<p><strong>ಬೆಂಗಳೂರು:</strong> ‘ಸಮಾಜದಲ್ಲಿ ಆಗುತ್ತಿರುವ ಅನ್ಯಾಯಗಳ ಬಗ್ಗೆ ಸಜ್ಜನರು ಮೌನ ತಾಳಿರುವ ಕಾರಣ ಜಗತ್ತು ಹೀನಾಯ ಸ್ಥಿತಿಗೆ ತಲುಪುತ್ತಿದೆ. ಸಮಾಜದಲ್ಲಿ ಹೆಚ್ಚುತ್ತಿರುವ ಅನ್ಯಾಯ ಹಾಗೂ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಯುವಜನರನ್ನು ಸಿದ್ಧಪಡಿಸಬೇಕಿದೆ’ ಎಂದು ಮಹಾರಾಷ್ಟ್ರ ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷ ಎಸ್.ಆರ್.ಬನ್ನೂರಮಠ್ ಹೇಳಿದರು.<br /> <br /> ನಗರದ ಬಿಎಂಎಸ್ ಕಾನೂನು ಕಾಲೇಜಿನ ಸುವರ್ಣ ಮಹೋತ್ಸವ ಅಂಗವಾಗಿ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ನಡೆದ ರಾಷ್ಟ್ರ ಮಟ್ಟದ ಬಿ.ಎಂ.ಶ್ರೀನಿವಾಸಯ್ಯ ಸ್ಮಾರಕ ಅಣಕು ನ್ಯಾಯಾಲಯ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.<br /> <br /> ‘ನ್ಯಾಯಾಲಯದಲ್ಲಿ ಕೆಲ ಸಂದರ್ಭದಲ್ಲಿ ನ್ಯಾಯಾಧೀಶರು ಅನಿರೀಕ್ಷಿತ ಪ್ರಶ್ನೆ ಕೇಳುತ್ತಾರೆ. ಆಗ ವಕೀಲರು ಜಾಣತನ ತೋರಬೇಕಾಗುತ್ತದೆ. ಇಂತಹ ಸನ್ನಿವೇಶಗಳನ್ನು ಎದುರಿಸಲು ಅಣಕು ನ್ಯಾಯಾಲಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತದೆ’ ಎಂದರು. <br /> <br /> ಕಾಲೇಜಿನ ಟ್ರಸ್ಟಿ ಕೆ.ಜೈರಾಜ್, ‘ಇತ್ತೀಚಿನ ದಿನಗಳಲ್ಲಿ ವಕೀಲರಲ್ಲಿ ಸಿದ್ಧತೆ ಕೊರತೆ ಕಾಣುತ್ತಿದೆ. ವಕೀಲರಲ್ಲಿ ಸಂವಹನ ಕೌಶಲದ ಕೊರತೆಯಿಂದ ಅನೇಕ ಸಂದರ್ಭಗಳಲ್ಲಿ ವ್ಯತಿರಿಕ್ತ ತೀರ್ಪು ಬರುತ್ತದೆ. ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಲ್ಲಿ ಕೌಶಲ ಹೆಚ್ಚುತ್ತದೆ’ ಎಂದರು. <br /> <br /> ಗುಲ್ಬರ್ಗ ವಿವಿ ವಿಶ್ರಾಂತ ಕುಲಪತಿ ಪ್ರೊ.ವಿ.ಬಿ.ಕುಟಿನ್ಹೊ, ‘ಅಣಕು ನ್ಯಾಯಾಲಯ ಸ್ಪರ್ಧೆಗಳಲ್ಲಿ ಪಾಲ್ಗೊಂಡ ಅನೇಕ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಪ್ರಖ್ಯಾತ ವಕೀಲರಾಗಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸಮಾಜದಲ್ಲಿ ಆಗುತ್ತಿರುವ ಅನ್ಯಾಯಗಳ ಬಗ್ಗೆ ಸಜ್ಜನರು ಮೌನ ತಾಳಿರುವ ಕಾರಣ ಜಗತ್ತು ಹೀನಾಯ ಸ್ಥಿತಿಗೆ ತಲುಪುತ್ತಿದೆ. ಸಮಾಜದಲ್ಲಿ ಹೆಚ್ಚುತ್ತಿರುವ ಅನ್ಯಾಯ ಹಾಗೂ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಯುವಜನರನ್ನು ಸಿದ್ಧಪಡಿಸಬೇಕಿದೆ’ ಎಂದು ಮಹಾರಾಷ್ಟ್ರ ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷ ಎಸ್.ಆರ್.ಬನ್ನೂರಮಠ್ ಹೇಳಿದರು.<br /> <br /> ನಗರದ ಬಿಎಂಎಸ್ ಕಾನೂನು ಕಾಲೇಜಿನ ಸುವರ್ಣ ಮಹೋತ್ಸವ ಅಂಗವಾಗಿ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ನಡೆದ ರಾಷ್ಟ್ರ ಮಟ್ಟದ ಬಿ.ಎಂ.ಶ್ರೀನಿವಾಸಯ್ಯ ಸ್ಮಾರಕ ಅಣಕು ನ್ಯಾಯಾಲಯ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.<br /> <br /> ‘ನ್ಯಾಯಾಲಯದಲ್ಲಿ ಕೆಲ ಸಂದರ್ಭದಲ್ಲಿ ನ್ಯಾಯಾಧೀಶರು ಅನಿರೀಕ್ಷಿತ ಪ್ರಶ್ನೆ ಕೇಳುತ್ತಾರೆ. ಆಗ ವಕೀಲರು ಜಾಣತನ ತೋರಬೇಕಾಗುತ್ತದೆ. ಇಂತಹ ಸನ್ನಿವೇಶಗಳನ್ನು ಎದುರಿಸಲು ಅಣಕು ನ್ಯಾಯಾಲಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತದೆ’ ಎಂದರು. <br /> <br /> ಕಾಲೇಜಿನ ಟ್ರಸ್ಟಿ ಕೆ.ಜೈರಾಜ್, ‘ಇತ್ತೀಚಿನ ದಿನಗಳಲ್ಲಿ ವಕೀಲರಲ್ಲಿ ಸಿದ್ಧತೆ ಕೊರತೆ ಕಾಣುತ್ತಿದೆ. ವಕೀಲರಲ್ಲಿ ಸಂವಹನ ಕೌಶಲದ ಕೊರತೆಯಿಂದ ಅನೇಕ ಸಂದರ್ಭಗಳಲ್ಲಿ ವ್ಯತಿರಿಕ್ತ ತೀರ್ಪು ಬರುತ್ತದೆ. ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಲ್ಲಿ ಕೌಶಲ ಹೆಚ್ಚುತ್ತದೆ’ ಎಂದರು. <br /> <br /> ಗುಲ್ಬರ್ಗ ವಿವಿ ವಿಶ್ರಾಂತ ಕುಲಪತಿ ಪ್ರೊ.ವಿ.ಬಿ.ಕುಟಿನ್ಹೊ, ‘ಅಣಕು ನ್ಯಾಯಾಲಯ ಸ್ಪರ್ಧೆಗಳಲ್ಲಿ ಪಾಲ್ಗೊಂಡ ಅನೇಕ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಪ್ರಖ್ಯಾತ ವಕೀಲರಾಗಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>