<p><strong>ಬೀದರ್: </strong>ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಸಂಘಟಿತ ಹೋರಾಟ ನಡೆಸಬೇಕು ಎಂದು ಎಸ್.ಯು.ಸಿ.ಐ. ರಾಜ್ಯ ಸಮಿತಿ ಸದಸ್ಯ ಎಚ್.ವಿ. ದಿವಾಕರ್ ಹೇಳಿದರು.<br /> <br /> ನಗರದಲ್ಲಿ ಬುಧವಾರ ನಡೆದ ಆಶಾ ಕಾರ್ಯಕರ್ತೆಯರ ಜಿಲ್ಲಾಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.<br /> ಕಾರ್ಮಿಕರ, ಉದ್ಯೋಗಿಗಳ ಸಂವಿಧಾನ ಬದ್ಧ ಹಕ್ಕುಗಳನ್ನು ಕಸಿಯಲು ಗುತ್ತಿಗೆ ಪದ್ಧತಿಯನ್ನು ಜಾರಿಗೆ ತರಲಾಗಿದೆ ಎಂದು ಆರೋಪಿಸಿದರು.<br /> <br /> ಆರೋಗ್ಯ ಮತ್ತು ಶಿಕ್ಷಣ ಮಹತ್ವದ ಕ್ಷೇತ್ರಗಳಾಗಿವೆ. ಆದರೆ ಮುಂಗಡ ಪತ್ರದಲ್ಲಿ ಈ ಕ್ಷೇತ್ರಗಳಿಗೆ ಕಡಿಮೆ ಅನುದಾನ ಒದಗಿಸಲಾಗುತ್ತಿದೆ ಎಂದು ದೂರಿದರು.<br /> <br /> ಆರೋಗ್ಯಕ್ಕೆ ಸಂಬಂಧಿಸಿದ ಯೋಜನೆಗಳ ಅನುಷ್ಠಾನದಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಪ್ರಮುಖವಾಗಿದೆ ಎಂದು ಆಲ್ ಇಂಡಿಯಾ ಯುಟಿಯುಸಿ ರಾಜ್ಯ ಸಮಿತಿ ಸದಸ್ಯ ಎನ್.ಎಸ್. ವೀರೇಶ್ ಹೇಳಿದರು.<br /> <br /> ಬೆಲೆ ಏರಿಕೆಗೆ ಅನುಗುಣವಾಗಿ ಸರ್ಕಾರ ಕಾರ್ಮಿಕರಿಗೆ ಕನಿಷ್ಠ ವೇತನ ಒದಗಿಸಬೇಕು. ಆಶಾ ಕಾರ್ಯಕರ್ತೆಯರಿಗೆ ಉಚಿತ ಮೊಬೈಲ್, ಸಿಮ್ಕಾರ್ಡ್ ನೀಡಬೇಕು. ಪಿಯುಸಿ ಪೂರೈಸಿದ ಕಾರ್ಯಕರ್ತೆಯರಿಗೆ ನರ್ಸ್ ಉಚಿತ ತರಬೇತಿ ಹಾಗೂ ಉನ್ನತ ವ್ಯಾಸಂಗ ನೆರವು ಕಲ್ಪಿಸಬೇಕು. ಪ್ರತಿ ತಿಂಗಳು ಕನಿಷ್ಠ ₨ 1ಸಾವಿರ ಪ್ರೋತ್ಸಾಹಧನ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.<br /> <br /> ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಕಾರ್ಯದರ್ಶಿ ಮಹಾದೇವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಜಿಲ್ಲಾ ಅಧ್ಯಕ್ಷ ಮಹೇಶ್ ನಾಡಗೌಡ ಅಧ್ಯಕ್ಷತೆ ವಹಿಸಿದ್ದರು. ಆಶಾ ಕಾರ್ಯಕರ್ತೆಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಸಂಘಟಿತ ಹೋರಾಟ ನಡೆಸಬೇಕು ಎಂದು ಎಸ್.ಯು.ಸಿ.ಐ. ರಾಜ್ಯ ಸಮಿತಿ ಸದಸ್ಯ ಎಚ್.ವಿ. ದಿವಾಕರ್ ಹೇಳಿದರು.<br /> <br /> ನಗರದಲ್ಲಿ ಬುಧವಾರ ನಡೆದ ಆಶಾ ಕಾರ್ಯಕರ್ತೆಯರ ಜಿಲ್ಲಾಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.<br /> ಕಾರ್ಮಿಕರ, ಉದ್ಯೋಗಿಗಳ ಸಂವಿಧಾನ ಬದ್ಧ ಹಕ್ಕುಗಳನ್ನು ಕಸಿಯಲು ಗುತ್ತಿಗೆ ಪದ್ಧತಿಯನ್ನು ಜಾರಿಗೆ ತರಲಾಗಿದೆ ಎಂದು ಆರೋಪಿಸಿದರು.<br /> <br /> ಆರೋಗ್ಯ ಮತ್ತು ಶಿಕ್ಷಣ ಮಹತ್ವದ ಕ್ಷೇತ್ರಗಳಾಗಿವೆ. ಆದರೆ ಮುಂಗಡ ಪತ್ರದಲ್ಲಿ ಈ ಕ್ಷೇತ್ರಗಳಿಗೆ ಕಡಿಮೆ ಅನುದಾನ ಒದಗಿಸಲಾಗುತ್ತಿದೆ ಎಂದು ದೂರಿದರು.<br /> <br /> ಆರೋಗ್ಯಕ್ಕೆ ಸಂಬಂಧಿಸಿದ ಯೋಜನೆಗಳ ಅನುಷ್ಠಾನದಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಪ್ರಮುಖವಾಗಿದೆ ಎಂದು ಆಲ್ ಇಂಡಿಯಾ ಯುಟಿಯುಸಿ ರಾಜ್ಯ ಸಮಿತಿ ಸದಸ್ಯ ಎನ್.ಎಸ್. ವೀರೇಶ್ ಹೇಳಿದರು.<br /> <br /> ಬೆಲೆ ಏರಿಕೆಗೆ ಅನುಗುಣವಾಗಿ ಸರ್ಕಾರ ಕಾರ್ಮಿಕರಿಗೆ ಕನಿಷ್ಠ ವೇತನ ಒದಗಿಸಬೇಕು. ಆಶಾ ಕಾರ್ಯಕರ್ತೆಯರಿಗೆ ಉಚಿತ ಮೊಬೈಲ್, ಸಿಮ್ಕಾರ್ಡ್ ನೀಡಬೇಕು. ಪಿಯುಸಿ ಪೂರೈಸಿದ ಕಾರ್ಯಕರ್ತೆಯರಿಗೆ ನರ್ಸ್ ಉಚಿತ ತರಬೇತಿ ಹಾಗೂ ಉನ್ನತ ವ್ಯಾಸಂಗ ನೆರವು ಕಲ್ಪಿಸಬೇಕು. ಪ್ರತಿ ತಿಂಗಳು ಕನಿಷ್ಠ ₨ 1ಸಾವಿರ ಪ್ರೋತ್ಸಾಹಧನ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.<br /> <br /> ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಕಾರ್ಯದರ್ಶಿ ಮಹಾದೇವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಜಿಲ್ಲಾ ಅಧ್ಯಕ್ಷ ಮಹೇಶ್ ನಾಡಗೌಡ ಅಧ್ಯಕ್ಷತೆ ವಹಿಸಿದ್ದರು. ಆಶಾ ಕಾರ್ಯಕರ್ತೆಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>