<p><strong>ರಾಯಚೂರು:</strong> ಸಾವಯವ ಪದ್ಧತಿಯಿಂದ ಬೆಳೆಯುವ ಆಹಾರ ಪದಾರ್ಥಗಳ ಉಪಯೋಗದಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಎಸ್.ಎನ್ ನಾಗರಾಜು ಅಭಿಪ್ರಾಯಪಟ್ಟರು.<br /> <br /> ಇಲ್ಲಿನ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ವಿವಿಧ ಸಂಘಟನೆಗಳು ಮತ್ತು ಸಂಸ್ಥೆಗಳ ಆಶ್ರಯದಲ್ಲಿ ಭಾನುವಾರ ನಡೆದ ‘ಆರೋಗ್ಯಕ್ಕಾಗಿ ಎಂತಹ ಆಹಾರ ಉಪಯೋಗಿಸಬೇಕು’ ವಿಷಯ ಕುರಿತ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ಮನುಷ್ಯ ದುರಾಸೆಯಿಂದ ಅಧಿಕ ಉತ್ಪಾದನೆಗಾಗಿ ರಾಸಾಯನಿಕ ಬಳಕೆ ಪ್ರಮಾಣ ಹೆಚ್ಚು ಮಾಡಿದ ಪರಿಣಾಮ ಭೂಮಿ ಫಲವತ್ತತೆ ಕಳೆದುಕೊಳ್ಳುತ್ತಿದೆ. ಇದರಿಂದ ಬೆಳೆಯುವ ಆಹಾರ ಪದಾರ್ಥಗಳ ಮೇಲೆಯೂ ಪರಿಣಾಮ ಬೀರುತ್ತಿದೆ’ ಎಂದು ಹೇಳಿದರು.<br /> <br /> ದೇಶದಲ್ಲಿ ಶೇ 50ರಷ್ಟು ಮಂದಿ ಮಧುಮೇಹ (ಡಯಾಬಿಟಿಸ್)ಹೊಂದಿದ್ದಾರೆ ಎಂದ ಅವರು, ಹೆಚ್ಚು ರಾಸಾಯನಿಕ ಬಳಸಿದ ಪರಿಣಾಮ ಆಹಾರ ಪದಾರ್ಥಗಳು ಕಲುಷಿತಗೊಂಡಿವೆ. ಉತ್ತಮ ಆಹಾರಕ್ಕಾಗಿ ಕೃಷಿಯಲ್ಲಿ ಸಾವಯವ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.<br /> <br /> ವಿಷಪೂರಿತ ಆಹಾರ ಪದಾರ್ಥಗಳ ಬಳಕೆ ಕೈ ಬಿಡಬೇಕು. ಸಾವಯವ ಕೃಷಿಗೆ ಒತ್ತು ನೀಡಬೇಕು. ಪರಿಸರ ಕಾಳಜಿಯನ್ನು ಪ್ರತಿಯೊಬ್ಬರು ಬೆಳಸಿಕೊಳ್ಳಬೇಕು. ದಿನನಿತ್ಯ ಚಟುವಟಿಕೆಗಳಲ್ಲಿ ವ್ಯಾಯಾಮ, ಯೋಗವನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದರು.<br /> <br /> ಉಪನ್ಯಾಸಕರಾಗಿ ಆಗಮಿಸಿದ್ದ ಮೈಸೂರಿನ ಹಿರಿಯ ವಿಜ್ಞಾನಿ ಡಾ.ಖಾದರ್ ಮಾತನಾಡಿ, ವಾತಾವರಣ ಬದಲಾವಣೆಯಾಗಬೇಕಿದೆ. ಕಲುಷಿತ ಆಹಾರ ಪದಾರ್ಥದ ಬಳಕೆಯಿಂದ ಅನೇಕ ರೋಗಗಳಿಗೆ ತುತ್ತಾಗುವ ಸ್ಥಿತಿ ಬಂದಿದೆ. ಸಾವಯವ ಪದ್ಧತಿಯಲ್ಲಿ ಬೆಳೆದ ಆಹಾರ ಪದಾರ್ಥಗಳ ಉಪಯೋಗ ಉತ್ತಮ ಪರಿಹಾರ ಎಂದರು.<br /> <br /> ಕೃಷಿ ಭಾರತ ಪತ್ರಿಕೆ ಸಂಪಾದಕ ಚಂದ್ರಶೇಖರ ಬಾಳೆ ಅಧ್ಯಕ್ಷತೆ ವಹಿಸಿದ್ದರು.ಬಂದಪ್ಪಗೌಡ ಐರೆಡ್ಡಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಸಾವಯವ ಪದ್ಧತಿಯಿಂದ ಬೆಳೆಯುವ ಆಹಾರ ಪದಾರ್ಥಗಳ ಉಪಯೋಗದಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಎಸ್.ಎನ್ ನಾಗರಾಜು ಅಭಿಪ್ರಾಯಪಟ್ಟರು.<br /> <br /> ಇಲ್ಲಿನ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ವಿವಿಧ ಸಂಘಟನೆಗಳು ಮತ್ತು ಸಂಸ್ಥೆಗಳ ಆಶ್ರಯದಲ್ಲಿ ಭಾನುವಾರ ನಡೆದ ‘ಆರೋಗ್ಯಕ್ಕಾಗಿ ಎಂತಹ ಆಹಾರ ಉಪಯೋಗಿಸಬೇಕು’ ವಿಷಯ ಕುರಿತ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ಮನುಷ್ಯ ದುರಾಸೆಯಿಂದ ಅಧಿಕ ಉತ್ಪಾದನೆಗಾಗಿ ರಾಸಾಯನಿಕ ಬಳಕೆ ಪ್ರಮಾಣ ಹೆಚ್ಚು ಮಾಡಿದ ಪರಿಣಾಮ ಭೂಮಿ ಫಲವತ್ತತೆ ಕಳೆದುಕೊಳ್ಳುತ್ತಿದೆ. ಇದರಿಂದ ಬೆಳೆಯುವ ಆಹಾರ ಪದಾರ್ಥಗಳ ಮೇಲೆಯೂ ಪರಿಣಾಮ ಬೀರುತ್ತಿದೆ’ ಎಂದು ಹೇಳಿದರು.<br /> <br /> ದೇಶದಲ್ಲಿ ಶೇ 50ರಷ್ಟು ಮಂದಿ ಮಧುಮೇಹ (ಡಯಾಬಿಟಿಸ್)ಹೊಂದಿದ್ದಾರೆ ಎಂದ ಅವರು, ಹೆಚ್ಚು ರಾಸಾಯನಿಕ ಬಳಸಿದ ಪರಿಣಾಮ ಆಹಾರ ಪದಾರ್ಥಗಳು ಕಲುಷಿತಗೊಂಡಿವೆ. ಉತ್ತಮ ಆಹಾರಕ್ಕಾಗಿ ಕೃಷಿಯಲ್ಲಿ ಸಾವಯವ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.<br /> <br /> ವಿಷಪೂರಿತ ಆಹಾರ ಪದಾರ್ಥಗಳ ಬಳಕೆ ಕೈ ಬಿಡಬೇಕು. ಸಾವಯವ ಕೃಷಿಗೆ ಒತ್ತು ನೀಡಬೇಕು. ಪರಿಸರ ಕಾಳಜಿಯನ್ನು ಪ್ರತಿಯೊಬ್ಬರು ಬೆಳಸಿಕೊಳ್ಳಬೇಕು. ದಿನನಿತ್ಯ ಚಟುವಟಿಕೆಗಳಲ್ಲಿ ವ್ಯಾಯಾಮ, ಯೋಗವನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದರು.<br /> <br /> ಉಪನ್ಯಾಸಕರಾಗಿ ಆಗಮಿಸಿದ್ದ ಮೈಸೂರಿನ ಹಿರಿಯ ವಿಜ್ಞಾನಿ ಡಾ.ಖಾದರ್ ಮಾತನಾಡಿ, ವಾತಾವರಣ ಬದಲಾವಣೆಯಾಗಬೇಕಿದೆ. ಕಲುಷಿತ ಆಹಾರ ಪದಾರ್ಥದ ಬಳಕೆಯಿಂದ ಅನೇಕ ರೋಗಗಳಿಗೆ ತುತ್ತಾಗುವ ಸ್ಥಿತಿ ಬಂದಿದೆ. ಸಾವಯವ ಪದ್ಧತಿಯಲ್ಲಿ ಬೆಳೆದ ಆಹಾರ ಪದಾರ್ಥಗಳ ಉಪಯೋಗ ಉತ್ತಮ ಪರಿಹಾರ ಎಂದರು.<br /> <br /> ಕೃಷಿ ಭಾರತ ಪತ್ರಿಕೆ ಸಂಪಾದಕ ಚಂದ್ರಶೇಖರ ಬಾಳೆ ಅಧ್ಯಕ್ಷತೆ ವಹಿಸಿದ್ದರು.ಬಂದಪ್ಪಗೌಡ ಐರೆಡ್ಡಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>