<p>ಭಾಲ್ಕಿ: ಸತತ ಪರಿಶ್ರಮ ಮತ್ತು ನಿರಂತರ ಪ್ರಯತ್ನಗಳಿಂದ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಚುನಾವಣಾ ಮುಖ್ಯಾಧಿಕಾರಿ ಪವನಕುಮಾರ ಮಾಲಪಾಟಿ ಹೇಳಿದರು.<br /> <br /> ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದಲ್ಲಿ ಸೋಮವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.<br /> <br /> ವಿದ್ಯಾರ್ಥಿ ಜೀವನದಿಂದಲೇ ದೊಡ್ಡ ಗುರಿ ಇಟ್ಟುಕೊಂಡು ಅದಕ್ಕೆ ಪೂರಕವಾಗಿ ಸಿದ್ಧತೆಗಳನ್ನು ನಡೆಸಿದರೆ ಖಂಡಿತ ಯಶಸ್ಸು ನಮ್ಮದಾಗುತ್ತದೆ ಎಂದರು.<br /> <br /> ಸಾನಿಧ್ಯ ವಹಿಸಿದ್ದ ಡಾ. ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಜಿಲ್ಲೆಯ 120 ಸರ್ಕಾರಿ ಮತ್ತು ಖಾಸಗಿ ಪ್ರೌಢ ಶಾಲೆಗಳಲ್ಲಿ ಪ್ರತಿಭಾ ಪರೀಕ್ಷೆಗಳನ್ನು ನಡೆಸಿ ಒಂದೊಂದು ಶಾಲೆಯಿಂದ 5–10 ಮಕ್ಕಳಿಗೆ ಸನ್ಮಾನಿಸಲಾಗುತ್ತಿದೆ ಎಂದು ಹೇಳಿದರು.<br /> <br /> ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಯಾವುದೇ ರೀತಿಯ ಒತ್ತಡಕ್ಕೆ ಒಳಗಾಗದೇ ಮುಕ್ತ ಮನಸ್ಸು ಹೊಂದಿರಬೇಕು ಎಂದು ಪ್ರಾಚಾರ್ಯ ಬಸವರಾಜ ಮೋಳಕೆರೆ ತಿಳಿಸಿದರು.<br /> <br /> ಜಿಲ್ಲಾಧಿಕಾರಿ ಮಾರ್ಗದರ್ಶನದಂತೆ ಜಿಲ್ಲೆಯ 120 ಶಾಲೆಗಳ 4ಸಾವಿರಕ್ಕೂ ಅಧಿಕ ಮಕ್ಕಳೊಂದಿಗೆ ಸತತ ಸಮಾಲೋಚನೆ ನಡೆಸುವ ಮೂಲಕ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವ ಸಿದ್ಧತೆ ಮಾಡಲಾಗಿದೆ ಎಂದು ಅಡಳಿತಾಧಿಕಾರಿ ಮೋಹನರೆಡ್ಡಿ ಹೇಳಿದರು.<br /> <br /> ಹಿರೇಮಠ ಸಂಸ್ಥಾನದ ಉತ್ತರಾಧಿಕಾರಿ ಗುರುಬಸವ ದೇವರು, ಸಂಸ್ಥೆಯ ಕಾರ್ಯದರ್ಶಿ ಮಹಾಲಿಂಗ ದೇವರು, ಬಸವಕಲ್ಯಾಣದ ವೈಜಿನಾಥ ಕಾಮಶೆಟ್ಟಿ, ಉಪನ್ಯಾಸಕ ಗುರುನಾಥ ಗಡ್ಡೆ, ಉದ್ಯಮಿ ಜಯರಾಜ ಖಂಡ್ರೆ, ವೆಂಕಟಪ್ಪ, ಮುಖಶಿಕ್ಷಕ ಲಕ್ಷ್ಮಣ ಮೇತ್ರೆ, ಬಸವರಾಜ ಪ್ರಭಾ ಇದ್ದರು.<br /> <br /> ಮಧುಕರ್ ಗಾಂವಕರ್ ನಿರೂಪಿಸಿದರು. ಪ್ರವೀಣ ಖಂಡಾಳೆ ವಂದಿಸಿದರು. ಜಿಲ್ಲೆಯ ವಿವಿಧ ಶಾಲೆಗಳ 600 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾಲ್ಕಿ: ಸತತ ಪರಿಶ್ರಮ ಮತ್ತು ನಿರಂತರ ಪ್ರಯತ್ನಗಳಿಂದ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಚುನಾವಣಾ ಮುಖ್ಯಾಧಿಕಾರಿ ಪವನಕುಮಾರ ಮಾಲಪಾಟಿ ಹೇಳಿದರು.<br /> <br /> ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದಲ್ಲಿ ಸೋಮವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.<br /> <br /> ವಿದ್ಯಾರ್ಥಿ ಜೀವನದಿಂದಲೇ ದೊಡ್ಡ ಗುರಿ ಇಟ್ಟುಕೊಂಡು ಅದಕ್ಕೆ ಪೂರಕವಾಗಿ ಸಿದ್ಧತೆಗಳನ್ನು ನಡೆಸಿದರೆ ಖಂಡಿತ ಯಶಸ್ಸು ನಮ್ಮದಾಗುತ್ತದೆ ಎಂದರು.<br /> <br /> ಸಾನಿಧ್ಯ ವಹಿಸಿದ್ದ ಡಾ. ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಜಿಲ್ಲೆಯ 120 ಸರ್ಕಾರಿ ಮತ್ತು ಖಾಸಗಿ ಪ್ರೌಢ ಶಾಲೆಗಳಲ್ಲಿ ಪ್ರತಿಭಾ ಪರೀಕ್ಷೆಗಳನ್ನು ನಡೆಸಿ ಒಂದೊಂದು ಶಾಲೆಯಿಂದ 5–10 ಮಕ್ಕಳಿಗೆ ಸನ್ಮಾನಿಸಲಾಗುತ್ತಿದೆ ಎಂದು ಹೇಳಿದರು.<br /> <br /> ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಯಾವುದೇ ರೀತಿಯ ಒತ್ತಡಕ್ಕೆ ಒಳಗಾಗದೇ ಮುಕ್ತ ಮನಸ್ಸು ಹೊಂದಿರಬೇಕು ಎಂದು ಪ್ರಾಚಾರ್ಯ ಬಸವರಾಜ ಮೋಳಕೆರೆ ತಿಳಿಸಿದರು.<br /> <br /> ಜಿಲ್ಲಾಧಿಕಾರಿ ಮಾರ್ಗದರ್ಶನದಂತೆ ಜಿಲ್ಲೆಯ 120 ಶಾಲೆಗಳ 4ಸಾವಿರಕ್ಕೂ ಅಧಿಕ ಮಕ್ಕಳೊಂದಿಗೆ ಸತತ ಸಮಾಲೋಚನೆ ನಡೆಸುವ ಮೂಲಕ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವ ಸಿದ್ಧತೆ ಮಾಡಲಾಗಿದೆ ಎಂದು ಅಡಳಿತಾಧಿಕಾರಿ ಮೋಹನರೆಡ್ಡಿ ಹೇಳಿದರು.<br /> <br /> ಹಿರೇಮಠ ಸಂಸ್ಥಾನದ ಉತ್ತರಾಧಿಕಾರಿ ಗುರುಬಸವ ದೇವರು, ಸಂಸ್ಥೆಯ ಕಾರ್ಯದರ್ಶಿ ಮಹಾಲಿಂಗ ದೇವರು, ಬಸವಕಲ್ಯಾಣದ ವೈಜಿನಾಥ ಕಾಮಶೆಟ್ಟಿ, ಉಪನ್ಯಾಸಕ ಗುರುನಾಥ ಗಡ್ಡೆ, ಉದ್ಯಮಿ ಜಯರಾಜ ಖಂಡ್ರೆ, ವೆಂಕಟಪ್ಪ, ಮುಖಶಿಕ್ಷಕ ಲಕ್ಷ್ಮಣ ಮೇತ್ರೆ, ಬಸವರಾಜ ಪ್ರಭಾ ಇದ್ದರು.<br /> <br /> ಮಧುಕರ್ ಗಾಂವಕರ್ ನಿರೂಪಿಸಿದರು. ಪ್ರವೀಣ ಖಂಡಾಳೆ ವಂದಿಸಿದರು. ಜಿಲ್ಲೆಯ ವಿವಿಧ ಶಾಲೆಗಳ 600 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>