<p><strong>ಬೆಳಗಾವಿ:</strong> ‘ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿದು, ಅಹಿಂಸೆಯ ಮಾರ್ಗದಲ್ಲಿ ನಡೆಯುತ್ತಿರುವ ಜೈನ ಧರ್ಮ ಶ್ರೇಷ್ಠ ಧರ್ಮವಾಗಿದೆ. ಇಂದಿನ ಕುಲುಷಿತ ಸಮಾಜ ತಿದ್ದಲು ಜೈನ ಧರ್ಮದ ತತ್ವಗಳು ಅಗತ್ಯ’ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಹಿ.ಚಿ.ಬೋರಲಿಂಗಯ್ಯ ಮಂಗಳವಾರ ಇಲ್ಲಿ ಹೇಳಿದರು.<br /> <br /> ‘ಜೈನ ಧರ್ಮದಲ್ಲಿ ಯಕ್ಷ –ಯಕ್ಷಿಯರು, ಪ್ರೇರಣೆ–-ಪರಿಕಲ್ಪನೆ’ ವಿಷಯ ಕುರಿತು ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಭೇರಾಜ ಬಲ್ಡೋಟ ಜೈನ ಸಂಸ್ಕೃತಿ ಅಧ್ಯಯನ ಪೀಠದ ಸಹಯೋಗದಲ್ಲಿ ಇಲ್ಲಿನ ಭರತೇಶ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ವಿಚಾರಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಆಶಯ ಭಾಷಣ ಮಾಡಿದ ಡಾ. ಹಂಪ ನಾಗರಾಜಯ್ಯ, ‘ಯಕ್ಷ –ಯಕ್ಷಿಯರು ಜೈನ ಧರ್ಮಕ್ಕೆ ಸೀಮಿತವಾಗಿಲ್ಲ. ಬೌದ್ಧ ಧರ್ಮ ಸೇರಿದಂತೆ ಎಲ್ಲ ಧರ್ಮದಲ್ಲೂ ನಾವು ಯಕ್ಷ –ಯಕ್ಷಿಯರನ್ನು ಕಾಣಬಹುದು’ ಎಂದು ಹೇಳಿದರು.<br /> <br /> ‘ಜಿನ ಶಾಸನದ ದೇವ –ದೇವತಿಯರು ಎಂದು ಗುರುತಿಸಿಕೊಂಡಿರುವ ಯಕ್ಷ–ಯಕ್ಷಿಯರ ಇತಿಹಾಸ ದೊಡ್ಡದಾಗಿದೆ. ಜೈನ ಧರ್ಮದಲ್ಲಿ ತೀರ್ಥಂಕರರಂತೆ ಯಕ್ಷ – ಯಕ್ಷಿಯರಿಗೂ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿದು, ಅಹಿಂಸೆಯ ಮಾರ್ಗದಲ್ಲಿ ನಡೆಯುತ್ತಿರುವ ಜೈನ ಧರ್ಮ ಶ್ರೇಷ್ಠ ಧರ್ಮವಾಗಿದೆ. ಇಂದಿನ ಕುಲುಷಿತ ಸಮಾಜ ತಿದ್ದಲು ಜೈನ ಧರ್ಮದ ತತ್ವಗಳು ಅಗತ್ಯ’ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಹಿ.ಚಿ.ಬೋರಲಿಂಗಯ್ಯ ಮಂಗಳವಾರ ಇಲ್ಲಿ ಹೇಳಿದರು.<br /> <br /> ‘ಜೈನ ಧರ್ಮದಲ್ಲಿ ಯಕ್ಷ –ಯಕ್ಷಿಯರು, ಪ್ರೇರಣೆ–-ಪರಿಕಲ್ಪನೆ’ ವಿಷಯ ಕುರಿತು ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಭೇರಾಜ ಬಲ್ಡೋಟ ಜೈನ ಸಂಸ್ಕೃತಿ ಅಧ್ಯಯನ ಪೀಠದ ಸಹಯೋಗದಲ್ಲಿ ಇಲ್ಲಿನ ಭರತೇಶ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ವಿಚಾರಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಆಶಯ ಭಾಷಣ ಮಾಡಿದ ಡಾ. ಹಂಪ ನಾಗರಾಜಯ್ಯ, ‘ಯಕ್ಷ –ಯಕ್ಷಿಯರು ಜೈನ ಧರ್ಮಕ್ಕೆ ಸೀಮಿತವಾಗಿಲ್ಲ. ಬೌದ್ಧ ಧರ್ಮ ಸೇರಿದಂತೆ ಎಲ್ಲ ಧರ್ಮದಲ್ಲೂ ನಾವು ಯಕ್ಷ –ಯಕ್ಷಿಯರನ್ನು ಕಾಣಬಹುದು’ ಎಂದು ಹೇಳಿದರು.<br /> <br /> ‘ಜಿನ ಶಾಸನದ ದೇವ –ದೇವತಿಯರು ಎಂದು ಗುರುತಿಸಿಕೊಂಡಿರುವ ಯಕ್ಷ–ಯಕ್ಷಿಯರ ಇತಿಹಾಸ ದೊಡ್ಡದಾಗಿದೆ. ಜೈನ ಧರ್ಮದಲ್ಲಿ ತೀರ್ಥಂಕರರಂತೆ ಯಕ್ಷ – ಯಕ್ಷಿಯರಿಗೂ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>