<p><strong>ಯಲಹಂಕ: </strong>‘ನಮ್ಮಲ್ಲಿರುವ ಸಸ್ಯ ತಳಿಗಳನ್ನು ಅದರಲ್ಲೂ ವಿಶೇಷವಾಗಿ ರೈತರು ಸಂರಕ್ಷಿಸಿದ ಸಸ್ಯತಳಿಗಳನ್ನು ರಕ್ಷಣೆ ಮಾಡಬೇಕು. ಹಾಗೆಯೇ ಹಲಸಿನ ವಿವಿಧ ದೇಶೀ ತಳಿಗಳನ್ನು ಸಂರಕ್ಷಣೆ ಮಾಡುವುದು ಬಹಳ ಮುಖ್ಯ’ ಎಂದು ಸಸ್ಯತಳಿ ಮತ್ತು ರೈತರ ಹಕ್ಕುಗಳ ಪ್ರಾಧಿಕಾರದ (ನವದೆಹಲಿ) ಅಧ್ಯಕ್ಷ ಡಾ.ಆರ್.ಆರ್. ಹಂಚಿನಾಳ್ ಹೇಳಿದರು.<br /> <br /> ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಹಾಗೂ ಜೈವಿಕ ತಂತ್ರಜ್ಞಾನ ವಿಭಾ ಗದ (ನವದೆಹಲಿ) ಆಶ್ರಯದಲ್ಲಿ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಹಲಸು ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.<br /> <br /> ‘ಸಸ್ಯತಳಿಗಳನ್ನು ಕಾನೂನಿನ ಚೌಕಟ್ಟಿನಲ್ಲಿ ರಕ್ಷಣೆ ಮಾಡಲು ಮತ್ತು ರೈತರ ಹಕ್ಕುಗಳನ್ನು ರಕ್ಷಿಸಲು ಭಾರತ ಸರ್ಕಾರ ಸಸ್ಯತಳಿ ಮತ್ತು ರೈತರ ಹಕ್ಕುಗಳ ರಕ್ಷಣೆ ಕಾಯಿದೆಯನ್ನು ಅನುಷ್ಠಾನಗೊಳಿಸುತ್ತಿದ್ದು, ಈ ಕಾನೂ ನಿನ ಕುರಿತು ಅರಿವು ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಲುವಾಗಿ ಪ್ರಾಧಿಕಾರವು ಪ್ರಸ್ತುತ ವರ್ಷದಲ್ಲಿ ₨5 ಕೋಟಿ ಅನುದಾನವನ್ನು ಮೀಸಲಿರಿಸಿದೆ’ ಎಂದು ತಿಳಿಸಿದರು.<br /> <br /> ಭಾರತೀಯ ಕೃಷಿ ಸಂಶೋಧನಾ ಪರಿಷತ್ನ (ತೋಟಗಾರಿಕೆ) ಉಪ ಮಹಾನಿರ್ದೇಶಕ ಡಾ.ಎನ್.ಕೆ. ಕೃಷ್ಣಕುಮಾರ್ ಮಾತನಾಡಿ, ‘ಹಲಸು ಭಾರತದ ಪ್ರಮುಖ ನಾಟಿ ಹಣ್ಣಿನ ಬೆಳೆಯಾಗಿದ್ದು, ಹಣ್ಣಿ ಗಾಗಿ, ಮರಕ್ಕಾಗಿ ಉಪಯೋಗಿಸುವ ಬಹುಪಯೋಗಿ ಬೆಳೆಯಾಗಿದೆ.<br /> <br /> ಶೈತ್ಯಾಗಾರದಲ್ಲಿ ಹಲಸಿನ ಪರಾಗರೇಣುವನ್ನು ಸಂರಕ್ಷಿಸುವ ಮೂಲಕ ಹಲಸಿನ ವಿವಿಧ ಬೆಳೆ ಜಾತಿಗಳನ್ನು ಸಂರಕ್ಷಿಸಬಹುದು’ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಕೃಷಿ ಪದವೀಧರರಾಗಿ ಕೃಷಿ ಕ್ಷೇತ್ರದ ಬೆಳವಣಿಗೆಗಾಗಿ ಸೇವೆ ಸಲ್ಲಿಸಿರುವ ಜಿಲ್ಲೆಗಳ 32 ಸಾಧಕರನ್ನು ಸನ್ಮಾನಿಸಲಾಯಿತು.<br /> <br /> ಕರ್ನಾಟಕ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಎ.ಎಸ್.ಪ್ರೇಮ ನಾಥ್, ಕೆನರಾ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಆರ್.ಕೆ.ಭಂಡಾರಿ, ಕೃಷಿ ವಿವಿ ವಿಸ್ತರಣಾ ನಿರ್ದೇಶಕ ಡಾ.ಎನ್.ನಾಗರಾಜ್, ಶಿಕ್ಷಣ ನಿರ್ದೇ ಶಕ ಡಾ.ಡಿ. ಪಿ.ಕುಮಾರ್, ವ್ಯವಸ್ಥಾಪಕ ಮಂಡಳಿ ಸದಸ್ಯರಾದ ಆಶಾ ಶೇಷಾದ್ರಿ, ಪ್ರೊ.ಹಿರೇವೆಂಕಣ್ಣಗೌಡರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ: </strong>‘ನಮ್ಮಲ್ಲಿರುವ ಸಸ್ಯ ತಳಿಗಳನ್ನು ಅದರಲ್ಲೂ ವಿಶೇಷವಾಗಿ ರೈತರು ಸಂರಕ್ಷಿಸಿದ ಸಸ್ಯತಳಿಗಳನ್ನು ರಕ್ಷಣೆ ಮಾಡಬೇಕು. ಹಾಗೆಯೇ ಹಲಸಿನ ವಿವಿಧ ದೇಶೀ ತಳಿಗಳನ್ನು ಸಂರಕ್ಷಣೆ ಮಾಡುವುದು ಬಹಳ ಮುಖ್ಯ’ ಎಂದು ಸಸ್ಯತಳಿ ಮತ್ತು ರೈತರ ಹಕ್ಕುಗಳ ಪ್ರಾಧಿಕಾರದ (ನವದೆಹಲಿ) ಅಧ್ಯಕ್ಷ ಡಾ.ಆರ್.ಆರ್. ಹಂಚಿನಾಳ್ ಹೇಳಿದರು.<br /> <br /> ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಹಾಗೂ ಜೈವಿಕ ತಂತ್ರಜ್ಞಾನ ವಿಭಾ ಗದ (ನವದೆಹಲಿ) ಆಶ್ರಯದಲ್ಲಿ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಹಲಸು ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.<br /> <br /> ‘ಸಸ್ಯತಳಿಗಳನ್ನು ಕಾನೂನಿನ ಚೌಕಟ್ಟಿನಲ್ಲಿ ರಕ್ಷಣೆ ಮಾಡಲು ಮತ್ತು ರೈತರ ಹಕ್ಕುಗಳನ್ನು ರಕ್ಷಿಸಲು ಭಾರತ ಸರ್ಕಾರ ಸಸ್ಯತಳಿ ಮತ್ತು ರೈತರ ಹಕ್ಕುಗಳ ರಕ್ಷಣೆ ಕಾಯಿದೆಯನ್ನು ಅನುಷ್ಠಾನಗೊಳಿಸುತ್ತಿದ್ದು, ಈ ಕಾನೂ ನಿನ ಕುರಿತು ಅರಿವು ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಲುವಾಗಿ ಪ್ರಾಧಿಕಾರವು ಪ್ರಸ್ತುತ ವರ್ಷದಲ್ಲಿ ₨5 ಕೋಟಿ ಅನುದಾನವನ್ನು ಮೀಸಲಿರಿಸಿದೆ’ ಎಂದು ತಿಳಿಸಿದರು.<br /> <br /> ಭಾರತೀಯ ಕೃಷಿ ಸಂಶೋಧನಾ ಪರಿಷತ್ನ (ತೋಟಗಾರಿಕೆ) ಉಪ ಮಹಾನಿರ್ದೇಶಕ ಡಾ.ಎನ್.ಕೆ. ಕೃಷ್ಣಕುಮಾರ್ ಮಾತನಾಡಿ, ‘ಹಲಸು ಭಾರತದ ಪ್ರಮುಖ ನಾಟಿ ಹಣ್ಣಿನ ಬೆಳೆಯಾಗಿದ್ದು, ಹಣ್ಣಿ ಗಾಗಿ, ಮರಕ್ಕಾಗಿ ಉಪಯೋಗಿಸುವ ಬಹುಪಯೋಗಿ ಬೆಳೆಯಾಗಿದೆ.<br /> <br /> ಶೈತ್ಯಾಗಾರದಲ್ಲಿ ಹಲಸಿನ ಪರಾಗರೇಣುವನ್ನು ಸಂರಕ್ಷಿಸುವ ಮೂಲಕ ಹಲಸಿನ ವಿವಿಧ ಬೆಳೆ ಜಾತಿಗಳನ್ನು ಸಂರಕ್ಷಿಸಬಹುದು’ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಕೃಷಿ ಪದವೀಧರರಾಗಿ ಕೃಷಿ ಕ್ಷೇತ್ರದ ಬೆಳವಣಿಗೆಗಾಗಿ ಸೇವೆ ಸಲ್ಲಿಸಿರುವ ಜಿಲ್ಲೆಗಳ 32 ಸಾಧಕರನ್ನು ಸನ್ಮಾನಿಸಲಾಯಿತು.<br /> <br /> ಕರ್ನಾಟಕ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಎ.ಎಸ್.ಪ್ರೇಮ ನಾಥ್, ಕೆನರಾ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಆರ್.ಕೆ.ಭಂಡಾರಿ, ಕೃಷಿ ವಿವಿ ವಿಸ್ತರಣಾ ನಿರ್ದೇಶಕ ಡಾ.ಎನ್.ನಾಗರಾಜ್, ಶಿಕ್ಷಣ ನಿರ್ದೇ ಶಕ ಡಾ.ಡಿ. ಪಿ.ಕುಮಾರ್, ವ್ಯವಸ್ಥಾಪಕ ಮಂಡಳಿ ಸದಸ್ಯರಾದ ಆಶಾ ಶೇಷಾದ್ರಿ, ಪ್ರೊ.ಹಿರೇವೆಂಕಣ್ಣಗೌಡರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>