಾಹಿತ್ಯ ಸಂಘದ ಅಧ್ಯಕ್ಷ ಹಣಮಂತಪ್ಪ ಪಾಟೀಲ್, ಕರ್ನಾಟಕ ಕಾಲೇಜು ಪ್ರಾಚಾರ್ಯ ಪ್ರೊ. ಆರ್.ಎಂ. ನಂದಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>