<p><strong>ಆನೇಕಲ್:</strong> ‘ಪ್ರತಿಯೊಬ್ಬರು ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕು’ ಎಂದು ಆಸರೆ ಫೌಂಡೇಷನ್ ಅಧ್ಯಕ್ಷ ಆರ್.ಕೃಷ್ಣರಾಜು ಹೇಳಿದರು.<br /> <br /> ತಾಲ್ಲೂಕಿನ ಚಂದಾಪುರದಲ್ಲಿ ಆಸರೆ ಫೌಂಡೇಷನ್, ಆರ್ಟ್ ಆಫ್ ಲಿವಿಂಗ್ ಮತ್ತು ಸೇವಾಭಾರತಿ ಸಹಯೋಗದಲ್ಲಿ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.<br /> <br /> ‘ರಕ್ತದಾನದಿಂದ ಒಬ್ಬ ವ್ಯಕ್ತಿಯ ಜೀವ ಉಳಿಸಿದ ತೃಪ್ತಿ ದಾನಿಗಳಿಗೆ ದೊರಕುತ್ತದೆ. ಹಾಗಾಗಿ ರಕ್ತದಾನ ಶಿಬಿರಗಳಲ್ಲಿ ಜನರು ಹೆಚ್ಚು ಹೆಚ್ಚಾಗಿ ಪಾಲ್ಗೊಳ್ಳಬೇಕು’ ಎಂದರು.<br /> <br /> ಫೌಂಡೇಷನ್ನ ಉಪಾಧ್ಯಕ್ಷ ಬಿ.ಎಸ್.ನೀಲಕಂಠಯ್ಯ ಮಾತನಾಡಿದರು. ಈ ಸಂದರ್ಭದಲ್ಲಿ ಶಾರದಾಶ್ರಮದ ರಾಮಪ್ರಿಯಾಂಭ, ಬಿಜೆಪಿ ಮುಖಂಡ ನಾಗರಾಜರೆಡ್ಡಿ, ಚಂದಾಪುರ ಅಕ್ಕ ಬಳಗದ ಅಧ್ಯಕ್ಷೆ ಮಂಜುಳಾ, ಪ್ರತಿಷ್ಠಾನದ ಎಂ.ಕೃಷ್ಣಾರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್:</strong> ‘ಪ್ರತಿಯೊಬ್ಬರು ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕು’ ಎಂದು ಆಸರೆ ಫೌಂಡೇಷನ್ ಅಧ್ಯಕ್ಷ ಆರ್.ಕೃಷ್ಣರಾಜು ಹೇಳಿದರು.<br /> <br /> ತಾಲ್ಲೂಕಿನ ಚಂದಾಪುರದಲ್ಲಿ ಆಸರೆ ಫೌಂಡೇಷನ್, ಆರ್ಟ್ ಆಫ್ ಲಿವಿಂಗ್ ಮತ್ತು ಸೇವಾಭಾರತಿ ಸಹಯೋಗದಲ್ಲಿ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.<br /> <br /> ‘ರಕ್ತದಾನದಿಂದ ಒಬ್ಬ ವ್ಯಕ್ತಿಯ ಜೀವ ಉಳಿಸಿದ ತೃಪ್ತಿ ದಾನಿಗಳಿಗೆ ದೊರಕುತ್ತದೆ. ಹಾಗಾಗಿ ರಕ್ತದಾನ ಶಿಬಿರಗಳಲ್ಲಿ ಜನರು ಹೆಚ್ಚು ಹೆಚ್ಚಾಗಿ ಪಾಲ್ಗೊಳ್ಳಬೇಕು’ ಎಂದರು.<br /> <br /> ಫೌಂಡೇಷನ್ನ ಉಪಾಧ್ಯಕ್ಷ ಬಿ.ಎಸ್.ನೀಲಕಂಠಯ್ಯ ಮಾತನಾಡಿದರು. ಈ ಸಂದರ್ಭದಲ್ಲಿ ಶಾರದಾಶ್ರಮದ ರಾಮಪ್ರಿಯಾಂಭ, ಬಿಜೆಪಿ ಮುಖಂಡ ನಾಗರಾಜರೆಡ್ಡಿ, ಚಂದಾಪುರ ಅಕ್ಕ ಬಳಗದ ಅಧ್ಯಕ್ಷೆ ಮಂಜುಳಾ, ಪ್ರತಿಷ್ಠಾನದ ಎಂ.ಕೃಷ್ಣಾರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>