<p><strong>ಮಂಗಳೂರು</strong>: ದೇಶದ ಅಭಿವೃದ್ಧಿಯಲ್ಲಿ ಸೋನಿಯಾ ಗಾಂಧಿ ಅವರ ಪಾತ್ರ ಅಪಾರವಾದುದು. ಸಮಾಜದ ಎಲ್ಲ ವರ್ಗದವರನ್ನೂ ಸಮಾನ ದೃಷ್ಟಿಯಲ್ಲಿ ನೋಡಿದ ಒಬ್ಬ ಧೀಮಂತ ಮಹಿಳೆ. ಅವರ ಚಿಂತನೆಯಲ್ಲಿ ದೇಶದ ಹಿತ ಅಡಗಿದೆ ಎಂದು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಹೇಳಿದರು.<br /> <br /> ನಗರದ ಜೆಪ್ಪು ಸೇಂಟ್ ಜೋಸೆಫ್ ಪ್ರಶಾಂತಿ ನಿಲಯ ಆಶ್ರಮದಲ್ಲಿ ನಡೆದ ಸೋನಿಯಾ ಗಾಂಧಿ ಹುಟ್ಟುಹಬ್ಬ ಆಚರಣೆಯಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಆಶ್ರಮದಲ್ಲಿರುವ ಅನಾಥರಿಗೆ ಹಣ್ಣು ಹಂಪಲು ನೀಡಿದರು. ಕಾರ್ಯಕ್ರಮದಲ್ಲಿ ಸಚಿವ ಯು.ಟಿ. ಖಾದರ್, ಶಾಸಕ ಜೆ.ಆರ್. ಲೋಬೊ, ಟಿ.ಕೆ. ಸುಧೀರ್ ಉಪಸ್ಥಿತರಿದ್ದರು.<br /> <br /> ಮೋದಿ ಪ್ರಧಾನಿ ಕನಸು: ಮಧ್ಯಪ್ರದೇಶ, ದೆಹಲಿ, ಛತ್ತೀಸ್ಗಡ, ರಾಜಸ್ತಾನದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು ಮೋದಿ ಅಲೆಯಿಂದ ಎನ್ನುವ ಮಾತು ತಪ್ಪು. ಮೋದಿಯ ಅಲೆ ಇದ್ದರೆ 11 ತಿಂಗಳ ಹಿಂದೆ ಕರ್ನಾಟಕ, ಉತ್ತರಾಖಂಡದಲ್ಲಿ ಏಕೆ ಇರಲಿಲ್ಲ ಎಂದು ಪ್ರಶ್ನಿಸಿದರು.<br /> ಇದು ಕೇವಲ ಒಂದು ಸುತ್ತಿನ ಬಿಜೆಪಿಯ ಕಸರತ್ತು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಕಾಂಗ್ರೆಸ್ ಪಕ್ಷ. ಮೋದಿ ಪ್ರಧಾನಿ ಆಗುವುದು ಕೇವಲ ಕನಸಿನ ಮಾತು ಎಂದು ತಿಳಿಸಿದರು.<br /> <br /> 4 ರಾಜ್ಯದಲ್ಲಿ ಕಾಂಗ್ರೆಸ್ಗೆ ಆದ ಹೀನಾಯ ಸೋಲಿನ ಬಗ್ಗೆ ಆತ್ಮಾವಲೋಕನ ಮಾಡುತ್ತೇವೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ. ಕಾಂಗ್ರೆಸ್ ಮತ್ತೆ ಕೇಂದ್ರದಲ್ಲಿ ಅಧಿಕಾರ ವಹಿಸುವುದು ಖಚಿತ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ದೇಶದ ಅಭಿವೃದ್ಧಿಯಲ್ಲಿ ಸೋನಿಯಾ ಗಾಂಧಿ ಅವರ ಪಾತ್ರ ಅಪಾರವಾದುದು. ಸಮಾಜದ ಎಲ್ಲ ವರ್ಗದವರನ್ನೂ ಸಮಾನ ದೃಷ್ಟಿಯಲ್ಲಿ ನೋಡಿದ ಒಬ್ಬ ಧೀಮಂತ ಮಹಿಳೆ. ಅವರ ಚಿಂತನೆಯಲ್ಲಿ ದೇಶದ ಹಿತ ಅಡಗಿದೆ ಎಂದು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಹೇಳಿದರು.<br /> <br /> ನಗರದ ಜೆಪ್ಪು ಸೇಂಟ್ ಜೋಸೆಫ್ ಪ್ರಶಾಂತಿ ನಿಲಯ ಆಶ್ರಮದಲ್ಲಿ ನಡೆದ ಸೋನಿಯಾ ಗಾಂಧಿ ಹುಟ್ಟುಹಬ್ಬ ಆಚರಣೆಯಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಆಶ್ರಮದಲ್ಲಿರುವ ಅನಾಥರಿಗೆ ಹಣ್ಣು ಹಂಪಲು ನೀಡಿದರು. ಕಾರ್ಯಕ್ರಮದಲ್ಲಿ ಸಚಿವ ಯು.ಟಿ. ಖಾದರ್, ಶಾಸಕ ಜೆ.ಆರ್. ಲೋಬೊ, ಟಿ.ಕೆ. ಸುಧೀರ್ ಉಪಸ್ಥಿತರಿದ್ದರು.<br /> <br /> ಮೋದಿ ಪ್ರಧಾನಿ ಕನಸು: ಮಧ್ಯಪ್ರದೇಶ, ದೆಹಲಿ, ಛತ್ತೀಸ್ಗಡ, ರಾಜಸ್ತಾನದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು ಮೋದಿ ಅಲೆಯಿಂದ ಎನ್ನುವ ಮಾತು ತಪ್ಪು. ಮೋದಿಯ ಅಲೆ ಇದ್ದರೆ 11 ತಿಂಗಳ ಹಿಂದೆ ಕರ್ನಾಟಕ, ಉತ್ತರಾಖಂಡದಲ್ಲಿ ಏಕೆ ಇರಲಿಲ್ಲ ಎಂದು ಪ್ರಶ್ನಿಸಿದರು.<br /> ಇದು ಕೇವಲ ಒಂದು ಸುತ್ತಿನ ಬಿಜೆಪಿಯ ಕಸರತ್ತು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಕಾಂಗ್ರೆಸ್ ಪಕ್ಷ. ಮೋದಿ ಪ್ರಧಾನಿ ಆಗುವುದು ಕೇವಲ ಕನಸಿನ ಮಾತು ಎಂದು ತಿಳಿಸಿದರು.<br /> <br /> 4 ರಾಜ್ಯದಲ್ಲಿ ಕಾಂಗ್ರೆಸ್ಗೆ ಆದ ಹೀನಾಯ ಸೋಲಿನ ಬಗ್ಗೆ ಆತ್ಮಾವಲೋಕನ ಮಾಡುತ್ತೇವೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ. ಕಾಂಗ್ರೆಸ್ ಮತ್ತೆ ಕೇಂದ್ರದಲ್ಲಿ ಅಧಿಕಾರ ವಹಿಸುವುದು ಖಚಿತ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>