<p><strong>ಕಾಸರಗೋಡು: </strong>ರಾಜ್ಯದಲ್ಲಿ ಸರ್ಕಾರ ಜಾರಿಗೊಳಿಸುವ ಶುದ್ಧಜಲ ವಿತರಿಸುವ ಯೋಜನೆಗಳಲ್ಲಿ ಗುಣಮಟ್ಟದ ಪೈಪುಗಳನ್ನು ಮಾತ್ರ ಅಳವಡಿಸಲಾಗುವುದು ಎಂದು ರಾಜ್ಯ ಜಲಸಂಪನ್ಮೂಲ ಖಾತೆ ಸಚಿವ ಪಿ.ಜೆ.ಜೋಸೆಫ್ ಹೇಳಿದರು.<br /> <br /> ಮಂಗಳವಾರ ಈಸ್ಟ್ ಎಳೇರಿ ಗ್ರಾಮ ಪಂಚಾಯಿತಿಯಲ್ಲಿ ಕೇರಳ ಜಲಸಂಪನ್ಮೂಲ ಇಲಾಖೆ ಜಾರಿಗೊಳಿಸುವ ಶುದ್ಧಜಲ ವಿತರಣಾ ಯೋಜನೆಯ ಕಾಮಗಾರಿ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಕೇಂದ್ರ ಸರ್ಕಾರದ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆಯಲ್ಲಿ ಒಳಪಡಿಸಿ ಈಸ್ಟ್ ಎಳೇರಿ ಕುಡಿಯುವ ನೀರು ಯೋಜನೆ ಜಾರಿಗೊಳಿಸಲಾತ್ತದೆ. ಈಸ್ಟ್ ಎಳೇರಿ ಕಾರ್ಯಗೊಂಡು ನದಿಯಲ್ಲಿ ಎಂಟು ಕೋಟಿ ರೂಪಾಯಿ ವೆಚ್ಚದಲ್ಲಿ ಅಣೆಕಟ್ಟು ನಿರ್ಮಿಸಲು ಅನುಮತಿ ನೀಡಲಾಗಿದೆ.<br /> <br /> ಶೀಘ್ರದಲ್ಲಿಯೇ ಕಾಮಗಾರಿ ಆರಂಭವಾಗುವುದು ಎಂದರು. ಜಿಲ್ಲೆಯ ಕುಡಿಯುವ ನೀರಿನ ಯೋಜನೆಗಳನ್ನು ಗುಣಮಟ್ಟದ ಪೈಪ್ಗಳನ್ನು ಬಳಸಿ ಶೀಘ್ರದಲ್ಲಿ ಪೂರ್ತಿಗೊಳಿಸಲಾಗುವುದು. ಈಸ್ಟ್ ಎಳೇರಿ ಯೋಜನೆ 2015 ಮಾರ್ಚ್ನಲ್ಲಿ ಪೂರ್ತಿಯಾಗಲಿದೆ. ರೂ.12.12ಕೋಟಿ ವೆಚ್ಚದಲ್ಲಿ ಆರಂಭಗೊಳ್ಳುವ ಈ ಯೋಜನೆ 21,000ಮಂದಿಗೆ ಪ್ರಯೋಜನ ವಾಗಲಿದೆ ಎಂದು ಸಚಿವರು ತಿಳಿಸಿದರು.<br /> <br /> ತೃಕ್ಕರಿಪುರ ಶಾಸಕ ಕೆ.ಕುಂಞಿರಾಮನ್ ಅಧ್ಯಕ್ಷತೆ ವಹಿಸಿದ್ದರು. ಕೇರಳ ಜಲ ಪ್ರಾಧಿಕಾರದ ಮುಖ್ಯ ಎಂಜಿನಿಯರ್ ಪಿ.ಡಿ.ರಾಜು ಯೋಜನೆಯ ಮಾಹಿತಿ ನೀಡಿದರು. ಈಸ್ಟ್ ಎಳೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಜೇಮ್ಸ್, ಪರಪ್ಪ ಬ್ಲಾಕ್ ಪಂಚಾಯಿತಿ ಉಪಾಧ್ಯಕ್ಷ ವಿ.ಬಿ.ಟೋಮಿ ಪಚ್ಚೇರಿ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಸರಗೋಡು: </strong>ರಾಜ್ಯದಲ್ಲಿ ಸರ್ಕಾರ ಜಾರಿಗೊಳಿಸುವ ಶುದ್ಧಜಲ ವಿತರಿಸುವ ಯೋಜನೆಗಳಲ್ಲಿ ಗುಣಮಟ್ಟದ ಪೈಪುಗಳನ್ನು ಮಾತ್ರ ಅಳವಡಿಸಲಾಗುವುದು ಎಂದು ರಾಜ್ಯ ಜಲಸಂಪನ್ಮೂಲ ಖಾತೆ ಸಚಿವ ಪಿ.ಜೆ.ಜೋಸೆಫ್ ಹೇಳಿದರು.<br /> <br /> ಮಂಗಳವಾರ ಈಸ್ಟ್ ಎಳೇರಿ ಗ್ರಾಮ ಪಂಚಾಯಿತಿಯಲ್ಲಿ ಕೇರಳ ಜಲಸಂಪನ್ಮೂಲ ಇಲಾಖೆ ಜಾರಿಗೊಳಿಸುವ ಶುದ್ಧಜಲ ವಿತರಣಾ ಯೋಜನೆಯ ಕಾಮಗಾರಿ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಕೇಂದ್ರ ಸರ್ಕಾರದ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆಯಲ್ಲಿ ಒಳಪಡಿಸಿ ಈಸ್ಟ್ ಎಳೇರಿ ಕುಡಿಯುವ ನೀರು ಯೋಜನೆ ಜಾರಿಗೊಳಿಸಲಾತ್ತದೆ. ಈಸ್ಟ್ ಎಳೇರಿ ಕಾರ್ಯಗೊಂಡು ನದಿಯಲ್ಲಿ ಎಂಟು ಕೋಟಿ ರೂಪಾಯಿ ವೆಚ್ಚದಲ್ಲಿ ಅಣೆಕಟ್ಟು ನಿರ್ಮಿಸಲು ಅನುಮತಿ ನೀಡಲಾಗಿದೆ.<br /> <br /> ಶೀಘ್ರದಲ್ಲಿಯೇ ಕಾಮಗಾರಿ ಆರಂಭವಾಗುವುದು ಎಂದರು. ಜಿಲ್ಲೆಯ ಕುಡಿಯುವ ನೀರಿನ ಯೋಜನೆಗಳನ್ನು ಗುಣಮಟ್ಟದ ಪೈಪ್ಗಳನ್ನು ಬಳಸಿ ಶೀಘ್ರದಲ್ಲಿ ಪೂರ್ತಿಗೊಳಿಸಲಾಗುವುದು. ಈಸ್ಟ್ ಎಳೇರಿ ಯೋಜನೆ 2015 ಮಾರ್ಚ್ನಲ್ಲಿ ಪೂರ್ತಿಯಾಗಲಿದೆ. ರೂ.12.12ಕೋಟಿ ವೆಚ್ಚದಲ್ಲಿ ಆರಂಭಗೊಳ್ಳುವ ಈ ಯೋಜನೆ 21,000ಮಂದಿಗೆ ಪ್ರಯೋಜನ ವಾಗಲಿದೆ ಎಂದು ಸಚಿವರು ತಿಳಿಸಿದರು.<br /> <br /> ತೃಕ್ಕರಿಪುರ ಶಾಸಕ ಕೆ.ಕುಂಞಿರಾಮನ್ ಅಧ್ಯಕ್ಷತೆ ವಹಿಸಿದ್ದರು. ಕೇರಳ ಜಲ ಪ್ರಾಧಿಕಾರದ ಮುಖ್ಯ ಎಂಜಿನಿಯರ್ ಪಿ.ಡಿ.ರಾಜು ಯೋಜನೆಯ ಮಾಹಿತಿ ನೀಡಿದರು. ಈಸ್ಟ್ ಎಳೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಜೇಮ್ಸ್, ಪರಪ್ಪ ಬ್ಲಾಕ್ ಪಂಚಾಯಿತಿ ಉಪಾಧ್ಯಕ್ಷ ವಿ.ಬಿ.ಟೋಮಿ ಪಚ್ಚೇರಿ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>