<p>ಪ್ರಜಾವಾಣಿ ವಾರ್ತೆ<br /> ತುಮಕೂರು: ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಮಂಡಳಿಗೆ ಜ. 5ರಂದು ಚುನಾವಣೆ ನಡೆಯಲಿದೆ. ಜಿಲ್ಲೆಯಲ್ಲಿ ಒಕ್ಕಲಿಗ ಸಮುದಾಯವನ್ನು ರಾಜಕೀಯ, ಸಾಮಾಜಿಕ, ಶೈಕ್ಷಣಿಕವಾಗಿ ಮುನ್ನಡೆಸುವ ಉದ್ದೇಶದಿಂದ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದೇನೆ ಎಂದು ಬಿಜೆಪಿ ಮುಖಂಡ ಬ್ಯಾಟರಂಗೇಗೌಡ ಇಲ್ಲಿ ಸೋಮವಾರ ತಿಳಿಸಿದರು.<br /> <br /> ನಿರ್ದೇಶಕ ಮಂಡಳಿಗೆ ಜಿಲ್ಲೆಯಿಂದ ಇಬ್ಬರು ಆಯ್ಕೆ ಆಗಬೇಕಾಗಿದೆ. ಕಳೆದ 6 ತಿಂಗಳಿಂದ 15 ಸಾವಿರ ಮತದಾರರನ್ನು ಖುದ್ದು ಭೇಟಿ ಮಾಡಿ ಮತ ಯಾಚಿಸಿದ್ದೇನೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.<br /> <br /> ಒಕ್ಕಲಿಗರ ಸಂಘ ಸೇವಾ ಕ್ಷೇತ್ರ-ವಾಗಿದ್ದು, ಮತದಾರರು ಯಾವುದೇ ರೀತಿಯ ಆಮಿಷಗಳಿಗೆ ಒಳಗಾಗುವುದಿಲ್ಲ ಎಂಬ ಭಾವನೆ ಇದೆ. ಚುನಾವಣೆಗಾಗಿ ಹಣ ಖರ್ಚು ಮಾಡುವವರಿಗೆ ನಿಜವಾಗಿಯೂ ಸಮುದಾಯದ ಬಗ್ಗೆ ಕಾಳಜಿ ಇದ್ದರೆ ಹಣವನ್ನು ಸಮಾಜಕ್ಕೆ ದಾನ ಮಾಡಬೇಕು ಎಂದು ಸಲಹೆ ನೀಡಿದರು.<br /> <br /> ಜಿಲ್ಲೆಯಲ್ಲಿ ಒಟ್ಟು 20 ಸಾವಿರ ಮತದಾರರಿದ್ದು, ತುಮಕೂರು ನಗರದಲ್ಲಿ 5400, ಕುಣಿಗಲ್ 5700, ತುರುವೇಕೆರೆ 3400, ತಿಪಟೂರು 800, ಗುಬ್ಬಿ 1000, ಚಿಕ್ಕನಾಯಕನಹಳ್ಳಿ 45, ಶಿರಾ 550, ಮಧುಗಿರಿ 1600, ಕೊರಟಗೆರೆ 1200, ಪಾವಗಡದಲ್ಲಿ 80 ಮತದಾರರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ<br /> ತುಮಕೂರು: ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಮಂಡಳಿಗೆ ಜ. 5ರಂದು ಚುನಾವಣೆ ನಡೆಯಲಿದೆ. ಜಿಲ್ಲೆಯಲ್ಲಿ ಒಕ್ಕಲಿಗ ಸಮುದಾಯವನ್ನು ರಾಜಕೀಯ, ಸಾಮಾಜಿಕ, ಶೈಕ್ಷಣಿಕವಾಗಿ ಮುನ್ನಡೆಸುವ ಉದ್ದೇಶದಿಂದ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದೇನೆ ಎಂದು ಬಿಜೆಪಿ ಮುಖಂಡ ಬ್ಯಾಟರಂಗೇಗೌಡ ಇಲ್ಲಿ ಸೋಮವಾರ ತಿಳಿಸಿದರು.<br /> <br /> ನಿರ್ದೇಶಕ ಮಂಡಳಿಗೆ ಜಿಲ್ಲೆಯಿಂದ ಇಬ್ಬರು ಆಯ್ಕೆ ಆಗಬೇಕಾಗಿದೆ. ಕಳೆದ 6 ತಿಂಗಳಿಂದ 15 ಸಾವಿರ ಮತದಾರರನ್ನು ಖುದ್ದು ಭೇಟಿ ಮಾಡಿ ಮತ ಯಾಚಿಸಿದ್ದೇನೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.<br /> <br /> ಒಕ್ಕಲಿಗರ ಸಂಘ ಸೇವಾ ಕ್ಷೇತ್ರ-ವಾಗಿದ್ದು, ಮತದಾರರು ಯಾವುದೇ ರೀತಿಯ ಆಮಿಷಗಳಿಗೆ ಒಳಗಾಗುವುದಿಲ್ಲ ಎಂಬ ಭಾವನೆ ಇದೆ. ಚುನಾವಣೆಗಾಗಿ ಹಣ ಖರ್ಚು ಮಾಡುವವರಿಗೆ ನಿಜವಾಗಿಯೂ ಸಮುದಾಯದ ಬಗ್ಗೆ ಕಾಳಜಿ ಇದ್ದರೆ ಹಣವನ್ನು ಸಮಾಜಕ್ಕೆ ದಾನ ಮಾಡಬೇಕು ಎಂದು ಸಲಹೆ ನೀಡಿದರು.<br /> <br /> ಜಿಲ್ಲೆಯಲ್ಲಿ ಒಟ್ಟು 20 ಸಾವಿರ ಮತದಾರರಿದ್ದು, ತುಮಕೂರು ನಗರದಲ್ಲಿ 5400, ಕುಣಿಗಲ್ 5700, ತುರುವೇಕೆರೆ 3400, ತಿಪಟೂರು 800, ಗುಬ್ಬಿ 1000, ಚಿಕ್ಕನಾಯಕನಹಳ್ಳಿ 45, ಶಿರಾ 550, ಮಧುಗಿರಿ 1600, ಕೊರಟಗೆರೆ 1200, ಪಾವಗಡದಲ್ಲಿ 80 ಮತದಾರರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>