<p><strong>ಶ್ರೀರಂಗಪಟ್ಟಣ: </strong>ಕಾಂಗ್ರೆಸ್ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಲಿರುವ ಸಂಸದೆ ರಮ್ಯಾ ಅವರಿಗೆ ಚಿತ್ರನಟಿ ಎಂಬ ಗ್ಲಾಮರ್ ಮಾತ್ರ ಬಂಡವಾಳವೇ ಹೊರತು ಅವರು ನಿಜವಾದ ಜನಪರ ಅಭ್ಯರ್ಥಿ ಅಲ್ಲ ಎಂದು ಮಂಡ್ಯ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಎಂ. ಕೃಷ್ಣಮೂರ್ತಿ ಲೇವಡಿ ಮಾಡಿದರು.<br /> <br /> ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಪಟ್ಟಣದಲ್ಲಿ ಬಿಎಸ್ಪಿ ಮುಖಂಡರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.<br /> <br /> ರಮ್ಯಾ ಅವರು ಯಾವುದೇ ಜನಪರ ಹೋರಾಟಗಳಲ್ಲಿ ಪಾಲ್ಗೊಂಡಿಲ್ಲ. ರೈತರು ಹಾಗೂ ತಳ ಸಮುದಾಯದ ಜನರ ಬವಣೆ ಅವರಿಗೆ ಗೊತ್ತಿಲ್ಲ. ಬಿಜೆಪಿ ಘೋಷಿತ ಅಭ್ಯರ್ಥಿ ಶಿವಲಿಂಗಯ್ಯ ಕೂಡ ಕ್ಷೇತ್ರದ ಜನರಿಗೆ ಅಪರಿಚಿತರು.<br /> <br /> ಅವರಿಗೆ ಯಾವುದೇ ಹೋರಾಟದ ಹಿನ್ನೆಲೆ ಇಲ್ಲ. ಕಳೆದ ಆರೇಳು ವರ್ಷಗಳಿಂದ ನಾನು ಜನ ಸಾಮಾನ್ಯರ ಜತೆಗಿದ್ದೇನೆ. ಕಾವೇರಿ ಚಳವಳಿ, ಕಬ್ಬು ಬೆಳೆಗಾರರ ಸಮಸ್ಯೆ, ಬಗರ್ಹುಕುಂ ಸಾಗುವಳಿ, ಬೀದಿ ಬದಿ ವ್ಯಾಪಾರಿಗಳು ಹಾಗೂ ಗ್ರಾಮ ಸಹಾಯಕರ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದೇನೆ. ಜಾತಿ ಮೀರಿ ಕೆಲಸ ಮಾಡುತ್ತಿದ್ದೇನೆ. ಕ್ಷೇತ್ರದ ಜನ ನನ್ನ ಹೋರಾಟವನ್ನು ಗುರುತಿಸಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ: </strong>ಕಾಂಗ್ರೆಸ್ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಲಿರುವ ಸಂಸದೆ ರಮ್ಯಾ ಅವರಿಗೆ ಚಿತ್ರನಟಿ ಎಂಬ ಗ್ಲಾಮರ್ ಮಾತ್ರ ಬಂಡವಾಳವೇ ಹೊರತು ಅವರು ನಿಜವಾದ ಜನಪರ ಅಭ್ಯರ್ಥಿ ಅಲ್ಲ ಎಂದು ಮಂಡ್ಯ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಎಂ. ಕೃಷ್ಣಮೂರ್ತಿ ಲೇವಡಿ ಮಾಡಿದರು.<br /> <br /> ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಪಟ್ಟಣದಲ್ಲಿ ಬಿಎಸ್ಪಿ ಮುಖಂಡರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.<br /> <br /> ರಮ್ಯಾ ಅವರು ಯಾವುದೇ ಜನಪರ ಹೋರಾಟಗಳಲ್ಲಿ ಪಾಲ್ಗೊಂಡಿಲ್ಲ. ರೈತರು ಹಾಗೂ ತಳ ಸಮುದಾಯದ ಜನರ ಬವಣೆ ಅವರಿಗೆ ಗೊತ್ತಿಲ್ಲ. ಬಿಜೆಪಿ ಘೋಷಿತ ಅಭ್ಯರ್ಥಿ ಶಿವಲಿಂಗಯ್ಯ ಕೂಡ ಕ್ಷೇತ್ರದ ಜನರಿಗೆ ಅಪರಿಚಿತರು.<br /> <br /> ಅವರಿಗೆ ಯಾವುದೇ ಹೋರಾಟದ ಹಿನ್ನೆಲೆ ಇಲ್ಲ. ಕಳೆದ ಆರೇಳು ವರ್ಷಗಳಿಂದ ನಾನು ಜನ ಸಾಮಾನ್ಯರ ಜತೆಗಿದ್ದೇನೆ. ಕಾವೇರಿ ಚಳವಳಿ, ಕಬ್ಬು ಬೆಳೆಗಾರರ ಸಮಸ್ಯೆ, ಬಗರ್ಹುಕುಂ ಸಾಗುವಳಿ, ಬೀದಿ ಬದಿ ವ್ಯಾಪಾರಿಗಳು ಹಾಗೂ ಗ್ರಾಮ ಸಹಾಯಕರ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದೇನೆ. ಜಾತಿ ಮೀರಿ ಕೆಲಸ ಮಾಡುತ್ತಿದ್ದೇನೆ. ಕ್ಷೇತ್ರದ ಜನ ನನ್ನ ಹೋರಾಟವನ್ನು ಗುರುತಿಸಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>