<p><strong>ಉಡುಪಿ:</strong> ‘ಯಕ್ಷಗಾನ ಬಹು ಕಲೆಗಳ ಸಮ್ಮಿಲನ, ಪುರಾಣ ವ್ಯಕ್ತಿಗಳ ಪರಿಚಯ ಮತ್ತು ಭಾರತೀಯ ಸಂಸ್ಕೃತಿ ತಿಳಿಸಿಕೊಡುವ ಯಕ್ಷಗಾನದಿಂದ ಬಹುಮುಖ ವ್ಯಕ್ತಿತ್ವವನ್ನು ರೂಪಿಸಬಹುದು’ ಎಂದು ಪರ್ಯಾಯ ಸೋದೆ ವಾದಿರಾಜ ಮಠದ ವಿಶ್ವವಲ್ಲಭ ಸ್ವಾಮೀಜಿ ಹೇಳಿದರು.<br /> <br /> ಶ್ರೀಕೃಷ್ಣ ಮಠ ಪರ್ಯಾಯ ಸೋದೆ ವಾದಿರಾಜ ಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಯಕ್ಷಶಿಕ್ಷಣ ಟ್ರಸ್ಟ್ ಸಂಯುಕ್ತವಾಗಿ ರಾಜಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಕಿಶೋರ ಯಕ್ಷಸಂಭ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಶಾಲೆಗಳಲ್ಲಿ ಇಂದು ಪುಸ್ತಕದ ಪಾಠಕ್ಕೆ ಒತ್ತು ನೀಡುವ ಮೂಲಕ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳಲ್ಲಿ ಆಸಕ್ತಿ ಕಡಿಮೆಯಾಗುತ್ತಿದೆ. ವಿದ್ಯಾರ್ಥಿಗಳಿಗೆ ಯಕ್ಷಗಾನ ಶಿಕ್ಷಣ ನೀಡಿ ಯಕ್ಷಗಾನ ಕಲೆಯನ್ನು ಉಳಿಸುವಲ್ಲಿ ಯಕ್ಷಗಾನ ಕಲಾರಂಗ ಉತ್ತಮ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.<br /> <br /> ‘ಸೂರ್ಯ–ಚಂದ್ರ ಇರುವವರೆಗೆ ಯಕ್ಷಗಾನ ಉಳಿಯಬೇಕು ಎಂಬ ದೃಷ್ಟಿಯಲ್ಲಿ ಮಕ್ಕಳಿಗೆ ಯಕ್ಷಗಾನ ಶಿಕ್ಷಣ ನೀಡಿ ಕಲಾವಿದರನ್ನು ರೂಪಿಸುವುದರ ಜೊತೆಗೆ ಕಲೆಯನ್ನು ಬೆಳೆಸುವ ಕೆಲಸವನ್ನು ಯಕ್ಷಗಾನ ಕಲಾರಂಗ ಮಾಡುತ್ತಿದೆ’ ಎಂದು ಶಾಸಕ ಪ್ರಮೋದ್ ಮಧ್ವರಾಜ್ ಹೇಳಿದರು.<br /> <br /> ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬಿ.ವಿಜಯ ಬಲ್ಲಾಳ್, ಕ್ಷೇತ್ರ ಶಿಕ್ಷಣಾಧಿಕಾರಿ ರವಿಶಂಕರ್ ರಾವ್, ಗೋವಿಂದ ಪೈ ಸಂಶೋಧನ ಕೇಂದ್ರದ ನಿರ್ದೇಶಕ ಎಚ್. ಕೃಷ್ಣ ಭಟ್, ಯಕ್ಷಗಾನ ಕಲಾರಂಗದ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಯಕ್ಷಶಿಕ್ಷಣ ಟ್ರಸ್ಟ್ನ ವಿಶ್ವಸ್ಥ ನಂದಕುಮಾರ್ ಉಪಸ್ಥಿತರಿದ್ದರು.<br /> <br /> ಸತೀಶ್ ಕೆದ್ಲಾಯ ಪ್ರಾರ್ಥಿಸಿದರು. ಎಸ್.ವಿ.ಭಟ್ ಸ್ವಾಗತಿಸಿದರು. ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೇಕಾರ್ ಕಾರ್ಯಕ್ರಮ ನಿರೂಪಿಸಿದರು.<br /> <br /> ಸಭಾ ಕಾರ್ಯಕ್ರಮದ ನಂತರ ಕಡಿಯಾಳಿಯ ಯು.ಕಮಲಾ ಬಾಯಿ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ‘ಗಂಗಾ ಶಾಪ’ ಹಾಗೂ ಉಡುಪಿ ಎಸ್.ಎಂ.ಎಸ್.ಪಿ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ‘ಭೀಷ್ಮೋತ್ಪತ್ತಿ’ ಯಕ್ಷಗಾನ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ‘ಯಕ್ಷಗಾನ ಬಹು ಕಲೆಗಳ ಸಮ್ಮಿಲನ, ಪುರಾಣ ವ್ಯಕ್ತಿಗಳ ಪರಿಚಯ ಮತ್ತು ಭಾರತೀಯ ಸಂಸ್ಕೃತಿ ತಿಳಿಸಿಕೊಡುವ ಯಕ್ಷಗಾನದಿಂದ ಬಹುಮುಖ ವ್ಯಕ್ತಿತ್ವವನ್ನು ರೂಪಿಸಬಹುದು’ ಎಂದು ಪರ್ಯಾಯ ಸೋದೆ ವಾದಿರಾಜ ಮಠದ ವಿಶ್ವವಲ್ಲಭ ಸ್ವಾಮೀಜಿ ಹೇಳಿದರು.<br /> <br /> ಶ್ರೀಕೃಷ್ಣ ಮಠ ಪರ್ಯಾಯ ಸೋದೆ ವಾದಿರಾಜ ಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಯಕ್ಷಶಿಕ್ಷಣ ಟ್ರಸ್ಟ್ ಸಂಯುಕ್ತವಾಗಿ ರಾಜಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಕಿಶೋರ ಯಕ್ಷಸಂಭ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಶಾಲೆಗಳಲ್ಲಿ ಇಂದು ಪುಸ್ತಕದ ಪಾಠಕ್ಕೆ ಒತ್ತು ನೀಡುವ ಮೂಲಕ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳಲ್ಲಿ ಆಸಕ್ತಿ ಕಡಿಮೆಯಾಗುತ್ತಿದೆ. ವಿದ್ಯಾರ್ಥಿಗಳಿಗೆ ಯಕ್ಷಗಾನ ಶಿಕ್ಷಣ ನೀಡಿ ಯಕ್ಷಗಾನ ಕಲೆಯನ್ನು ಉಳಿಸುವಲ್ಲಿ ಯಕ್ಷಗಾನ ಕಲಾರಂಗ ಉತ್ತಮ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.<br /> <br /> ‘ಸೂರ್ಯ–ಚಂದ್ರ ಇರುವವರೆಗೆ ಯಕ್ಷಗಾನ ಉಳಿಯಬೇಕು ಎಂಬ ದೃಷ್ಟಿಯಲ್ಲಿ ಮಕ್ಕಳಿಗೆ ಯಕ್ಷಗಾನ ಶಿಕ್ಷಣ ನೀಡಿ ಕಲಾವಿದರನ್ನು ರೂಪಿಸುವುದರ ಜೊತೆಗೆ ಕಲೆಯನ್ನು ಬೆಳೆಸುವ ಕೆಲಸವನ್ನು ಯಕ್ಷಗಾನ ಕಲಾರಂಗ ಮಾಡುತ್ತಿದೆ’ ಎಂದು ಶಾಸಕ ಪ್ರಮೋದ್ ಮಧ್ವರಾಜ್ ಹೇಳಿದರು.<br /> <br /> ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬಿ.ವಿಜಯ ಬಲ್ಲಾಳ್, ಕ್ಷೇತ್ರ ಶಿಕ್ಷಣಾಧಿಕಾರಿ ರವಿಶಂಕರ್ ರಾವ್, ಗೋವಿಂದ ಪೈ ಸಂಶೋಧನ ಕೇಂದ್ರದ ನಿರ್ದೇಶಕ ಎಚ್. ಕೃಷ್ಣ ಭಟ್, ಯಕ್ಷಗಾನ ಕಲಾರಂಗದ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಯಕ್ಷಶಿಕ್ಷಣ ಟ್ರಸ್ಟ್ನ ವಿಶ್ವಸ್ಥ ನಂದಕುಮಾರ್ ಉಪಸ್ಥಿತರಿದ್ದರು.<br /> <br /> ಸತೀಶ್ ಕೆದ್ಲಾಯ ಪ್ರಾರ್ಥಿಸಿದರು. ಎಸ್.ವಿ.ಭಟ್ ಸ್ವಾಗತಿಸಿದರು. ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೇಕಾರ್ ಕಾರ್ಯಕ್ರಮ ನಿರೂಪಿಸಿದರು.<br /> <br /> ಸಭಾ ಕಾರ್ಯಕ್ರಮದ ನಂತರ ಕಡಿಯಾಳಿಯ ಯು.ಕಮಲಾ ಬಾಯಿ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ‘ಗಂಗಾ ಶಾಪ’ ಹಾಗೂ ಉಡುಪಿ ಎಸ್.ಎಂ.ಎಸ್.ಪಿ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ‘ಭೀಷ್ಮೋತ್ಪತ್ತಿ’ ಯಕ್ಷಗಾನ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>