<p><strong>ಹೈದರಾಬಾದ್ (ಪಿಟಿಐ): </strong>ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ದಲಿತ ವಿದ್ಯಾರ್ಥಿ ವೇಮುಲ ರೋಹಿತ್ ಅಮಾನತಿಗೆ ಯಾವುದೇ ರಾಜಕೀಯ ಒತ್ತಡ ಇರಲಿಲ್ಲ ಎಂದು ವಿವಿ ಕುಲಪತಿ ಅಪ್ಪಾ ರಾವ್ ಹೇಳಿದ್ದಾರೆ.</p>.<p>‘ರೋಹಿತ್ ಮತ್ತು ಇತರೆ ಸಂಶೋಧನಾ ವಿದ್ಯಾರ್ಥಿಗಳನ್ನು ಅಮಾನತು ಮಾಡಲು ಸಚಿವರು ಅಥವಾ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದಿಂದ ಯಾವುದೇ ಒತ್ತಡ ಇರಲಿಲ್ಲ’ ಎಂದು ಅಪ್ಪಾ ರಾವ್ ತಿಳಿಸಿದ್ದಾರೆ.</p>.<p>‘ಅಮಾನತು ಮಾಡಿದ ಕ್ರಮ ತನ್ನ ಆತ್ಮಹತ್ಯೆಗೆ ಕಾರಣ ಎಂದು ರೋಹಿತ್ ಎಲ್ಲೂ ಉಲ್ಲೇಖಿಸಿಲ್ಲ. ಹೀಗಾಗಿ ಆತ ಆತ್ಮಹತ್ಯೆ ಮಾಡಿಕೊಳ್ಳಲು ಅಮಾನತು ಕ್ರಮ ಕಾರಣ ಎಂದು ಹೇಳುವುದು ಕಷ್ಟ’ ಎಂದಿದ್ದಾರೆ.</p>.<p>ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದೊಂದಿಗೆ ವಿಶ್ವವಿದ್ಯಾಲಯದ ಪತ್ರ ವ್ಯವಹಾರ ನಿರಂತರ ಪ್ರಕ್ರಿಯೆ. ಆತ್ಮಹತ್ಯೆ ಘಟನೆಗೆ ಅದನ್ನು ತಳುಕು ಹಾಕುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.</p>.<p><strong>‘ದಲಿತ– ದಲಿತೇತರ ಸಂಘರ್ಷವಲ್ಲ’</strong><br /> ವಿದ್ಯಾರ್ಥಿ ಆತ್ಮಹತ್ಯೆ ಘಟನೆಯನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.</p>.<p>‘ವಿದ್ಯಾರ್ಥಿ ಆತ್ಮಹತ್ಯೆ ವಿಚಾರವನ್ನು ದಲಿತ ಮತ್ತು ದಲಿತೇತರರ ನಡುವಿನ ಸಂಘರ್ಷ ಎಂದು ಬಿಂಬಿಸುತ್ತಿರುವುದು ಸರಿಯಲ್ಲ’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್ (ಪಿಟಿಐ): </strong>ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ದಲಿತ ವಿದ್ಯಾರ್ಥಿ ವೇಮುಲ ರೋಹಿತ್ ಅಮಾನತಿಗೆ ಯಾವುದೇ ರಾಜಕೀಯ ಒತ್ತಡ ಇರಲಿಲ್ಲ ಎಂದು ವಿವಿ ಕುಲಪತಿ ಅಪ್ಪಾ ರಾವ್ ಹೇಳಿದ್ದಾರೆ.</p>.<p>‘ರೋಹಿತ್ ಮತ್ತು ಇತರೆ ಸಂಶೋಧನಾ ವಿದ್ಯಾರ್ಥಿಗಳನ್ನು ಅಮಾನತು ಮಾಡಲು ಸಚಿವರು ಅಥವಾ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದಿಂದ ಯಾವುದೇ ಒತ್ತಡ ಇರಲಿಲ್ಲ’ ಎಂದು ಅಪ್ಪಾ ರಾವ್ ತಿಳಿಸಿದ್ದಾರೆ.</p>.<p>‘ಅಮಾನತು ಮಾಡಿದ ಕ್ರಮ ತನ್ನ ಆತ್ಮಹತ್ಯೆಗೆ ಕಾರಣ ಎಂದು ರೋಹಿತ್ ಎಲ್ಲೂ ಉಲ್ಲೇಖಿಸಿಲ್ಲ. ಹೀಗಾಗಿ ಆತ ಆತ್ಮಹತ್ಯೆ ಮಾಡಿಕೊಳ್ಳಲು ಅಮಾನತು ಕ್ರಮ ಕಾರಣ ಎಂದು ಹೇಳುವುದು ಕಷ್ಟ’ ಎಂದಿದ್ದಾರೆ.</p>.<p>ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದೊಂದಿಗೆ ವಿಶ್ವವಿದ್ಯಾಲಯದ ಪತ್ರ ವ್ಯವಹಾರ ನಿರಂತರ ಪ್ರಕ್ರಿಯೆ. ಆತ್ಮಹತ್ಯೆ ಘಟನೆಗೆ ಅದನ್ನು ತಳುಕು ಹಾಕುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.</p>.<p><strong>‘ದಲಿತ– ದಲಿತೇತರ ಸಂಘರ್ಷವಲ್ಲ’</strong><br /> ವಿದ್ಯಾರ್ಥಿ ಆತ್ಮಹತ್ಯೆ ಘಟನೆಯನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.</p>.<p>‘ವಿದ್ಯಾರ್ಥಿ ಆತ್ಮಹತ್ಯೆ ವಿಚಾರವನ್ನು ದಲಿತ ಮತ್ತು ದಲಿತೇತರರ ನಡುವಿನ ಸಂಘರ್ಷ ಎಂದು ಬಿಂಬಿಸುತ್ತಿರುವುದು ಸರಿಯಲ್ಲ’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>