<p>ಬೆಂಗಳೂರು: 2004–05ನೇ ಸಾಲಿನಿಂದ ಉಳಿಸಿಕೊಂಡಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಬಾಕಿ ಶುಲ್ಕ 131.52 ಕೋಟಿಯನ್ನು ಪಾವತಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ತಿಳಿಸಿದರು.<br /> <br /> ಸರ್ಕಾರದ ಈ ನಿರ್ಧಾರದಿಂದ 2.25 ಲಕ್ಷ ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದಾರೆ. ಶುಲ್ಕ ಬಾಕಿ ಪಾವತಿಸಲು ಎಲ್ಲ ಜಿಲ್ಲೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಹಣ ಬಿಡುಗಡೆ ಮಾಡಲಾಗಿದೆ ಎಂದು ಶನಿವಾರ ತಿಳಿಸಿದರು.<br /> <br /> ವ್ಯಾಸಂಗ ಪೂರ್ಣಗೊಳಿಸಿ, ಕಾಲೇಜು ಬಿಟ್ಟಿರುವ ವಿದ್ಯಾರ್ಥಿಗಳು ಸಹ ಆಯಾ ಕಾಲೇಜುಗಳನ್ನು ಸಂಪರ್ಕಿಸಿ ಬಾಕಿ ಶುಲ್ಕವನ್ನು ಪಡೆದುಕೊಳ್ಳಬಹುದು. ಈ ಮೊತ್ತವನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಪಾವತಿಸಲಾಗುವುದು ಎಂದರು.<br /> <br /> <strong>‘ವಿದ್ಯಾಸಿರಿ’ ವಿಸ್ತರಣೆ:</strong> ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೂ ‘ವಿದ್ಯಾಸಿರಿ’ ವಿಸ್ತರಿಸಲು ನಿರ್ಧರಿಸಲಾಗಿದೆ. ಈ ಸಮುದಾಯದ ಮಕ್ಕಳಿಗೆ ಭೋಜನ ಮತ್ತು ವಸತಿ ವೆಚ್ಚಕ್ಕಾಗಿ ತಿಂಗಳಿಗೆ ಕೇವಲ ₨200 ನೀಡಲಾಗುತ್ತಿತ್ತು. ಮುಖ್ಯಮಂತ್ರಿ ಅವರು, ಈ ಮೊತ್ತವನ್ನು ಮಾಸಿಕ ₨ 1500ಕ್ಕೆ ಹೆಚ್ಚಿಸಲು ಆದೇಶ ನೀಡಿದ್ದಾರೆ. ಇದರಿಂದ ಶೇ.750ರಷ್ಟು ಹೆಚ್ಚಳವನ್ನು ಒಂದೇ ಬಾರಿಗೆ ಮಾಡಿದಂತಾಗಿದೆ ಎಂದು ಸಚಿವ ಆಂಜನೇಯ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: 2004–05ನೇ ಸಾಲಿನಿಂದ ಉಳಿಸಿಕೊಂಡಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಬಾಕಿ ಶುಲ್ಕ 131.52 ಕೋಟಿಯನ್ನು ಪಾವತಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ತಿಳಿಸಿದರು.<br /> <br /> ಸರ್ಕಾರದ ಈ ನಿರ್ಧಾರದಿಂದ 2.25 ಲಕ್ಷ ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದಾರೆ. ಶುಲ್ಕ ಬಾಕಿ ಪಾವತಿಸಲು ಎಲ್ಲ ಜಿಲ್ಲೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಹಣ ಬಿಡುಗಡೆ ಮಾಡಲಾಗಿದೆ ಎಂದು ಶನಿವಾರ ತಿಳಿಸಿದರು.<br /> <br /> ವ್ಯಾಸಂಗ ಪೂರ್ಣಗೊಳಿಸಿ, ಕಾಲೇಜು ಬಿಟ್ಟಿರುವ ವಿದ್ಯಾರ್ಥಿಗಳು ಸಹ ಆಯಾ ಕಾಲೇಜುಗಳನ್ನು ಸಂಪರ್ಕಿಸಿ ಬಾಕಿ ಶುಲ್ಕವನ್ನು ಪಡೆದುಕೊಳ್ಳಬಹುದು. ಈ ಮೊತ್ತವನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಪಾವತಿಸಲಾಗುವುದು ಎಂದರು.<br /> <br /> <strong>‘ವಿದ್ಯಾಸಿರಿ’ ವಿಸ್ತರಣೆ:</strong> ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೂ ‘ವಿದ್ಯಾಸಿರಿ’ ವಿಸ್ತರಿಸಲು ನಿರ್ಧರಿಸಲಾಗಿದೆ. ಈ ಸಮುದಾಯದ ಮಕ್ಕಳಿಗೆ ಭೋಜನ ಮತ್ತು ವಸತಿ ವೆಚ್ಚಕ್ಕಾಗಿ ತಿಂಗಳಿಗೆ ಕೇವಲ ₨200 ನೀಡಲಾಗುತ್ತಿತ್ತು. ಮುಖ್ಯಮಂತ್ರಿ ಅವರು, ಈ ಮೊತ್ತವನ್ನು ಮಾಸಿಕ ₨ 1500ಕ್ಕೆ ಹೆಚ್ಚಿಸಲು ಆದೇಶ ನೀಡಿದ್ದಾರೆ. ಇದರಿಂದ ಶೇ.750ರಷ್ಟು ಹೆಚ್ಚಳವನ್ನು ಒಂದೇ ಬಾರಿಗೆ ಮಾಡಿದಂತಾಗಿದೆ ಎಂದು ಸಚಿವ ಆಂಜನೇಯ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>