<p><strong>ಬೆಂಗಳೂರು: </strong>ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ತಪ್ಪಿಸಿಕೊಂಡಿದ್ದ ‘ಸೈಕೊ’ ಶಂಕರ್ ಪತ್ತೆಗೆ ಸುಳಿವು ನೀಡಿದ್ದ ಬನಶಂಕರಿ ನಿವಾಸಿ ಅಬ್ದುಲ್ ಮುದಾಸಿರ್ ಪಾಷಾ ಅವರಿಗೆ ಪೊಲೀಸ್ ಇಲಾಖೆಯಿಂದ ₨ 5 ಲಕ್ಷ ಬಹುಮಾನ ವಿತರಿಸಲಾಯಿತು. ನಗರ ಉತ್ತರ ವಿಭಾಗದ ಪೊಲೀಸರು ಮಲ್ಲೇಶ್ವರ ಆಟದ ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ ಕಳವು ಮಾಲುಗಳನ್ನು ಹಿಂದಿರುಗಿಸುವ ಪರೇಡ್ನಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರು ಬಹುಮಾನದ ಚೆಕ್ ವಿತರಿಸಿದರು.<br /> <br /> 2013ರ ಸೆ.1ರಂದು ‘ಸೈಕೊ’ ಶಂಕರ್ ಜೈಲಿನಿಂದ ಪರಾರಿಯಾಗಿದ್ದ. ಆರೋಪಿ ಪತ್ತೆಗೆ ಮಾಹಿತಿ ನೀಡುವವರಿಗೆ ₨ 5 ಲಕ್ಷ ಬಹುಮಾನ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಮುದಾಸಿರ್ ಪಾಷಾ ನೀಡಿದ ಸುಳಿವಿನ ಆಧಾರದ ಮೇಲೆ ಪೊಲೀಸರು ಆತನನ್ನು ಸೆ.6 ರಂದು ಕೂಡ್ಲುಗೇಟ್ ಬಳಿ ಬಂಧಿಸಿದ್ದರು.<br /> <br /> ಬಹುಮಾನ ಸ್ವೀಕರಿಸಿ ಮಾತನಾಡಿದ ಮುದಾಸಿರ್ ಪಾಷಾ, ‘2012ರಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಜೈಲು ಸೇರಿದ್ದೆ. ಅದೇ ವರ್ಷ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದೆ. ಜೈಲಿನಲ್ಲಿದ್ದಾಗ ಸೈಕೊ ಶಂಕರ್ ಪಕ್ಕದ ಬ್ಯಾರಕ್ನಲ್ಲೇ ನಾನು ಇದ್ದೆ. ಆಗ ಆತನ ಪರಿಚಯವಾಗಿತ್ತು. ಆ ಸಂದರ್ಭದಲ್ಲಿ ಆತ ನನ್ನ ಮೊಬೈಲ್ ಸಂಖ್ಯೆ ಪಡೆದಿದ್ದ’ ಎಂದು ಹೇಳಿದರು.<br /> <br /> ‘ಜೈಲಿನಿಂದ ಪರಾರಿಯಾದ ಐದು ದಿನಗಳ ನಂತರ ಆತ ನನ್ನ ಮೊಬೈಲ್ಗೆ ಕರೆ ಮಾಡಿದ್ದ. ತಾನು ಕೂಡ್ಲುಗೇಟ್ ಬಳಿಯ ಗುಡಿಸಲಿನಲ್ಲಿದ್ದು ಊಟ ಹಾಗೂ ಬೈಕ್ ತೆಗೆದುಕೊಂಡು ಬರುವಂತೆ ಆತ ತಿಳಿಸಿದ್ದ. ಈ ವಿಷಯವನ್ನು ಕೂಡಲೆ ಪೊಲೀಸರಿಗೆ ತಿಳಿಸಿದೆ’ ಎಂದರು. ಮುದಾಸಿರ್ ಪಾಷಾ ಕಟ್ಟಡ ನಿರ್ಮಾಣ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದಾರೆ.<br /> <br /> ಸಾರ್ವಜನಿಕರ ಸಹಕಾರ ಅಗತ್ಯ: ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ, ‘ಅಪರಾಧ ಪ್ರಕರಣಗಳನ್ನು ತಗ್ಗಿಸಲು ಪೊಲೀಸರು ಸಾರ್ವಜನಿಕರೊಂದಿಗೆ ಸಹಕರಿಸಬೇಕಾದ್ದು ಅಗತ್ಯ. ನಗರದಲ್ಲಿ ಅಪರಾಧ ಪ್ರಕರಣಗಳನ್ನು ತಗ್ಗಿಸಲು ಪೊಲೀಸರು ಸಾಕಷ್ಟು ಶ್ರಮ ಪಡುತ್ತಿದ್ದಾರೆ’ ಎಂದರು.<br /> <br /> ನಗರ ಪೊಲೀಸ್ ಕಮಿಷನರ್ ರಾಘವೇಂದ್ರ ಔರಾದಕರ್ ಮಾತನಾಡಿ, ‘ಉತ್ತರ ವಿಭಾಗದ ಪೊಲೀಸರು ಎರಡು ತಿಂಗಳಲ್ಲಿ 178 ಪ್ರಕರಣಗಳನ್ನು ಭೇದಿಸಿ, 107 ಮಂದಿ ಆರೋಪಿಗಳನ್ನು ಬಂಧಿಸಿ ₨ 4.2 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ’ ಎಂದು ತಿಳಿಸಿದರು. ಆರೋಪಿಗಳಿಂದ ವಶಪಡಿಸಿಕೊಂಡ ವಸ್ತುಗಳನ್ನು ಅವುಗಳ ಮಾಲೀಕರಿಗೆ ಹಿಂದಿರುಗಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ತಪ್ಪಿಸಿಕೊಂಡಿದ್ದ ‘ಸೈಕೊ’ ಶಂಕರ್ ಪತ್ತೆಗೆ ಸುಳಿವು ನೀಡಿದ್ದ ಬನಶಂಕರಿ ನಿವಾಸಿ ಅಬ್ದುಲ್ ಮುದಾಸಿರ್ ಪಾಷಾ ಅವರಿಗೆ ಪೊಲೀಸ್ ಇಲಾಖೆಯಿಂದ ₨ 5 ಲಕ್ಷ ಬಹುಮಾನ ವಿತರಿಸಲಾಯಿತು. ನಗರ ಉತ್ತರ ವಿಭಾಗದ ಪೊಲೀಸರು ಮಲ್ಲೇಶ್ವರ ಆಟದ ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ ಕಳವು ಮಾಲುಗಳನ್ನು ಹಿಂದಿರುಗಿಸುವ ಪರೇಡ್ನಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರು ಬಹುಮಾನದ ಚೆಕ್ ವಿತರಿಸಿದರು.<br /> <br /> 2013ರ ಸೆ.1ರಂದು ‘ಸೈಕೊ’ ಶಂಕರ್ ಜೈಲಿನಿಂದ ಪರಾರಿಯಾಗಿದ್ದ. ಆರೋಪಿ ಪತ್ತೆಗೆ ಮಾಹಿತಿ ನೀಡುವವರಿಗೆ ₨ 5 ಲಕ್ಷ ಬಹುಮಾನ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಮುದಾಸಿರ್ ಪಾಷಾ ನೀಡಿದ ಸುಳಿವಿನ ಆಧಾರದ ಮೇಲೆ ಪೊಲೀಸರು ಆತನನ್ನು ಸೆ.6 ರಂದು ಕೂಡ್ಲುಗೇಟ್ ಬಳಿ ಬಂಧಿಸಿದ್ದರು.<br /> <br /> ಬಹುಮಾನ ಸ್ವೀಕರಿಸಿ ಮಾತನಾಡಿದ ಮುದಾಸಿರ್ ಪಾಷಾ, ‘2012ರಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಜೈಲು ಸೇರಿದ್ದೆ. ಅದೇ ವರ್ಷ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದೆ. ಜೈಲಿನಲ್ಲಿದ್ದಾಗ ಸೈಕೊ ಶಂಕರ್ ಪಕ್ಕದ ಬ್ಯಾರಕ್ನಲ್ಲೇ ನಾನು ಇದ್ದೆ. ಆಗ ಆತನ ಪರಿಚಯವಾಗಿತ್ತು. ಆ ಸಂದರ್ಭದಲ್ಲಿ ಆತ ನನ್ನ ಮೊಬೈಲ್ ಸಂಖ್ಯೆ ಪಡೆದಿದ್ದ’ ಎಂದು ಹೇಳಿದರು.<br /> <br /> ‘ಜೈಲಿನಿಂದ ಪರಾರಿಯಾದ ಐದು ದಿನಗಳ ನಂತರ ಆತ ನನ್ನ ಮೊಬೈಲ್ಗೆ ಕರೆ ಮಾಡಿದ್ದ. ತಾನು ಕೂಡ್ಲುಗೇಟ್ ಬಳಿಯ ಗುಡಿಸಲಿನಲ್ಲಿದ್ದು ಊಟ ಹಾಗೂ ಬೈಕ್ ತೆಗೆದುಕೊಂಡು ಬರುವಂತೆ ಆತ ತಿಳಿಸಿದ್ದ. ಈ ವಿಷಯವನ್ನು ಕೂಡಲೆ ಪೊಲೀಸರಿಗೆ ತಿಳಿಸಿದೆ’ ಎಂದರು. ಮುದಾಸಿರ್ ಪಾಷಾ ಕಟ್ಟಡ ನಿರ್ಮಾಣ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದಾರೆ.<br /> <br /> ಸಾರ್ವಜನಿಕರ ಸಹಕಾರ ಅಗತ್ಯ: ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ, ‘ಅಪರಾಧ ಪ್ರಕರಣಗಳನ್ನು ತಗ್ಗಿಸಲು ಪೊಲೀಸರು ಸಾರ್ವಜನಿಕರೊಂದಿಗೆ ಸಹಕರಿಸಬೇಕಾದ್ದು ಅಗತ್ಯ. ನಗರದಲ್ಲಿ ಅಪರಾಧ ಪ್ರಕರಣಗಳನ್ನು ತಗ್ಗಿಸಲು ಪೊಲೀಸರು ಸಾಕಷ್ಟು ಶ್ರಮ ಪಡುತ್ತಿದ್ದಾರೆ’ ಎಂದರು.<br /> <br /> ನಗರ ಪೊಲೀಸ್ ಕಮಿಷನರ್ ರಾಘವೇಂದ್ರ ಔರಾದಕರ್ ಮಾತನಾಡಿ, ‘ಉತ್ತರ ವಿಭಾಗದ ಪೊಲೀಸರು ಎರಡು ತಿಂಗಳಲ್ಲಿ 178 ಪ್ರಕರಣಗಳನ್ನು ಭೇದಿಸಿ, 107 ಮಂದಿ ಆರೋಪಿಗಳನ್ನು ಬಂಧಿಸಿ ₨ 4.2 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ’ ಎಂದು ತಿಳಿಸಿದರು. ಆರೋಪಿಗಳಿಂದ ವಶಪಡಿಸಿಕೊಂಡ ವಸ್ತುಗಳನ್ನು ಅವುಗಳ ಮಾಲೀಕರಿಗೆ ಹಿಂದಿರುಗಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>