<p><strong>ಬೆಂಗಳೂರು:</strong> ಸದ್ಯಕ್ಕೆ ತೃತೀಯ ರಂಗ ಇಲ್ಲ. ಅದೇನಿದ್ದರೂ ಚುನಾವಣೆ ನಂತರ ನಿರ್ಧಾರವಾಗಲಿದೆ ಎಂದು ಜೆಡಿಎಸ್ನ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.<br /> <br /> ‘ಇತ್ತೀಚೆಗೆ ದೆಹಲಿಯಲ್ಲಿ ವಿವಿಧ ರಾಜ್ಯಗಳ ಪ್ರಾದೇಶಿಕ ಪಕ್ಷಗಳ ಮಧ್ಯೆ ಮಾತುಕತೆ ನಡೆದಿತ್ತು. ಈ ಮೈತ್ರಿಕೂಟಕ್ಕೆ ಹೆಸರಿಡುವ ಬಗ್ಗೆ ಸದ್ಯಕ್ಕೆ ಯೋಚಿಸುವುದು ಬೇಡ. ಲೋಕಸಭಾ ಚುನಾವಣೆ ನಂತರ ನಿರ್ಧರಿಸುವಂತೆ ಸಲಹೆ ನೀಡಿದ್ದೇನೆ’ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.<br /> <br /> ‘ಪಕ್ಷಗಳು ತಮ್ಮ ತಮ್ಮ ರಾಜ್ಯಗಳಲ್ಲಿ ಯಾರ ಎದುರಿಗೆ ಯಾರನ್ನು ಬೇಕಾದರೂ ಕಣಕ್ಕಿಳಿಸಲಿ. ಆದರೆ ಫಲಿತಾಂಶದ ನಂತರ ಈ ಬಗ್ಗೆ ಮಾತುಕತೆ ನಡೆಸಿ ನಿರ್ಧಾರಕ್ಕೆ ಬರಬಹುದು’ ಎಂದು ತಿಳಿಸಿದರು. <br /> <br /> ಪ್ರಸ್ತುತ ರಾಜಕೀಯದಲ್ಲಿ ಹಲವಾರು ಬದಲಾವಣೆಗಳು ಆಗುತ್ತಿವೆ. ಎಲ್ಲ ರಾಜ್ಯಗಳಲ್ಲೂ ಕಾಂಗ್ರೆಸ್ ಹಾಗೂ ಬಿಜೆಪಿಗೆ ವಿರುದ್ಧವಾದ ರಾಜಕೀಯ ಶಕ್ತಿ ಬೆಳೆದು ನಿಂತಿದೆ. ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಈ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲೂ ಪಕ್ಷ ಹೋರಾಟ ನಡೆಸಲಿದೆ ಎಂದರು.<br /> <br /> ಚುನಾವಣಾ ಸಮೀಕ್ಷೆಗಳು ಆಯಾ ದಿನಗಳಿಗೆ ಮಾತ್ರ ಸೀಮಿತವಾಗಿರುತ್ತವೆ. ಮರು ದಿನಕ್ಕೆ ಅದು ಅಪ್ರಸ್ತುತವಾಗುತ್ತದೆ. ಮತದಾರರ ಮನಸ್ಸಿನ ಒಳಹೊಕ್ಕು ಪರೀಕ್ಷೆ ಮಾಡಲು ಯಾರಿಗೂ ಸಾಧ್ಯವಿಲ್ಲ. ಈ ವಿಷಯದಲ್ಲಿ ಹಣವೂ ಮತದಾರರ ನಿರ್ಧಾರವನ್ನು ಬದಲಿಸದು ಎಂದು ಹೇಳಿದರು.<br /> <br /> <strong>ಮೋದಿ ವಿರುದ್ಧ ವಾಗ್ದಾಳಿ:</strong><br /> ‘ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ವಾಜಪೇಯಿ ಹಾಗೂ ಎಲ್.ಕೆ.ಅಡ್ವಾಣಿ ಅವರಿಗಿಂತ ದೊಡ್ಡವರಲ್ಲ. ಅವರು ತಮ್ಮ ಮಾತಿನ ಮೇಲೆ ಹಿಡಿತ ಇಟ್ಟುಕೊಳ್ಳಬೇಕು. ಕೇವಲ ಶಬ್ದ ಪ್ರಯೋಗದಿಂದ ಗುರಿ ಮುಟ್ಟಲು ಸಾಧ್ಯವಿಲ್ಲ. ಅವರ ವ್ಯಂಗ್ಯವಾದ ಟೀಕೆಗಳು ಅವರ ಬಳಿಯೇ ಇರಲಿ ಎಂದು ವಾಗ್ದಾಳಿ ನಡೆಸಿದರು.<br /> <br /> ಷರೀಫ್ಗೆ ಸ್ವಾಗತ: ‘ಪಕ್ಷ ಹಾಗೂ ನನ್ನ ಬದ್ಧತೆ ಬಗ್ಗೆ ಇರುವ ವಿಶ್ವಾಸದಿಂದ ಸಿ.ಕೆ. ಜಾಫರ್ ಷರೀಫ್ ನಮ್ಮ ಪಕ್ಷಕ್ಕೆ ಸೇರುವುದಾದರೆ ನಾನು ಸ್ವಾಗತಿಸುತ್ತೇನೆ. ಪಕ್ಷಕ್ಕೆ ಸೇರಲು ಅವರಿಗೆ ಆಹ್ವಾನ ಇರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಪಕ್ಷದ ಮುಖಂಡರು ಅವರಿಗೆ ಆಹ್ವಾನ ನೀಡಿರಬಹುದು. ಆ ಮಾತನ್ನು ತಳ್ಳಿ ಹಾಕುವುದಿಲ್ಲ. ಈ ಬಗ್ಗೆ ನಾನು ಅವರೊಂದಿಗೆ ನೇರವಾಗಿ ಮಾತನಾಡಿಲ್ಲ’ ಎಂದು ಸ್ಪಷ್ಟಪಡಿಸಿದರು. <br /> <br /> ಜಾಫರ್ ಷರೀಫ್ ಕಾಂಗ್ರೆಸ್ನ ಪ್ರಾಮಾಣಿಕ ಕಾರ್ಯಕರ್ತ. ಅವರ ನಿಷ್ಠೆಗೆ ಕಾಂಗ್ರೆಸ್ ನೀಡಿರುವ ಕೊಡುಗೆ ಏನು ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ನ ವರ್ತನೆಯಿಂದ ಅವರ ಮನಸ್ಸಿಗೆ ನೋವಾಗಿದೆ. ಅದಕ್ಕಾಗಿ ಅವರು ತೀರ್ಥಯಾತ್ರೆಗೆ ಹೋಗುವುದಾಗಿ ತಿಳಿಸಿದ್ದಾರೆ ಎಂದರು. <br /> <br /> <strong>ಜೆಡಿಎಸ್ಗೆ ಧನಂಜಯ ಕುಮಾರ್</strong><br /> ‘ಜೆಡಿಎಸ್ ಸೇರುವ ವಿಷಯಕ್ಕೆ ಸಂಬಂಧಿಸಿದಂತೆ ಕೆಜೆಪಿ ಮುಖಂಡ ಧನಂಜಯ ಕುಮಾರ್ ಅವರು ಮೂರು ಬಾರಿ ನನ್ನನ್ನು ಭೇಟಿ ಮಾಡಿದ್ದಾರೆ. ಯಾವುದೇ ಷರತ್ತಿಲ್ಲದೆ ಪಕ್ಷಕ್ಕೆ ಸೇರಬಹುದು ಎಂದು ಹೇಳಿದ್ದೇನೆ. ಅದಕ್ಕೆ ಅವರೂ ಒಪ್ಪಿಗೆ ನೀಡಿದ್ದಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸದ್ಯಕ್ಕೆ ತೃತೀಯ ರಂಗ ಇಲ್ಲ. ಅದೇನಿದ್ದರೂ ಚುನಾವಣೆ ನಂತರ ನಿರ್ಧಾರವಾಗಲಿದೆ ಎಂದು ಜೆಡಿಎಸ್ನ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.<br /> <br /> ‘ಇತ್ತೀಚೆಗೆ ದೆಹಲಿಯಲ್ಲಿ ವಿವಿಧ ರಾಜ್ಯಗಳ ಪ್ರಾದೇಶಿಕ ಪಕ್ಷಗಳ ಮಧ್ಯೆ ಮಾತುಕತೆ ನಡೆದಿತ್ತು. ಈ ಮೈತ್ರಿಕೂಟಕ್ಕೆ ಹೆಸರಿಡುವ ಬಗ್ಗೆ ಸದ್ಯಕ್ಕೆ ಯೋಚಿಸುವುದು ಬೇಡ. ಲೋಕಸಭಾ ಚುನಾವಣೆ ನಂತರ ನಿರ್ಧರಿಸುವಂತೆ ಸಲಹೆ ನೀಡಿದ್ದೇನೆ’ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.<br /> <br /> ‘ಪಕ್ಷಗಳು ತಮ್ಮ ತಮ್ಮ ರಾಜ್ಯಗಳಲ್ಲಿ ಯಾರ ಎದುರಿಗೆ ಯಾರನ್ನು ಬೇಕಾದರೂ ಕಣಕ್ಕಿಳಿಸಲಿ. ಆದರೆ ಫಲಿತಾಂಶದ ನಂತರ ಈ ಬಗ್ಗೆ ಮಾತುಕತೆ ನಡೆಸಿ ನಿರ್ಧಾರಕ್ಕೆ ಬರಬಹುದು’ ಎಂದು ತಿಳಿಸಿದರು. <br /> <br /> ಪ್ರಸ್ತುತ ರಾಜಕೀಯದಲ್ಲಿ ಹಲವಾರು ಬದಲಾವಣೆಗಳು ಆಗುತ್ತಿವೆ. ಎಲ್ಲ ರಾಜ್ಯಗಳಲ್ಲೂ ಕಾಂಗ್ರೆಸ್ ಹಾಗೂ ಬಿಜೆಪಿಗೆ ವಿರುದ್ಧವಾದ ರಾಜಕೀಯ ಶಕ್ತಿ ಬೆಳೆದು ನಿಂತಿದೆ. ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಈ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲೂ ಪಕ್ಷ ಹೋರಾಟ ನಡೆಸಲಿದೆ ಎಂದರು.<br /> <br /> ಚುನಾವಣಾ ಸಮೀಕ್ಷೆಗಳು ಆಯಾ ದಿನಗಳಿಗೆ ಮಾತ್ರ ಸೀಮಿತವಾಗಿರುತ್ತವೆ. ಮರು ದಿನಕ್ಕೆ ಅದು ಅಪ್ರಸ್ತುತವಾಗುತ್ತದೆ. ಮತದಾರರ ಮನಸ್ಸಿನ ಒಳಹೊಕ್ಕು ಪರೀಕ್ಷೆ ಮಾಡಲು ಯಾರಿಗೂ ಸಾಧ್ಯವಿಲ್ಲ. ಈ ವಿಷಯದಲ್ಲಿ ಹಣವೂ ಮತದಾರರ ನಿರ್ಧಾರವನ್ನು ಬದಲಿಸದು ಎಂದು ಹೇಳಿದರು.<br /> <br /> <strong>ಮೋದಿ ವಿರುದ್ಧ ವಾಗ್ದಾಳಿ:</strong><br /> ‘ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ವಾಜಪೇಯಿ ಹಾಗೂ ಎಲ್.ಕೆ.ಅಡ್ವಾಣಿ ಅವರಿಗಿಂತ ದೊಡ್ಡವರಲ್ಲ. ಅವರು ತಮ್ಮ ಮಾತಿನ ಮೇಲೆ ಹಿಡಿತ ಇಟ್ಟುಕೊಳ್ಳಬೇಕು. ಕೇವಲ ಶಬ್ದ ಪ್ರಯೋಗದಿಂದ ಗುರಿ ಮುಟ್ಟಲು ಸಾಧ್ಯವಿಲ್ಲ. ಅವರ ವ್ಯಂಗ್ಯವಾದ ಟೀಕೆಗಳು ಅವರ ಬಳಿಯೇ ಇರಲಿ ಎಂದು ವಾಗ್ದಾಳಿ ನಡೆಸಿದರು.<br /> <br /> ಷರೀಫ್ಗೆ ಸ್ವಾಗತ: ‘ಪಕ್ಷ ಹಾಗೂ ನನ್ನ ಬದ್ಧತೆ ಬಗ್ಗೆ ಇರುವ ವಿಶ್ವಾಸದಿಂದ ಸಿ.ಕೆ. ಜಾಫರ್ ಷರೀಫ್ ನಮ್ಮ ಪಕ್ಷಕ್ಕೆ ಸೇರುವುದಾದರೆ ನಾನು ಸ್ವಾಗತಿಸುತ್ತೇನೆ. ಪಕ್ಷಕ್ಕೆ ಸೇರಲು ಅವರಿಗೆ ಆಹ್ವಾನ ಇರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಪಕ್ಷದ ಮುಖಂಡರು ಅವರಿಗೆ ಆಹ್ವಾನ ನೀಡಿರಬಹುದು. ಆ ಮಾತನ್ನು ತಳ್ಳಿ ಹಾಕುವುದಿಲ್ಲ. ಈ ಬಗ್ಗೆ ನಾನು ಅವರೊಂದಿಗೆ ನೇರವಾಗಿ ಮಾತನಾಡಿಲ್ಲ’ ಎಂದು ಸ್ಪಷ್ಟಪಡಿಸಿದರು. <br /> <br /> ಜಾಫರ್ ಷರೀಫ್ ಕಾಂಗ್ರೆಸ್ನ ಪ್ರಾಮಾಣಿಕ ಕಾರ್ಯಕರ್ತ. ಅವರ ನಿಷ್ಠೆಗೆ ಕಾಂಗ್ರೆಸ್ ನೀಡಿರುವ ಕೊಡುಗೆ ಏನು ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ನ ವರ್ತನೆಯಿಂದ ಅವರ ಮನಸ್ಸಿಗೆ ನೋವಾಗಿದೆ. ಅದಕ್ಕಾಗಿ ಅವರು ತೀರ್ಥಯಾತ್ರೆಗೆ ಹೋಗುವುದಾಗಿ ತಿಳಿಸಿದ್ದಾರೆ ಎಂದರು. <br /> <br /> <strong>ಜೆಡಿಎಸ್ಗೆ ಧನಂಜಯ ಕುಮಾರ್</strong><br /> ‘ಜೆಡಿಎಸ್ ಸೇರುವ ವಿಷಯಕ್ಕೆ ಸಂಬಂಧಿಸಿದಂತೆ ಕೆಜೆಪಿ ಮುಖಂಡ ಧನಂಜಯ ಕುಮಾರ್ ಅವರು ಮೂರು ಬಾರಿ ನನ್ನನ್ನು ಭೇಟಿ ಮಾಡಿದ್ದಾರೆ. ಯಾವುದೇ ಷರತ್ತಿಲ್ಲದೆ ಪಕ್ಷಕ್ಕೆ ಸೇರಬಹುದು ಎಂದು ಹೇಳಿದ್ದೇನೆ. ಅದಕ್ಕೆ ಅವರೂ ಒಪ್ಪಿಗೆ ನೀಡಿದ್ದಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>