<p>ಶ್ರೀರಂಗಪಟ್ಟಣ: ಜನರು ವಿದ್ಯಾವಂತರಾದಷ್ಟೂ ಮೌಢ್ಯ ಆಚರಣೆ ಹೆಚ್ಚುತ್ತಿದ್ದು, ಅದರ ಪರಿಣಾಮ ಕುರಿತು ಜನರಲ್ಲಿ ಜಾಗೃತಿ ಮಾಡಿಸಲು ಪರಿಣಾಮಕಾರಿ ಕಾರ್ಯಕ್ರಮ ರೂಪಿಸಬೇಕು ಎಂದು ಶಿಕ್ಷಣ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಎನ್. ಕುಮಾರಸ್ವಾಮಿ ಸಲಹೆ ನೀಡಿದರು.<br /> <br /> ರಾಷ್ಟ್ರೀಯ ಗಣಿತ ವರ್ಷಾಚರಣೆ ಅಂಗವಾಗಿ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಘಟಕ, ಸ್ಥಳೀಯ ವಿಜ್ಞಾನ ಕೇಂದ್ರ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಶನಿವಾರ ಏರ್ಪಡಿಸಿದ್ದ ಸಂಪನ್ಮೂಲ ವ್ಯಕ್ತಿಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಸಿ.ಪುಟ್ಟಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಎನ್.ಮಹದೇವಪ್ಪ ಮಾತನಾಡಿದರು. ರಾಜ್ಯ ವಿಜ್ಞಾನ ಪರಿಷತ್ ನಿರ್ದೇಶಕ ಅರಳಕುಪ್ಪೆ ನಾಗೇಶ್, ಶ್ರೀರಂಗರಾಜಲಕ್ಷ್ಮಿ, ಸಂತೋಷ್ಕುಮಾರ್, ಶಿವಕುಮಾರ್, ಚಂದ್ರಶೇಖರಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀರಂಗಪಟ್ಟಣ: ಜನರು ವಿದ್ಯಾವಂತರಾದಷ್ಟೂ ಮೌಢ್ಯ ಆಚರಣೆ ಹೆಚ್ಚುತ್ತಿದ್ದು, ಅದರ ಪರಿಣಾಮ ಕುರಿತು ಜನರಲ್ಲಿ ಜಾಗೃತಿ ಮಾಡಿಸಲು ಪರಿಣಾಮಕಾರಿ ಕಾರ್ಯಕ್ರಮ ರೂಪಿಸಬೇಕು ಎಂದು ಶಿಕ್ಷಣ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಎನ್. ಕುಮಾರಸ್ವಾಮಿ ಸಲಹೆ ನೀಡಿದರು.<br /> <br /> ರಾಷ್ಟ್ರೀಯ ಗಣಿತ ವರ್ಷಾಚರಣೆ ಅಂಗವಾಗಿ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಘಟಕ, ಸ್ಥಳೀಯ ವಿಜ್ಞಾನ ಕೇಂದ್ರ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಶನಿವಾರ ಏರ್ಪಡಿಸಿದ್ದ ಸಂಪನ್ಮೂಲ ವ್ಯಕ್ತಿಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಸಿ.ಪುಟ್ಟಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಎನ್.ಮಹದೇವಪ್ಪ ಮಾತನಾಡಿದರು. ರಾಜ್ಯ ವಿಜ್ಞಾನ ಪರಿಷತ್ ನಿರ್ದೇಶಕ ಅರಳಕುಪ್ಪೆ ನಾಗೇಶ್, ಶ್ರೀರಂಗರಾಜಲಕ್ಷ್ಮಿ, ಸಂತೋಷ್ಕುಮಾರ್, ಶಿವಕುಮಾರ್, ಚಂದ್ರಶೇಖರಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>