<p><strong>ಬೆಂಗಳೂರು:</strong> ‘ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ರಾಜ್ಯದ ಗೃಹರಕ್ಷಕ, ಪೌರರಕ್ಷಣಾ ಹಾಗೂ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯು ಹೆಚ್ಚು ಕ್ರಿಯಾಶೀಲವಾಗಿದೆ’ ಎಂದು ಕೇಂದ್ರ ಪೌರ ರಕ್ಷಣಾ ಇಲಾಖೆಯ ಮಹಾನಿರ್ದೇಶಕ ಸಂಜಯ್ ಸೆಹ್ಗಲ್ ಅಭಿಪ್ರಾಯಪಟ್ಟರು.<br /> <br /> ಕೇಂದ್ರ ಗೃಹ ಸಚಿವಾಲಯವು ರಾಜ್ಯ ಗೃಹರಕ್ಷಕ ದಳದ ಸಹಯೋಗದೊಂದಿಗೆ ನಗರದಲ್ಲಿ ಗುರುವಾರ ಆಯೋಜಿಸಿದ್ದ ‘ಪೌರ ರಕ್ಷಣೆ’ ವಿಷಯ ಕುರಿತ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ‘ದೇಶದ 28 ರಾಜ್ಯಗಳಲ್ಲಿ ಪೌರರಕ್ಷಣಾ ಇಲಾಖೆ ಅಸ್ತಿತ್ವದಲ್ಲಿದ್ದು, ಒಟ್ಟು 5.6 ಲಕ್ಷ ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಪೈಕಿ ಕರ್ನಾಟಕ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ಇಲಾಖೆಗಳು ಹೆಚ್ಚು ಕ್ರಿಯಾಶೀಲವಾಗಿವೆ’ ಎಂದರು.<br /> <br /> ‘1968ರಲ್ಲಿ ಪೌರರಕ್ಷಣಾ ಪಡೆ ಅಸ್ತಿತ್ವಕ್ಕೆ ಬಂತು. ಮೊದಲು ಸೇನೆಯೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದ ಈ ಪಡೆ, 1971ರಲ್ಲಿ ನಡೆದ ಭಾರತ–ಪಾಕಿಸ್ತಾನ ನಡುವಿನ ಯುದ್ಧದ ಸಂದರ್ಭದಲ್ಲಿ ಸೈನಿಕರೊಂದಿಗೆ ಸೇರಿ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿತ್ತು. ಆದರೆ, ಆ ನಂತರದಲ್ಲಿ ಪೌರರಕ್ಷಣಾ ಪಡೆ ಹಂತ ಹಂತವಾಗಿ ತನ್ನ ಸಾಮರ್ಥ್ಯವನ್ನು ಕಳೆದುಕೊಂಡಿತು’ ಎಂದು ಹೇಳಿದರು.<br /> <br /> ‘ಪೌರ ರಕ್ಷಣಾ ಪಡೆಯನ್ನು ಮತ್ತೆ ಕ್ರಿಯಾಶೀಲಗೊಳಿಸಲು ನಿರ್ಧರಿಸಿದ ಕೇಂದ್ರ ಸರ್ಕಾರ, ಈ ಪಡೆಯನ್ನು ವಿಪತ್ತು ನಿರ್ವಹಣಾ ಘಟಕದ ಜತೆ ಸೇರಿಸಿ 2010ರಲ್ಲಿ ಹೊಸ ಕಾನೂನನ್ನು ಜಾರಿ ಮಾಡಿತು. ಇತ್ತೀಚಿನ ಉತ್ತರಖಂಡದ ಪ್ರವಾಹ ಹಾಗೂ ಫೈಲಿನ್ ಚಂಡಮಾರುತದ ಸಂದರ್ಭದಲ್ಲಿ ಸಂತ್ರಸ್ತರ ರಕ್ಷಣೆಯಲ್ಲಿ ಗೃಹರಕ್ಷಕ ಹಾಗೂ ಪೌರರಕ್ಷಣಾ ಇಲಾಖೆ ಸಿಬ್ಬಂದಿ ಮಹತ್ವದ ಪಾತ್ರ ನಿರ್ವಹಿಸಿದ್ದಾರೆ’ ಎಂದರು.<br /> <br /> ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಡಿಜಿಪಿ ಓಂಪ್ರಕಾಶ್ ಮಾತನಾಡಿ, ‘ಒಟ್ಟು ಜನಸಂಖ್ಯೆಯಲ್ಲಿ ಶೇ.1ರಷ್ಟು ಭಾಗ ಪೌರ ಸಿಬ್ಬಂದಿ ಇರಬೇಕು ಎಂದು ಸರ್ಕಾರ ಹೇಳುತ್ತದೆ. ಈ ಪ್ರಕಾರ ನಗರದಲ್ಲಿ ಒಟ್ಟು ಒಂದು ಲಕ್ಷ ಸಿಬ್ಬಂದಿ ಇರಬೇಕು. ಆದರೆ, ನಗರದಲ್ಲಿ ಕೇವಲ 13,000 ಪೌರರಕ್ಷಕರಿದ್ದಾರೆ’ ಎಂದು ಹೇಳಿದರು.<br /> <br /> ‘2013ರ ವಿಧಾನ ಪರಿಷತ್ ಚುನಾವಣೆಯಲ್ಲಿ 1,000 ಪೌರರಕ್ಷಕರು ಬಂದೋಬಸ್ತ್ ಕಾರ್ಯಕ್ಕೆ ನಿಯೋಜನೆಗೊಂಡಿದ್ದರು. ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ರ್್ಯಾಲಿ ಸಂದರ್ಭದಲ್ಲಿ ಭದ್ರತೆಗೆ ಪೊಲೀಸರೊಂದಿಗೆ ಸಹಕರಿಸಿದ್ದಾರೆ. ತುರ್ತು ಸಂದರ್ಭಗಳಲ್ಲಿ ಪೌರರಕ್ಷಕರು ವೃತ್ತಿಪರ ಸಿಬ್ಬಂದಿಗಳಂತೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ’ ಎಂದು ಸಂತಸ ವ್ಯಕ್ತಪಡಿಸಿದರು.<br /> <br /> ನಗರ ಪೊಲೀಸ್ ಕಮಿಷನರ್ ರಾಘವೇಂದ್ರ ಔರಾದಕರ್, ‘ಪೊಲೀಸ್ ಇಲಾಖೆಗೆ ಪೌರರಕ್ಷಕರ ಸೇವೆ ಅಗತ್ಯವಾಗಿದೆ. ಮಲ್ಲೇಶ್ವರದ ಬಿಜೆಪಿ ಕಚೇರಿ ಬಳಿ ಬಾಂಬ್ ಸ್ಫೋಟ ಸಂಭವಿಸಿದಾಗ ಅವರ ಸಹಕಾರ ಅದ್ಭುತವಾಗಿತ್ತು. ಸ್ಥಳದಲ್ಲಿ ಕೆಲವೊಂದು ಮಹತ್ವದ ಸಾಕ್ಷ್ಯಗಳನ್ನು ಹುಡುಕಿಕೊಡುವ ಮೂಲಕ ಆರೋಪಿಗಳ ಪತ್ತೆಗೂ ಸಹಕರಿಸಿದ್ದರು’ ಎಂದರು.<br /> <br /> ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಸ್.ಕೆ.ಪಟ್ಟನಾಯಕ್, ಕೇಂದ್ರ ಗೃಹ ಸಚಿವಾಲಯದ ಐಜಿಪಿ ಸಂದೀಪ್ ರೈ ರಾಥೋರ್, ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ ಸಿ.ಎಚ್.ಪ್ರತಾಪ್ ರೆಡ್ಡಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.<br /> <br /> ‘ಕಾರ್ಯಾಗಾರದ ಎರಡನೇ ದಿನವಾದ ಶುಕ್ರವಾರ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಜಮ್ಮು ಕಾಶ್ಮೀರ, ಮೇಘಾಲಯ ಮತ್ತು ಜಾರ್ಖಂಡ್ನ ಪೌರರಕ್ಷಣಾ ಇಲಾಖೆಯ ಅಧಿಕಾರಿಗಳ ಜತೆ ಸಂವಾದ ನಡೆಸಿ ಪೌರರಕ್ಷಣೆ ಬಗ್ಗೆ ಮಾಹಿತಿ ವಿನಿಮಯ ಮಾಡಿಕೊಳ್ಳಲಾಗುವುದು’ ಎಂದು ಮುಖ್ಯ ವಾರ್ಡನ್ ಪಿ.ಆರ್.ಎಸ್.ಚೇತನ್ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ರಾಜ್ಯದ ಗೃಹರಕ್ಷಕ, ಪೌರರಕ್ಷಣಾ ಹಾಗೂ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯು ಹೆಚ್ಚು ಕ್ರಿಯಾಶೀಲವಾಗಿದೆ’ ಎಂದು ಕೇಂದ್ರ ಪೌರ ರಕ್ಷಣಾ ಇಲಾಖೆಯ ಮಹಾನಿರ್ದೇಶಕ ಸಂಜಯ್ ಸೆಹ್ಗಲ್ ಅಭಿಪ್ರಾಯಪಟ್ಟರು.<br /> <br /> ಕೇಂದ್ರ ಗೃಹ ಸಚಿವಾಲಯವು ರಾಜ್ಯ ಗೃಹರಕ್ಷಕ ದಳದ ಸಹಯೋಗದೊಂದಿಗೆ ನಗರದಲ್ಲಿ ಗುರುವಾರ ಆಯೋಜಿಸಿದ್ದ ‘ಪೌರ ರಕ್ಷಣೆ’ ವಿಷಯ ಕುರಿತ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ‘ದೇಶದ 28 ರಾಜ್ಯಗಳಲ್ಲಿ ಪೌರರಕ್ಷಣಾ ಇಲಾಖೆ ಅಸ್ತಿತ್ವದಲ್ಲಿದ್ದು, ಒಟ್ಟು 5.6 ಲಕ್ಷ ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಪೈಕಿ ಕರ್ನಾಟಕ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ಇಲಾಖೆಗಳು ಹೆಚ್ಚು ಕ್ರಿಯಾಶೀಲವಾಗಿವೆ’ ಎಂದರು.<br /> <br /> ‘1968ರಲ್ಲಿ ಪೌರರಕ್ಷಣಾ ಪಡೆ ಅಸ್ತಿತ್ವಕ್ಕೆ ಬಂತು. ಮೊದಲು ಸೇನೆಯೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದ ಈ ಪಡೆ, 1971ರಲ್ಲಿ ನಡೆದ ಭಾರತ–ಪಾಕಿಸ್ತಾನ ನಡುವಿನ ಯುದ್ಧದ ಸಂದರ್ಭದಲ್ಲಿ ಸೈನಿಕರೊಂದಿಗೆ ಸೇರಿ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿತ್ತು. ಆದರೆ, ಆ ನಂತರದಲ್ಲಿ ಪೌರರಕ್ಷಣಾ ಪಡೆ ಹಂತ ಹಂತವಾಗಿ ತನ್ನ ಸಾಮರ್ಥ್ಯವನ್ನು ಕಳೆದುಕೊಂಡಿತು’ ಎಂದು ಹೇಳಿದರು.<br /> <br /> ‘ಪೌರ ರಕ್ಷಣಾ ಪಡೆಯನ್ನು ಮತ್ತೆ ಕ್ರಿಯಾಶೀಲಗೊಳಿಸಲು ನಿರ್ಧರಿಸಿದ ಕೇಂದ್ರ ಸರ್ಕಾರ, ಈ ಪಡೆಯನ್ನು ವಿಪತ್ತು ನಿರ್ವಹಣಾ ಘಟಕದ ಜತೆ ಸೇರಿಸಿ 2010ರಲ್ಲಿ ಹೊಸ ಕಾನೂನನ್ನು ಜಾರಿ ಮಾಡಿತು. ಇತ್ತೀಚಿನ ಉತ್ತರಖಂಡದ ಪ್ರವಾಹ ಹಾಗೂ ಫೈಲಿನ್ ಚಂಡಮಾರುತದ ಸಂದರ್ಭದಲ್ಲಿ ಸಂತ್ರಸ್ತರ ರಕ್ಷಣೆಯಲ್ಲಿ ಗೃಹರಕ್ಷಕ ಹಾಗೂ ಪೌರರಕ್ಷಣಾ ಇಲಾಖೆ ಸಿಬ್ಬಂದಿ ಮಹತ್ವದ ಪಾತ್ರ ನಿರ್ವಹಿಸಿದ್ದಾರೆ’ ಎಂದರು.<br /> <br /> ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಡಿಜಿಪಿ ಓಂಪ್ರಕಾಶ್ ಮಾತನಾಡಿ, ‘ಒಟ್ಟು ಜನಸಂಖ್ಯೆಯಲ್ಲಿ ಶೇ.1ರಷ್ಟು ಭಾಗ ಪೌರ ಸಿಬ್ಬಂದಿ ಇರಬೇಕು ಎಂದು ಸರ್ಕಾರ ಹೇಳುತ್ತದೆ. ಈ ಪ್ರಕಾರ ನಗರದಲ್ಲಿ ಒಟ್ಟು ಒಂದು ಲಕ್ಷ ಸಿಬ್ಬಂದಿ ಇರಬೇಕು. ಆದರೆ, ನಗರದಲ್ಲಿ ಕೇವಲ 13,000 ಪೌರರಕ್ಷಕರಿದ್ದಾರೆ’ ಎಂದು ಹೇಳಿದರು.<br /> <br /> ‘2013ರ ವಿಧಾನ ಪರಿಷತ್ ಚುನಾವಣೆಯಲ್ಲಿ 1,000 ಪೌರರಕ್ಷಕರು ಬಂದೋಬಸ್ತ್ ಕಾರ್ಯಕ್ಕೆ ನಿಯೋಜನೆಗೊಂಡಿದ್ದರು. ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ರ್್ಯಾಲಿ ಸಂದರ್ಭದಲ್ಲಿ ಭದ್ರತೆಗೆ ಪೊಲೀಸರೊಂದಿಗೆ ಸಹಕರಿಸಿದ್ದಾರೆ. ತುರ್ತು ಸಂದರ್ಭಗಳಲ್ಲಿ ಪೌರರಕ್ಷಕರು ವೃತ್ತಿಪರ ಸಿಬ್ಬಂದಿಗಳಂತೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ’ ಎಂದು ಸಂತಸ ವ್ಯಕ್ತಪಡಿಸಿದರು.<br /> <br /> ನಗರ ಪೊಲೀಸ್ ಕಮಿಷನರ್ ರಾಘವೇಂದ್ರ ಔರಾದಕರ್, ‘ಪೊಲೀಸ್ ಇಲಾಖೆಗೆ ಪೌರರಕ್ಷಕರ ಸೇವೆ ಅಗತ್ಯವಾಗಿದೆ. ಮಲ್ಲೇಶ್ವರದ ಬಿಜೆಪಿ ಕಚೇರಿ ಬಳಿ ಬಾಂಬ್ ಸ್ಫೋಟ ಸಂಭವಿಸಿದಾಗ ಅವರ ಸಹಕಾರ ಅದ್ಭುತವಾಗಿತ್ತು. ಸ್ಥಳದಲ್ಲಿ ಕೆಲವೊಂದು ಮಹತ್ವದ ಸಾಕ್ಷ್ಯಗಳನ್ನು ಹುಡುಕಿಕೊಡುವ ಮೂಲಕ ಆರೋಪಿಗಳ ಪತ್ತೆಗೂ ಸಹಕರಿಸಿದ್ದರು’ ಎಂದರು.<br /> <br /> ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಸ್.ಕೆ.ಪಟ್ಟನಾಯಕ್, ಕೇಂದ್ರ ಗೃಹ ಸಚಿವಾಲಯದ ಐಜಿಪಿ ಸಂದೀಪ್ ರೈ ರಾಥೋರ್, ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ ಸಿ.ಎಚ್.ಪ್ರತಾಪ್ ರೆಡ್ಡಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.<br /> <br /> ‘ಕಾರ್ಯಾಗಾರದ ಎರಡನೇ ದಿನವಾದ ಶುಕ್ರವಾರ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಜಮ್ಮು ಕಾಶ್ಮೀರ, ಮೇಘಾಲಯ ಮತ್ತು ಜಾರ್ಖಂಡ್ನ ಪೌರರಕ್ಷಣಾ ಇಲಾಖೆಯ ಅಧಿಕಾರಿಗಳ ಜತೆ ಸಂವಾದ ನಡೆಸಿ ಪೌರರಕ್ಷಣೆ ಬಗ್ಗೆ ಮಾಹಿತಿ ವಿನಿಮಯ ಮಾಡಿಕೊಳ್ಳಲಾಗುವುದು’ ಎಂದು ಮುಖ್ಯ ವಾರ್ಡನ್ ಪಿ.ಆರ್.ಎಸ್.ಚೇತನ್ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>