<p>ಬೆಂಗಳೂರು: ವಿಜ್ಞಾನದ ಕೌತುಕಗಳಿಗೆ ಸಾಹಿತ್ಯದ ಲೇಪ ಹಚ್ಚಿ ಸೃಜನಶೀಲರಾಗುವ ಬಗೆಯನ್ನು ವಿದ್ಯಾರ್ಥಿಗಳು ಕಲಿಯಬೇಕು ಎಂದು ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯದ ನಿರ್ದೇಶಕ ಕೆ.ಜಿ.ಕುಮಾರ್ ಸಲಹೆ ನೀಡಿದರು.<br /> <br /> ನಗರದಲ್ಲಿ ಬುಧವಾರ ನಡೆದ ದಕ್ಷಿಣ ಭಾರತೀಯ ವಿಜ್ಞಾನ ನಾಟಕೋತ್ಸವದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.<br /> ‘ಕಲ್ಪನೆಯನ್ನು ತೀಡುವ ಕಥಾ ಮಾದರಿಯಲ್ಲಿ ವಿಜ್ಞಾನ ವಿಷಯವನ್ನು ನಿರೂಪಿಸಿದರೆ, ಮಕ್ಕಳ ಮನಸ್ಸಿನಲ್ಲಿ ಸೃಜನಸಶೀಲತೆ ಬೆಳೆಯುವುದಲ್ಲದೇ, ವಿಜ್ಞಾನ ಪ್ರವೃತ್ತಿ ಅರಳುತ್ತದೆ’ ಎಂದು ಅಭಿಪ್ರಾಯಪಟ್ಟರು.<br /> <br /> ‘ನೊವೊ ನಾರ್ಡಿಸ್ಕ್’ ಸಂಸ್ಥೆಯ ಯೋಜನಾಧಿಕಾರಿ ಪಿ.ದಿನಕರನ್, ‘ನಾಟಕ, ಸಂಗೀತ, ಸಾಹಿತ್ಯದಂತಹ ಲಲಿತ ಕಲೆಗಳೆಡೆಗೆ ಆಸಕ್ತಿ ಬೆಳೆಸಿಕೊಳ್ಳುವುದರಿಂದ ಮಕ್ಕಳು ಪಠ್ಯ ವಿಷಯದಲ್ಲೂ ಚುರುಕಾಗುತ್ತಾರೆ’ ಎಂದು ಅಭಿಪ್ರಾಯಪಟ್ಟರು.<br /> <br /> ವಿಜ್ಞಾನ ನಾಟಕೋತ್ಸವದಲ್ಲಿ ಉಡುಪಿಯ ಸೇಂಟ್ ಮೇರಿಸ್ ಆಂಗ್ಲ ಪ್ರೌಢ ಶಾಲೆ (ಪ್ರಥಮ), ಕೇರಳದ ಎಕೆಎನ್ಎಂಎಂಎ ಸ್ಮಾರಕ ಶಾಲೆ (ದ್ವಿತೀಯ), ತಮಿಳುನಾಡಿನ ಇಂದಿರಾಗಾಂಧಿ ಸರ್ಕಾರಿ ಪ್ರೌಢಶಾಲೆ (ತೃತೀಯ) ಸ್ಥಾನವನ್ನು ಪಡೆದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ವಿಜ್ಞಾನದ ಕೌತುಕಗಳಿಗೆ ಸಾಹಿತ್ಯದ ಲೇಪ ಹಚ್ಚಿ ಸೃಜನಶೀಲರಾಗುವ ಬಗೆಯನ್ನು ವಿದ್ಯಾರ್ಥಿಗಳು ಕಲಿಯಬೇಕು ಎಂದು ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯದ ನಿರ್ದೇಶಕ ಕೆ.ಜಿ.ಕುಮಾರ್ ಸಲಹೆ ನೀಡಿದರು.<br /> <br /> ನಗರದಲ್ಲಿ ಬುಧವಾರ ನಡೆದ ದಕ್ಷಿಣ ಭಾರತೀಯ ವಿಜ್ಞಾನ ನಾಟಕೋತ್ಸವದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.<br /> ‘ಕಲ್ಪನೆಯನ್ನು ತೀಡುವ ಕಥಾ ಮಾದರಿಯಲ್ಲಿ ವಿಜ್ಞಾನ ವಿಷಯವನ್ನು ನಿರೂಪಿಸಿದರೆ, ಮಕ್ಕಳ ಮನಸ್ಸಿನಲ್ಲಿ ಸೃಜನಸಶೀಲತೆ ಬೆಳೆಯುವುದಲ್ಲದೇ, ವಿಜ್ಞಾನ ಪ್ರವೃತ್ತಿ ಅರಳುತ್ತದೆ’ ಎಂದು ಅಭಿಪ್ರಾಯಪಟ್ಟರು.<br /> <br /> ‘ನೊವೊ ನಾರ್ಡಿಸ್ಕ್’ ಸಂಸ್ಥೆಯ ಯೋಜನಾಧಿಕಾರಿ ಪಿ.ದಿನಕರನ್, ‘ನಾಟಕ, ಸಂಗೀತ, ಸಾಹಿತ್ಯದಂತಹ ಲಲಿತ ಕಲೆಗಳೆಡೆಗೆ ಆಸಕ್ತಿ ಬೆಳೆಸಿಕೊಳ್ಳುವುದರಿಂದ ಮಕ್ಕಳು ಪಠ್ಯ ವಿಷಯದಲ್ಲೂ ಚುರುಕಾಗುತ್ತಾರೆ’ ಎಂದು ಅಭಿಪ್ರಾಯಪಟ್ಟರು.<br /> <br /> ವಿಜ್ಞಾನ ನಾಟಕೋತ್ಸವದಲ್ಲಿ ಉಡುಪಿಯ ಸೇಂಟ್ ಮೇರಿಸ್ ಆಂಗ್ಲ ಪ್ರೌಢ ಶಾಲೆ (ಪ್ರಥಮ), ಕೇರಳದ ಎಕೆಎನ್ಎಂಎಂಎ ಸ್ಮಾರಕ ಶಾಲೆ (ದ್ವಿತೀಯ), ತಮಿಳುನಾಡಿನ ಇಂದಿರಾಗಾಂಧಿ ಸರ್ಕಾರಿ ಪ್ರೌಢಶಾಲೆ (ತೃತೀಯ) ಸ್ಥಾನವನ್ನು ಪಡೆದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>