<p>ಚಾಮರಾಜನಗರ: ‘ಕ್ರೀಡೆಯಲ್ಲಿ ಸೋಲು- ಗೆಲುವು ಸಹಜ. ಸೋತವರು ಕುಗ್ಗದೆ, ಗೆದ್ದವರು ಹಿಗ್ಗದೆ ಸಮಚಿತ್ತದಿಂದ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ಭೃಂಗೇಶ್ ಹೇಳಿದರು.<br /> ನಗರದಲ್ಲಿ ಈಚೆಗೆ ಜಿಲ್ಲಾ ಗೃಹರಕ್ಷಕ ದಳದ ಕಚೇರಿಯಿಂದ ಹಮ್ಮಿಕೊಂಡಿದ್ದ ವಾರ್ಷಿಕ ವೃತ್ತಿಪರ ಕ್ರೀಡಾಕೂಟದ ಸಮಾರೋಪದಲ್ಲಿ ಮಾತನಾಡಿದರು.<br /> <br /> ಕ್ರೀಡೆಯು ಬಾಂಧವ್ಯ ಬೆಳೆಯುವ ಕೊಂಡಿಯಾಗಬೇಕು ಎಂದ ಅವರು, ದೇಶದ ಒಳಿತಿಗಾಗಿ ಗೌರವಧನದ ಆಧಾರದಲ್ಲಿ ಗೃಹರಕ್ಷಕರು ದುಡಿಯುತ್ತಿದ್ದಾರೆ. ನಿಮ್ಮ ಕಾಯಕ ಪ್ರಜ್ಞೆಗೆ ತಲೆಬಾಗಲೇಬೇಕು. ಸಮಾಜ ದಲ್ಲಿ ಎತ್ತರಕ್ಕೆ ನಿಲ್ಲಬಲ್ಲ ಮನಸ್ಸು ನಿಮ್ಮದು. ನಿಮ್ಮ ಶ್ರೇಷ್ಠ ಕರ್ತವ್ಯಕ್ಕೆ ಸಮಾಜದಲ್ಲಿ ಹೆಚ್ಚಿನ ಮನ್ನಣೆ ದೊರೆಯಲಿ ಎಂದರು.<br /> <br /> ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್. ಅಶ್ವತ್ಥನಾರಾಯಣ ಮಾತನಾಡಿ, ಸೋಲು- ಗೆಲುವು ಮುಖ್ಯವಲ್ಲ. ಸ್ಪರ್ಧೆಗಳಲ್ಲಿ ಭಾಗವಹಿಸುವ ಉತ್ಸಾಹ ಜೀವಂತವಾಗಿರಿಸಿಕೊಳ್ಳಬೇಕು ಎಂದು ಹೇಳಿದರು.<br /> <br /> ವರ್ತಕರ ಸಂಘದ ಅಧ್ಯಕ್ಷ ವಿ. ಪ್ರಭಾಕರ್ ಮಾತನಾಡಿ, ಇಲ್ಲಿನ ಗೃಹರಕ್ಷಕರು ಮಧ್ಯಪ್ರದೇಶದಂತಹ ಹೊರರಾಜ್ಯದ ಚುನಾವಣೆಯ ಕರ್ತವ್ಯಕ್ಕೆ ಹೋಗಿಬಂದಿರುವುದು ಶ್ಲಾಘನೀಯ ಎಂದು ಹೇಳಿದರು.<br /> <br /> ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಬಿ.ಎಸ್. ಬಸವರಾಜು, ಯುವಶಕ್ತಿ ಪರಿಷತ್ನ ಎಲ್. ಸುರೇಶ್, ಕಂಪೆನಿ ಕಮಾಂಡ್ ಶಿವಣ್ಣ, ಬೋಧಕರಾದ ರಾಮಣ್ಣ, ಕಲೆ ನಟರಾಜು, ನಂಜುಂಡಸ್ವಾಮಿ, ಬಿಳಿಗಿರಿರಂಗಯ್ಯ, ಮರಿಸ್ವಾಮಿ, ಶಿವರಾಜ್ ಇದ್ದರು. ಮೋಹನ್ರಾಜ್ ವಿಜೇತರಿಗೆ ಬಹುಮಾನ ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: ‘ಕ್ರೀಡೆಯಲ್ಲಿ ಸೋಲು- ಗೆಲುವು ಸಹಜ. ಸೋತವರು ಕುಗ್ಗದೆ, ಗೆದ್ದವರು ಹಿಗ್ಗದೆ ಸಮಚಿತ್ತದಿಂದ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ಭೃಂಗೇಶ್ ಹೇಳಿದರು.<br /> ನಗರದಲ್ಲಿ ಈಚೆಗೆ ಜಿಲ್ಲಾ ಗೃಹರಕ್ಷಕ ದಳದ ಕಚೇರಿಯಿಂದ ಹಮ್ಮಿಕೊಂಡಿದ್ದ ವಾರ್ಷಿಕ ವೃತ್ತಿಪರ ಕ್ರೀಡಾಕೂಟದ ಸಮಾರೋಪದಲ್ಲಿ ಮಾತನಾಡಿದರು.<br /> <br /> ಕ್ರೀಡೆಯು ಬಾಂಧವ್ಯ ಬೆಳೆಯುವ ಕೊಂಡಿಯಾಗಬೇಕು ಎಂದ ಅವರು, ದೇಶದ ಒಳಿತಿಗಾಗಿ ಗೌರವಧನದ ಆಧಾರದಲ್ಲಿ ಗೃಹರಕ್ಷಕರು ದುಡಿಯುತ್ತಿದ್ದಾರೆ. ನಿಮ್ಮ ಕಾಯಕ ಪ್ರಜ್ಞೆಗೆ ತಲೆಬಾಗಲೇಬೇಕು. ಸಮಾಜ ದಲ್ಲಿ ಎತ್ತರಕ್ಕೆ ನಿಲ್ಲಬಲ್ಲ ಮನಸ್ಸು ನಿಮ್ಮದು. ನಿಮ್ಮ ಶ್ರೇಷ್ಠ ಕರ್ತವ್ಯಕ್ಕೆ ಸಮಾಜದಲ್ಲಿ ಹೆಚ್ಚಿನ ಮನ್ನಣೆ ದೊರೆಯಲಿ ಎಂದರು.<br /> <br /> ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್. ಅಶ್ವತ್ಥನಾರಾಯಣ ಮಾತನಾಡಿ, ಸೋಲು- ಗೆಲುವು ಮುಖ್ಯವಲ್ಲ. ಸ್ಪರ್ಧೆಗಳಲ್ಲಿ ಭಾಗವಹಿಸುವ ಉತ್ಸಾಹ ಜೀವಂತವಾಗಿರಿಸಿಕೊಳ್ಳಬೇಕು ಎಂದು ಹೇಳಿದರು.<br /> <br /> ವರ್ತಕರ ಸಂಘದ ಅಧ್ಯಕ್ಷ ವಿ. ಪ್ರಭಾಕರ್ ಮಾತನಾಡಿ, ಇಲ್ಲಿನ ಗೃಹರಕ್ಷಕರು ಮಧ್ಯಪ್ರದೇಶದಂತಹ ಹೊರರಾಜ್ಯದ ಚುನಾವಣೆಯ ಕರ್ತವ್ಯಕ್ಕೆ ಹೋಗಿಬಂದಿರುವುದು ಶ್ಲಾಘನೀಯ ಎಂದು ಹೇಳಿದರು.<br /> <br /> ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಬಿ.ಎಸ್. ಬಸವರಾಜು, ಯುವಶಕ್ತಿ ಪರಿಷತ್ನ ಎಲ್. ಸುರೇಶ್, ಕಂಪೆನಿ ಕಮಾಂಡ್ ಶಿವಣ್ಣ, ಬೋಧಕರಾದ ರಾಮಣ್ಣ, ಕಲೆ ನಟರಾಜು, ನಂಜುಂಡಸ್ವಾಮಿ, ಬಿಳಿಗಿರಿರಂಗಯ್ಯ, ಮರಿಸ್ವಾಮಿ, ಶಿವರಾಜ್ ಇದ್ದರು. ಮೋಹನ್ರಾಜ್ ವಿಜೇತರಿಗೆ ಬಹುಮಾನ ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>