<p><strong>ವಿರಾಜಪೇಟೆ</strong>: ಗುರು– ಶಿಷ್ಯರ ನಡುವೆ ಆತ್ಮೀಯ ಸಂಬಂಧ ಬೆಳೆಯುವುದರಿಂದ ಶಿಕ್ಷಣ ಯಶಸ್ವಿಯಾಗುತ್ತದೆ ಎಂದು ವಿರಾಜಪೇಟೆಯ ಎಸ್ಬಿಐ ಹಿರಿಯ ವ್ಯವಸ್ಥಾಪಕ ಸಿ. ನಾರಾಯಣ ಹೇಳಿದರು.<br /> <br /> ಪಟ್ಟಣದ ಸರ್ವೋದಯ ಶಿಕ್ಷಣ ಮಹಾವಿದ್ಯಾಲಯದ ಬಿಇಡಿ ವಿದ್ಯಾರ್ಥಿಗಳಿಗೆ ಸಮೀಪದ ಅರಮೇರಿಯ ಕಳಂಚೇರಿ ಮಠದ ಶಾಲಾ ಸಭಾಂಗಣದಲ್ಲಿ ಈಚೆಗೆ ಆಯೋಜಿಸಿದ್ದ ‘ಪೌರತ್ವ ತರಬೇತಿ ಶಿಬಿರ’ದ ಶಿಬಿರಾಗ್ನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.<br /> <br /> ಮಕ್ಕಳಿಗೆ ಮನೆಯಲ್ಲಿ ತಾಯಿಯೇ ಮೊದಲ ಗುರುವಾದರೆ, ಶಿಕ್ಷಕ ಜೀವನದ ಗುರುವಾಗುತ್ತಾನೆ. ಆದರ್ಶ ಶಿಕ್ಷಕ ತನ್ನ ವಿದ್ಯಾರ್ಥಿಗಳಲ್ಲಿ ನೈತಿಕತೆ, ಸರ್ವಧರ್ಮ ಸಮಾನತೆಯಂತಹ ಉನ್ನತ ಗುಣಗಳನ್ನು ಬೆಳೆಸಬಲ್ಲ. ಸಮಾಜವನ್ನು ಶ್ರೇಷ್ಠತೆಯೆಡೆಗೆ ಕೊಂಡೊಯ್ಯಬಲ್ಲ ಶಕ್ತಿ ಶಿಕ್ಷಕರ ಕೈಯಲ್ಲಿದೆ ಎಂದು ಅವರು ಹೇಳಿದರು.<br /> <br /> ಸರ್ವೋದಯ ವಿದ್ಯಾಸಂಸ್ಥೆಯ ಸದಸ್ಯ ಕೆ.ಸಿ. ಶಬರೀಶ್ ಮಾತನಾಡಿ, ಮಕ್ಕಳ ಭವಿಷ್ಯವನ್ನು ರೂಪಿಸಬಲ್ಲ ಶಿಕ್ಷಕರು ಸದಾ ಕಲಿಕಾ ಮನೋಭಾವ ರೂಢಿಸಿಕೊಳ್ಳುವುದರೊಂದಿಗೆ, ಸ್ವಯಂ ನಿಯಂತ್ರಣ ಹೊಂದಬೇಕು. ಶಿಕ್ಷಕರು ಪರಸ್ಪರ ಸದ್ಭಾವನೆ ಹಾಗೂ ರಾಷ್ಟ್ರೀಯ ಐಕ್ಯತೆಯ ಗುಣಗಳನ್ನು ಮೈಗೂಡಿಸಿಕೊಳ್ಳುವುದರಿಂದ ಭವಿಷ್ಯದಲ್ಲಿ ಉತ್ತಮ ಪ್ರಜೆಗಳನ್ನು ಸೃಷ್ಟಿಸಬಹುದು ಎಂದರು.<br /> <br /> ಸರ್ವೋದಯ ಶಿಕ್ಷಣ ಮಹಾವಿದ್ಯಾಲಯದ ಅಧ್ಯಕ್ಷೆ ಸಿ.ಜೆ. ಸೂರ್ಯಕುಮಾರಿ, ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷೆ ಬಿ.ವಿ. ಶಶಿಕಲಾ, ಸಂಸ್ಥೆಯ ವಾಸಂತಿ ಶರತ್ಚಂದ್ರ, ಪ್ರಾಂಶುಪಾಲೆ ಡಾ.ಸಹೀದಾ ಶಹನವಾಜ್ ಹಾಗೂ ಶಿಬಿರಾಧಿಕಾರಿಗಳಾದ ಡಾ.ಎಂ. ವಾಣಿ ಇದ್ದರು. ಶಿಬಿರಾಗ್ನಿ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿರಾಜಪೇಟೆ</strong>: ಗುರು– ಶಿಷ್ಯರ ನಡುವೆ ಆತ್ಮೀಯ ಸಂಬಂಧ ಬೆಳೆಯುವುದರಿಂದ ಶಿಕ್ಷಣ ಯಶಸ್ವಿಯಾಗುತ್ತದೆ ಎಂದು ವಿರಾಜಪೇಟೆಯ ಎಸ್ಬಿಐ ಹಿರಿಯ ವ್ಯವಸ್ಥಾಪಕ ಸಿ. ನಾರಾಯಣ ಹೇಳಿದರು.<br /> <br /> ಪಟ್ಟಣದ ಸರ್ವೋದಯ ಶಿಕ್ಷಣ ಮಹಾವಿದ್ಯಾಲಯದ ಬಿಇಡಿ ವಿದ್ಯಾರ್ಥಿಗಳಿಗೆ ಸಮೀಪದ ಅರಮೇರಿಯ ಕಳಂಚೇರಿ ಮಠದ ಶಾಲಾ ಸಭಾಂಗಣದಲ್ಲಿ ಈಚೆಗೆ ಆಯೋಜಿಸಿದ್ದ ‘ಪೌರತ್ವ ತರಬೇತಿ ಶಿಬಿರ’ದ ಶಿಬಿರಾಗ್ನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.<br /> <br /> ಮಕ್ಕಳಿಗೆ ಮನೆಯಲ್ಲಿ ತಾಯಿಯೇ ಮೊದಲ ಗುರುವಾದರೆ, ಶಿಕ್ಷಕ ಜೀವನದ ಗುರುವಾಗುತ್ತಾನೆ. ಆದರ್ಶ ಶಿಕ್ಷಕ ತನ್ನ ವಿದ್ಯಾರ್ಥಿಗಳಲ್ಲಿ ನೈತಿಕತೆ, ಸರ್ವಧರ್ಮ ಸಮಾನತೆಯಂತಹ ಉನ್ನತ ಗುಣಗಳನ್ನು ಬೆಳೆಸಬಲ್ಲ. ಸಮಾಜವನ್ನು ಶ್ರೇಷ್ಠತೆಯೆಡೆಗೆ ಕೊಂಡೊಯ್ಯಬಲ್ಲ ಶಕ್ತಿ ಶಿಕ್ಷಕರ ಕೈಯಲ್ಲಿದೆ ಎಂದು ಅವರು ಹೇಳಿದರು.<br /> <br /> ಸರ್ವೋದಯ ವಿದ್ಯಾಸಂಸ್ಥೆಯ ಸದಸ್ಯ ಕೆ.ಸಿ. ಶಬರೀಶ್ ಮಾತನಾಡಿ, ಮಕ್ಕಳ ಭವಿಷ್ಯವನ್ನು ರೂಪಿಸಬಲ್ಲ ಶಿಕ್ಷಕರು ಸದಾ ಕಲಿಕಾ ಮನೋಭಾವ ರೂಢಿಸಿಕೊಳ್ಳುವುದರೊಂದಿಗೆ, ಸ್ವಯಂ ನಿಯಂತ್ರಣ ಹೊಂದಬೇಕು. ಶಿಕ್ಷಕರು ಪರಸ್ಪರ ಸದ್ಭಾವನೆ ಹಾಗೂ ರಾಷ್ಟ್ರೀಯ ಐಕ್ಯತೆಯ ಗುಣಗಳನ್ನು ಮೈಗೂಡಿಸಿಕೊಳ್ಳುವುದರಿಂದ ಭವಿಷ್ಯದಲ್ಲಿ ಉತ್ತಮ ಪ್ರಜೆಗಳನ್ನು ಸೃಷ್ಟಿಸಬಹುದು ಎಂದರು.<br /> <br /> ಸರ್ವೋದಯ ಶಿಕ್ಷಣ ಮಹಾವಿದ್ಯಾಲಯದ ಅಧ್ಯಕ್ಷೆ ಸಿ.ಜೆ. ಸೂರ್ಯಕುಮಾರಿ, ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷೆ ಬಿ.ವಿ. ಶಶಿಕಲಾ, ಸಂಸ್ಥೆಯ ವಾಸಂತಿ ಶರತ್ಚಂದ್ರ, ಪ್ರಾಂಶುಪಾಲೆ ಡಾ.ಸಹೀದಾ ಶಹನವಾಜ್ ಹಾಗೂ ಶಿಬಿರಾಧಿಕಾರಿಗಳಾದ ಡಾ.ಎಂ. ವಾಣಿ ಇದ್ದರು. ಶಿಬಿರಾಗ್ನಿ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>