<p>ಚನ್ನಪಟ್ಟಣ: ಸಾಂಸ್ಕೃತಿಕ ಕಾರ್ಯಕ್ರಮಗಳನ್ನೇ ಮಾಡದ ಕೆಲವು ಸಂಘ–ಸಂಸ್ಥೆಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಅನುದಾನ ನೀಡುತ್ತಿರುವ ಆರೋಪಗಳು ಕೇಳಿ ಬರುತ್ತಿದ್ದು, ಇದನ್ನು ಇಲಾಖೆ ಸರಿಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಬಿ.ಟಿ.ನಾಗೇಶ್ ಹೇಳಿದರು.<br /> <br /> ಪಟ್ಟಣದ ಅನುಗ್ರಹ ಕನ್ವೆನ್ಷನ್ ಹಾಲ್ನಲ್ಲಿ ಕಲ್ಪಶ್ರೀ ಪರ್ಫಾರ್ಮಿಂಗ್ ಆರ್ಟ್ಸ್ ಸೆಂಟರ್ ವತಿಯಿಂದ ಏರ್ಪಡಿಸಿದ್ದ ‘ವಸಂತೋತ್ಸವ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಲಾಖೆ ಹಣ ಬಿಡುಗಡೆ ಮಾಡುವಾಗ ಕಾರ್ಯಕ್ರಮದ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.<br /> <br /> ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಮಧುಸೂಧನಾಚಾರ್ಯ ಜೋಷಿ ಮಾತನಾಡಿ, ತಾಲ್ಲೂಕು ಎಲ್ಲಾ ಕ್ಷೇತ್ರದಲ್ಲೂ ತನ್ನ ಛಾಪನ್ನು ಮೂಡಿಸುತ್ತಿದೆ. ಇಲ್ಲಿಯ ಕಲಾವಿದರು ಶ್ರೇಷ್ಠ ಸಾಧನೆ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.<br /> <br /> ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷ ಸು.ತ.ರಾಮೇಗೌಡ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮಲವೇಗೌಡ, ಟ್ರಸ್ಟ್ನ ಕಾರ್ಯಾಧ್ಯಕ್ಷ ಎಸ್.ಆರ್. ಪ್ರಮೋದ್, ಜಂಟಿ ಕಾರ್ಯದರ್ಶಿ ಸಿ.ಮಧು, ಚೇತನ್ಕುಮಾರ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಸಿ.ವೀರೇಗೌಡ, ನಾಗವಾರ ರಂಗಸ್ವಾಮಿ ಮುಂತಾದವರು ಹಾಜರಿದ್ದರು.<br /> <br /> ಸಂಸ್ಥೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶಿಕ್ಷಕ ಗಂಗಾಧರಮೂರ್ತಿ ಸ್ವಾಗತಿಸಿ, ನಿರೂಪಿಸಿದರು. ಟ್ರಸ್ಟ್ನ ಸಂಸ್ಥಾಪಕ ಕಾರ್ಯದರ್ಶಿ ಎಂ.ಸಿ.ಸುಜೇಂದ್ರ ಬಾಬು ವಂದಿಸಿದರು.<br /> <br /> ಇದೇ ಸಂದರ್ಭದಲ್ಲಿ ಎಂ.ಸಿ.ಸುಜೇಂದ್ರಬಾಬು ಮತ್ತು ತಂಡದಿಂದ ಕೂಚುಪುಡಿ ನೃತ್ಯ, ಸುಕನ್ಯಾ ಮತ್ತು ರಂಗಮಣಿ ತಂಡದಿಂದ ಶಾರದಾ ಸಂಕೀರ್ತನ, ಅನನ್ಯ ಮತ್ತು ತಂಡದಿಂದ ಭರತನಾಟ್ಯ, ಕೆ.ಪಿ.ಸಮೀಕ್ಷಾ ಮತ್ತು ತಂಡದಿಂದ ಕೂಚುಪುಡಿ ನೃತ್ಯ, ಅಮೂಲ್ಯ ಮತ್ತು ತಂಡದಿಂದ ನೃತ್ಯ ಸಂಭ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಪಟ್ಟಣ: ಸಾಂಸ್ಕೃತಿಕ ಕಾರ್ಯಕ್ರಮಗಳನ್ನೇ ಮಾಡದ ಕೆಲವು ಸಂಘ–ಸಂಸ್ಥೆಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಅನುದಾನ ನೀಡುತ್ತಿರುವ ಆರೋಪಗಳು ಕೇಳಿ ಬರುತ್ತಿದ್ದು, ಇದನ್ನು ಇಲಾಖೆ ಸರಿಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಬಿ.ಟಿ.ನಾಗೇಶ್ ಹೇಳಿದರು.<br /> <br /> ಪಟ್ಟಣದ ಅನುಗ್ರಹ ಕನ್ವೆನ್ಷನ್ ಹಾಲ್ನಲ್ಲಿ ಕಲ್ಪಶ್ರೀ ಪರ್ಫಾರ್ಮಿಂಗ್ ಆರ್ಟ್ಸ್ ಸೆಂಟರ್ ವತಿಯಿಂದ ಏರ್ಪಡಿಸಿದ್ದ ‘ವಸಂತೋತ್ಸವ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಲಾಖೆ ಹಣ ಬಿಡುಗಡೆ ಮಾಡುವಾಗ ಕಾರ್ಯಕ್ರಮದ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.<br /> <br /> ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಮಧುಸೂಧನಾಚಾರ್ಯ ಜೋಷಿ ಮಾತನಾಡಿ, ತಾಲ್ಲೂಕು ಎಲ್ಲಾ ಕ್ಷೇತ್ರದಲ್ಲೂ ತನ್ನ ಛಾಪನ್ನು ಮೂಡಿಸುತ್ತಿದೆ. ಇಲ್ಲಿಯ ಕಲಾವಿದರು ಶ್ರೇಷ್ಠ ಸಾಧನೆ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.<br /> <br /> ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷ ಸು.ತ.ರಾಮೇಗೌಡ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮಲವೇಗೌಡ, ಟ್ರಸ್ಟ್ನ ಕಾರ್ಯಾಧ್ಯಕ್ಷ ಎಸ್.ಆರ್. ಪ್ರಮೋದ್, ಜಂಟಿ ಕಾರ್ಯದರ್ಶಿ ಸಿ.ಮಧು, ಚೇತನ್ಕುಮಾರ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಸಿ.ವೀರೇಗೌಡ, ನಾಗವಾರ ರಂಗಸ್ವಾಮಿ ಮುಂತಾದವರು ಹಾಜರಿದ್ದರು.<br /> <br /> ಸಂಸ್ಥೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶಿಕ್ಷಕ ಗಂಗಾಧರಮೂರ್ತಿ ಸ್ವಾಗತಿಸಿ, ನಿರೂಪಿಸಿದರು. ಟ್ರಸ್ಟ್ನ ಸಂಸ್ಥಾಪಕ ಕಾರ್ಯದರ್ಶಿ ಎಂ.ಸಿ.ಸುಜೇಂದ್ರ ಬಾಬು ವಂದಿಸಿದರು.<br /> <br /> ಇದೇ ಸಂದರ್ಭದಲ್ಲಿ ಎಂ.ಸಿ.ಸುಜೇಂದ್ರಬಾಬು ಮತ್ತು ತಂಡದಿಂದ ಕೂಚುಪುಡಿ ನೃತ್ಯ, ಸುಕನ್ಯಾ ಮತ್ತು ರಂಗಮಣಿ ತಂಡದಿಂದ ಶಾರದಾ ಸಂಕೀರ್ತನ, ಅನನ್ಯ ಮತ್ತು ತಂಡದಿಂದ ಭರತನಾಟ್ಯ, ಕೆ.ಪಿ.ಸಮೀಕ್ಷಾ ಮತ್ತು ತಂಡದಿಂದ ಕೂಚುಪುಡಿ ನೃತ್ಯ, ಅಮೂಲ್ಯ ಮತ್ತು ತಂಡದಿಂದ ನೃತ್ಯ ಸಂಭ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>