<p>ಶ್ರೀನಿವಾಸಪುರ: ವಿದ್ಯಾರ್ಥಿಗಳು ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆದು ಶೈಕ್ಷಣಿಕ ಅಭಿವೃದ್ಧಿ ಹೊಂದಬೇಕು. ಸರ್ಕಾರ ಗ್ರಾಮೀಣ ವಿದ್ಯಾರ್ಥಿಗಳ ಬಳಕೆಗೆ ನೀಡುವ ಸೈಕಲ್ ಶಾಲೆಗೆ ಬರಲು ಮಾತ್ರ ಬಳಕೆಯಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ವೆಂಕಟಮುನಿಯಪ್ಪ ಸಲಹೆ ನೀಡಿದರು.<br /> <br /> ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರ ಸುಗಟೂರು ಗ್ರಾಮದ ಸಬರಮತಿ ಪ್ರೌಢ ಶಾಲೆಯಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿ ಮಾತನಾಡಿದರು.<br /> <br /> ಸರ್ಕಾರ ಬಸ್ ಪಾಸ್, ವಿದ್ಯಾರ್ಥಿ ನಿಲಯದಲ್ಲಿ ವಾಸ ಇತ್ಯಾದಿಗಳನ್ನು ಪರಿಗಣಿಸದೆ ಎಂಟನೇ ತರಗತಿಗೆ ಸೇರುವ ಎಲ್ಲ ವಿದ್ಯಾರ್ಥಿಗಳಿಗೂ ಸೈಕಲ್ ನೀಡಬೇಕು. ಹಾಗೆ ಮಾಡಿದಲ್ಲಿ ಆಸೆಗಣ್ಣಿನಿಂದ ಸೈಕಲ್ ನೋಡುವ ಮಕ್ಕಳಿಗೆ ಖುಷಿಯಾಗುತ್ತದೆ ಎಂದರು.<br /> <br /> ಶಿಕ್ಷಣ ಸಂಯೋಜಕ ರಾಮಚಂದ್ರಾರೆಡ್ಡಿ, ಸಾಕ್ಷರ ಭಾರತ್ ಅಭಿಯಾನ ಸಂಯೋಜಕ ಜಿ.ಶ್ರೀನಿವಾಸ್, ಗ್ರಾಮ ಪಂಚಾಯಿತಿ ಸದಸ್ಯ ವಿಶ್ವನಾಥ್, ಶಾಲಾ ಟ್ರಸ್ಟ್ ಖಜಾಂಚಿ ಟಿ.ಪಿ.ನಾರೆಪ್ಪ ಮಾತನಾಡಿದರು.<br /> <br /> ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ, ಸದಸ್ಯ ಬಸವಾಚಾರಿ, ಶಿಕ್ಷಕರಾದ ಬಿ.ವೆಂಕಟೇಶ್, ಪಿ.ಬಾಲಕೃಷ್ಣಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀನಿವಾಸಪುರ: ವಿದ್ಯಾರ್ಥಿಗಳು ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆದು ಶೈಕ್ಷಣಿಕ ಅಭಿವೃದ್ಧಿ ಹೊಂದಬೇಕು. ಸರ್ಕಾರ ಗ್ರಾಮೀಣ ವಿದ್ಯಾರ್ಥಿಗಳ ಬಳಕೆಗೆ ನೀಡುವ ಸೈಕಲ್ ಶಾಲೆಗೆ ಬರಲು ಮಾತ್ರ ಬಳಕೆಯಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ವೆಂಕಟಮುನಿಯಪ್ಪ ಸಲಹೆ ನೀಡಿದರು.<br /> <br /> ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರ ಸುಗಟೂರು ಗ್ರಾಮದ ಸಬರಮತಿ ಪ್ರೌಢ ಶಾಲೆಯಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿ ಮಾತನಾಡಿದರು.<br /> <br /> ಸರ್ಕಾರ ಬಸ್ ಪಾಸ್, ವಿದ್ಯಾರ್ಥಿ ನಿಲಯದಲ್ಲಿ ವಾಸ ಇತ್ಯಾದಿಗಳನ್ನು ಪರಿಗಣಿಸದೆ ಎಂಟನೇ ತರಗತಿಗೆ ಸೇರುವ ಎಲ್ಲ ವಿದ್ಯಾರ್ಥಿಗಳಿಗೂ ಸೈಕಲ್ ನೀಡಬೇಕು. ಹಾಗೆ ಮಾಡಿದಲ್ಲಿ ಆಸೆಗಣ್ಣಿನಿಂದ ಸೈಕಲ್ ನೋಡುವ ಮಕ್ಕಳಿಗೆ ಖುಷಿಯಾಗುತ್ತದೆ ಎಂದರು.<br /> <br /> ಶಿಕ್ಷಣ ಸಂಯೋಜಕ ರಾಮಚಂದ್ರಾರೆಡ್ಡಿ, ಸಾಕ್ಷರ ಭಾರತ್ ಅಭಿಯಾನ ಸಂಯೋಜಕ ಜಿ.ಶ್ರೀನಿವಾಸ್, ಗ್ರಾಮ ಪಂಚಾಯಿತಿ ಸದಸ್ಯ ವಿಶ್ವನಾಥ್, ಶಾಲಾ ಟ್ರಸ್ಟ್ ಖಜಾಂಚಿ ಟಿ.ಪಿ.ನಾರೆಪ್ಪ ಮಾತನಾಡಿದರು.<br /> <br /> ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ, ಸದಸ್ಯ ಬಸವಾಚಾರಿ, ಶಿಕ್ಷಕರಾದ ಬಿ.ವೆಂಕಟೇಶ್, ಪಿ.ಬಾಲಕೃಷ್ಣಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>