<p>ನವದೆಹಲಿ (ಪಿಟಿಐ): ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಬಿಜೆಪಿ ಪ್ರಧಾನಿ ಅರ್ಭ್ಯರ್ಥಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸುವುದನ್ನು ಕಾಂಗ್ರೆಸ್ ಮುಂದುವರಿಸಿದೆ.<br /> <br /> ‘ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್ಐಟಿ)ಕ್ಕಿದ್ದ ಅಧಿಕಾರ ಅತ್ಯಲ್ಪವಾಗಿತ್ತು. ಆದ್ದರಿಂದ ಸುಪ್ರೀಂಕೋರ್ಟ್ ಸ್ವತಂತ್ರ ತನಿಖಾ ತಂಡ ರಚಿಸಿ ಗಲಭೆಯ ತನಿಖೆಯನ್ನು ಅದಕ್ಕೆ ವಹಿಸಬೇಕು’ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಕಪೀಲ್ ಸಿಬಲ್ ಶನಿವಾರ ಹೇಳಿದರು.<br /> <br /> ‘ಭ್ರಷ್ಟಾಚಾರ ಪ್ರಕರಣಗಳನ್ನು ನಿರ್ವಹಿಸಲು ಪ್ರಾಮುಖ್ಯತೆ ನೀಡುವುದರೊಂದಿಗೆ ಮಾನವೀಯತೆ ಜೀವಂತವಾಗಿಡಲು ಸುಪ್ರೀಂಕೋರ್ಟ್ ಸ್ವತಂತ್ರ ತನಿಖಾ ತಂಡ ರಚಿಸಿ ಗುಜರಾತ್ ಗಲಭೆಗೆ ಸಂಬಂಧಿಸಿದ ಎಲ್ಲ ಪ್ರಕರಣಗಳನ್ನು ಅದಕ್ಕೆ ನೀಡಿ ಮೇಲ್ವಿಚಾರಣೆ ಮಾಡಬೇಕು’ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.<br /> <br /> ‘ಗಲಭೆ ನಡೆದ ಆರು ವರ್ಷಗಳ ನಂತರ ಎಸ್ಐಟಿ ರಚಿಸಲಾಯಿತು. ಈ ತಂಡದಲ್ಲಿದ್ದ ಪೊಲೀಸ್ ಅಧಿಕಾರಿಗಳ ವ್ಯಾಪ್ತಿಯಲ್ಲೇ ಗಲಭೆಗಳು ನಡೆದಿತ್ತು. ಗಲಭೆಯ ಬಗ್ಗೆ ಸಿಬಿಐನಂತೆ ತನಿಖೆ ನಡೆಸುವ ಅಧಿಕಾರ ಎಸ್ಐಟಿಗೆ ಇಲ್ಲ. ಅದು ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಬಹುದು ಅಷ್ಟೇ’ ಎಂದರು.<br /> <br /> ಕಾಂಗ್ರೆಸ್ ನಾಯಕನಾಗಿ ಈ ಹೇಳಿಕೆಗಳನ್ನು ನೀಡುತ್ತಿದ್ದೇನೆಯೇ ಹೊರತು ಸಂಸದನಾಗಿ ಅಥವಾ ದೇಶದ ಕಾನೂನು ಸಚಿವನಾಗಿ ಅಲ್ಲ ಎನ್ನುವುದನ್ನು ಅವರು ಸ್ಪಷ್ಟಪಡಿಸಿದರು.<br /> <br /> ಈ ವಿಷಯವನ್ನು ಮೊದಲೇ ಏಕೆ ಹೇಳಿರಲಿಲ್ಲ ಎಂದು ಕೇಳಿದ ಪ್ರಶ್ನೆಗೆ ‘ಗಲಭೆ ಸಂತ್ರಸ್ತರ ಪರವಾಗಿ ನಾನು ನ್ಯಾಯಾಲಯಕ್ಕೆ ಹೋಗಿದ್ದೆ’ ಎಂದು ಉತ್ತರಿಸಿದರು.<br /> ‘ದೇಶದಲ್ಲಿ ಮೋದಿ ಪರ ಅಲೆ ಇಲ್ಲ. ಪ್ರಾದೇಶಿಕ ಪ್ರಕ್ಷಗಳೊಂದಿಗೆ ಬಿಜೆಪಿ ಕೈಜೋಡಿಸುತ್ತಿರುವುದು ನೋಡಿದರೆ ಮೋದಿ ಅವರ ವೈಯಕ್ತಿಕ ವರ್ಚಸ್ಸು ಬಿಜೆಪಿಗೆ ಅಗತ್ಯವಿರುವ ಸಂಸದ ಸಂಖ್ಯೆ ತಂದುಕೊಡುತ್ತದೆ ಎನ್ನುವುದನ್ನು ಹೇಳಲಾಗದು’ ಎಂದು ಸಿಬಲ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಬಿಜೆಪಿ ಪ್ರಧಾನಿ ಅರ್ಭ್ಯರ್ಥಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸುವುದನ್ನು ಕಾಂಗ್ರೆಸ್ ಮುಂದುವರಿಸಿದೆ.<br /> <br /> ‘ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್ಐಟಿ)ಕ್ಕಿದ್ದ ಅಧಿಕಾರ ಅತ್ಯಲ್ಪವಾಗಿತ್ತು. ಆದ್ದರಿಂದ ಸುಪ್ರೀಂಕೋರ್ಟ್ ಸ್ವತಂತ್ರ ತನಿಖಾ ತಂಡ ರಚಿಸಿ ಗಲಭೆಯ ತನಿಖೆಯನ್ನು ಅದಕ್ಕೆ ವಹಿಸಬೇಕು’ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಕಪೀಲ್ ಸಿಬಲ್ ಶನಿವಾರ ಹೇಳಿದರು.<br /> <br /> ‘ಭ್ರಷ್ಟಾಚಾರ ಪ್ರಕರಣಗಳನ್ನು ನಿರ್ವಹಿಸಲು ಪ್ರಾಮುಖ್ಯತೆ ನೀಡುವುದರೊಂದಿಗೆ ಮಾನವೀಯತೆ ಜೀವಂತವಾಗಿಡಲು ಸುಪ್ರೀಂಕೋರ್ಟ್ ಸ್ವತಂತ್ರ ತನಿಖಾ ತಂಡ ರಚಿಸಿ ಗುಜರಾತ್ ಗಲಭೆಗೆ ಸಂಬಂಧಿಸಿದ ಎಲ್ಲ ಪ್ರಕರಣಗಳನ್ನು ಅದಕ್ಕೆ ನೀಡಿ ಮೇಲ್ವಿಚಾರಣೆ ಮಾಡಬೇಕು’ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.<br /> <br /> ‘ಗಲಭೆ ನಡೆದ ಆರು ವರ್ಷಗಳ ನಂತರ ಎಸ್ಐಟಿ ರಚಿಸಲಾಯಿತು. ಈ ತಂಡದಲ್ಲಿದ್ದ ಪೊಲೀಸ್ ಅಧಿಕಾರಿಗಳ ವ್ಯಾಪ್ತಿಯಲ್ಲೇ ಗಲಭೆಗಳು ನಡೆದಿತ್ತು. ಗಲಭೆಯ ಬಗ್ಗೆ ಸಿಬಿಐನಂತೆ ತನಿಖೆ ನಡೆಸುವ ಅಧಿಕಾರ ಎಸ್ಐಟಿಗೆ ಇಲ್ಲ. ಅದು ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಬಹುದು ಅಷ್ಟೇ’ ಎಂದರು.<br /> <br /> ಕಾಂಗ್ರೆಸ್ ನಾಯಕನಾಗಿ ಈ ಹೇಳಿಕೆಗಳನ್ನು ನೀಡುತ್ತಿದ್ದೇನೆಯೇ ಹೊರತು ಸಂಸದನಾಗಿ ಅಥವಾ ದೇಶದ ಕಾನೂನು ಸಚಿವನಾಗಿ ಅಲ್ಲ ಎನ್ನುವುದನ್ನು ಅವರು ಸ್ಪಷ್ಟಪಡಿಸಿದರು.<br /> <br /> ಈ ವಿಷಯವನ್ನು ಮೊದಲೇ ಏಕೆ ಹೇಳಿರಲಿಲ್ಲ ಎಂದು ಕೇಳಿದ ಪ್ರಶ್ನೆಗೆ ‘ಗಲಭೆ ಸಂತ್ರಸ್ತರ ಪರವಾಗಿ ನಾನು ನ್ಯಾಯಾಲಯಕ್ಕೆ ಹೋಗಿದ್ದೆ’ ಎಂದು ಉತ್ತರಿಸಿದರು.<br /> ‘ದೇಶದಲ್ಲಿ ಮೋದಿ ಪರ ಅಲೆ ಇಲ್ಲ. ಪ್ರಾದೇಶಿಕ ಪ್ರಕ್ಷಗಳೊಂದಿಗೆ ಬಿಜೆಪಿ ಕೈಜೋಡಿಸುತ್ತಿರುವುದು ನೋಡಿದರೆ ಮೋದಿ ಅವರ ವೈಯಕ್ತಿಕ ವರ್ಚಸ್ಸು ಬಿಜೆಪಿಗೆ ಅಗತ್ಯವಿರುವ ಸಂಸದ ಸಂಖ್ಯೆ ತಂದುಕೊಡುತ್ತದೆ ಎನ್ನುವುದನ್ನು ಹೇಳಲಾಗದು’ ಎಂದು ಸಿಬಲ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>