<p>ಮೈಸೂರು: ‘-ಕೊಡಗು–ಮೈಸೂರು ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ಪಕ್ಷದ ವರಿಷ್ಠರ ತೀರ್ಮಾನ ನನಗೆ ನೋವುಂಟು ಮಾಡಿದೆ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಚ್. ವಿಜಯಶಂಕರ್ ತೀವ್ರ ಬೇಸರ ವ್ಯಕ್ತಪಡಿಸಿದರು.<br /> <br /> ವಿಜಯನಗರದ ತಮ್ಮ ನಿವಾಸ-ದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಿಲ್ಲಾ ಘಟಕದಿಂದ ಮೂವರ ಹೆಸರನ್ನು ಕಳುಹಿಸಲಾಗಿತ್ತು. ಆದರೆ ಸ್ಥಳೀಯ ಮುಖಂಡರು, ಆಕಾಂಕ್ಷಿಗಳ ಜತೆ ಚರ್ಚಿಸದೇ ರಾಜ್ಯ ನಾಯಕರು ಈ ತೀರ್ಮಾನಕ್ಕೆ ಬಂದಿರುವುದು ಅಸಮಾಧಾನ ತಂದಿದೆ’ ಎಂದರು.<br /> <br /> ಕಾಂಗ್ರೆಸ್ ಸಂಸ್ಕೃತಿ:‘ಪಕ್ಷದ ಪ್ರಾಥಮಿಕ ಸದಸ್ಯತ್ವ ಇಲ್ಲದವರಿಗೆ ಟಿಕೆಟ್ ಕೊಡುವ ಸಂಸ್ಕೃತಿ ಕಾಂಗ್ರೆಸ್ಸಿನದ್ದು. ಬಿಜೆಪಿಯಲ್ಲಿ ಇಂತಹ ಸಂಸ್ಕೃತಿ ಇಲ್ಲ. ನನ್ನ ಈವರೆಗಿನ ರಾಜಕೀಯ ಜೀವನದಲ್ಲಿ ಇದೇ ಮೊದಲ ಬಾರಿಗೆ ಇಂತಹ ಬೆಳವಣಿಗೆ ನಡೆದಿದೆ. ಹೀಗಾಗಿ ಪಕ್ಷದ ವರಿಷ್ಠರ ನಿರ್ಧಾರ ಆಘಾತ ತಂದಿದೆ’ ಎಂದು ಹೇಳಿದರು.<br /> <br /> ‘ಮೂಲತಃ ಹಾಸನ ಜಿಲ್ಲೆಯವರಾದ ಪ್ರತಾಪ್ ಸಿಂಹ ಅವರನ್ನು ಅಲ್ಲಿಗೆ ಕಳುಹಿಸಲಿ’ ಎಂದರು.<br /> ‘ಪಕ್ಷ ಬಿಡಲು ನಿರ್ಧರಿಸಿಲ್ಲ’: ‘ಟಿಕೆಟ್ ವಿಚಾರಕ್ಕಾಗಿ ಸದ್ಯಕ್ಕೆ ಪಕ್ಷ ಬಿಡಲು ನಿರ್ಧರಿಸಿಲ್ಲ. ರಾಜ್ಯ ನಾಯಕರ ತೀರ್ಮಾನ ನೋವು ತಂದಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘-ಕೊಡಗು–ಮೈಸೂರು ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ಪಕ್ಷದ ವರಿಷ್ಠರ ತೀರ್ಮಾನ ನನಗೆ ನೋವುಂಟು ಮಾಡಿದೆ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಚ್. ವಿಜಯಶಂಕರ್ ತೀವ್ರ ಬೇಸರ ವ್ಯಕ್ತಪಡಿಸಿದರು.<br /> <br /> ವಿಜಯನಗರದ ತಮ್ಮ ನಿವಾಸ-ದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಿಲ್ಲಾ ಘಟಕದಿಂದ ಮೂವರ ಹೆಸರನ್ನು ಕಳುಹಿಸಲಾಗಿತ್ತು. ಆದರೆ ಸ್ಥಳೀಯ ಮುಖಂಡರು, ಆಕಾಂಕ್ಷಿಗಳ ಜತೆ ಚರ್ಚಿಸದೇ ರಾಜ್ಯ ನಾಯಕರು ಈ ತೀರ್ಮಾನಕ್ಕೆ ಬಂದಿರುವುದು ಅಸಮಾಧಾನ ತಂದಿದೆ’ ಎಂದರು.<br /> <br /> ಕಾಂಗ್ರೆಸ್ ಸಂಸ್ಕೃತಿ:‘ಪಕ್ಷದ ಪ್ರಾಥಮಿಕ ಸದಸ್ಯತ್ವ ಇಲ್ಲದವರಿಗೆ ಟಿಕೆಟ್ ಕೊಡುವ ಸಂಸ್ಕೃತಿ ಕಾಂಗ್ರೆಸ್ಸಿನದ್ದು. ಬಿಜೆಪಿಯಲ್ಲಿ ಇಂತಹ ಸಂಸ್ಕೃತಿ ಇಲ್ಲ. ನನ್ನ ಈವರೆಗಿನ ರಾಜಕೀಯ ಜೀವನದಲ್ಲಿ ಇದೇ ಮೊದಲ ಬಾರಿಗೆ ಇಂತಹ ಬೆಳವಣಿಗೆ ನಡೆದಿದೆ. ಹೀಗಾಗಿ ಪಕ್ಷದ ವರಿಷ್ಠರ ನಿರ್ಧಾರ ಆಘಾತ ತಂದಿದೆ’ ಎಂದು ಹೇಳಿದರು.<br /> <br /> ‘ಮೂಲತಃ ಹಾಸನ ಜಿಲ್ಲೆಯವರಾದ ಪ್ರತಾಪ್ ಸಿಂಹ ಅವರನ್ನು ಅಲ್ಲಿಗೆ ಕಳುಹಿಸಲಿ’ ಎಂದರು.<br /> ‘ಪಕ್ಷ ಬಿಡಲು ನಿರ್ಧರಿಸಿಲ್ಲ’: ‘ಟಿಕೆಟ್ ವಿಚಾರಕ್ಕಾಗಿ ಸದ್ಯಕ್ಕೆ ಪಕ್ಷ ಬಿಡಲು ನಿರ್ಧರಿಸಿಲ್ಲ. ರಾಜ್ಯ ನಾಯಕರ ತೀರ್ಮಾನ ನೋವು ತಂದಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>