<p><strong>ಬೆಂಗಳೂರು: </strong>ಬಿಬಿಎಂಪಿ ನಗರದ ರಸ್ತೆಗಳ ಡಾಂಬರೀಕರಣ ಕಾಮಗಾರಿಯನ್ನು ₹258.56 ಕೋಟಿ ವೆಚ್ಚದಲ್ಲಿ ಶೀಘ್ರ ಕೈಗೆತ್ತಿಕೊಳ್ಳಲಿದೆ. <br /> <br /> ಮೇಯರ್ ಬಿ.ಎನ್.ಮಂಜುನಾಥ ರೆಡ್ಡಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಹೆಬ್ಬಾಳ ವಿಧಾನಸಭಾ ಕ್ಷೇತ್ರ ಸೇರಿದಂತೆ ನಗರದ 211.96 ಕಿ.ಮೀ. ರಸ್ತೆಗೆ ಡಾಂಬರು ಹಾಕಲಾಗುವುದು. ತೀವ್ರ ಹದಗೆಟ್ಟ ರಸ್ತೆಗಳಿಗೆ ಮೊದಲ ಆದ್ಯತೆಯಾಗಿ ಡಾಂಬರೀಕರಣ ಮಾಡಲಾಗುವುದು’ ಎಂದರು.<br /> <br /> ಬೆಂಗಳೂರು ನಗರ ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಮಾತನಾಡಿ, ‘ನಗರೋತ್ಥಾನ ಯೋಜನೆಯಡಿ ವಿವಿಧ ಯೋಜನೆಗಳಿಗೆ ₹700 ಕೋಟಿ ಮಂಜೂರು ಮಾಡಲಾಗಿದೆ. ಇದಕ್ಕಾಗಿ ಫೆ.25ರಂದು ಟೆಂಡರ್ ಕರೆಯಲಾಗುವುದು’ ಎಂದರು.<br /> <br /> ‘ನಾಲ್ಕು ತಿಂಗಳಲ್ಲಿ ನಗರದ ಎಲ್ಲ ರಸ್ತೆಗಳನ್ನು ಡಾಂಬರೀಕರಣ ಮಾಡಲಾಗುವುದು. ತ್ಯಾಜ್ಯ ವಿಲೇವಾರಿ ಸಮಸ್ಯೆ ಬಗೆಹರಿಸಲು ಬಿಬಿಎಂಪಿ ಈಗಾಗಲೇ 7 ಸಂಸ್ಕರಣಾ ಘಟಕಗಳನ್ನು ಆರಂಭಿಸಿದೆ’ ಎಂದು ಹೇಳಿದರು.<br /> <br /> ‘ನೈರುತ್ಯ ಹಾಗೂ ಈಶಾನ್ಯ ಪ್ರದೇಶಗಳಲ್ಲಿ ಸಂಚಾರ ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದರು. ಲೋಕೋಪಯೋಗಿ ಸಚಿವ ಎಚ್.ಸಿ. ಮಹದೇವಪ್ಪ ಮಾತನಾಡಿ, ‘ಲೋಕೋಪಯೋಗಿ ಇಲಾಖೆ ಹೊಸ ಕಾರಿಡಾರ್ಗಳ ನಿರ್ಮಾಣಕ್ಕೆ ₹400 ಕೋಟಿ ಹಾಗೂ ಸಂಚಾರ ಮುಕ್ತ ರಸ್ತೆಗಳಿಗೆ ₹200 ಕೋಟಿ ಮಂಜೂರು ಮಾಡಿದೆ’ ಎಂದರು.<br /> <br /> ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭರೆಡ್ಡಿ ಮಾತನಾಡಿ, ‘ರಾಜ್ಯ ಸರ್ಕಾರ ನಗರೋತ್ಥಾನ ಯೋಜನೆಯಡಿ ಹೆಚ್ಚು ಹಣ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಿಬಿಎಂಪಿ ನಗರದ ರಸ್ತೆಗಳ ಡಾಂಬರೀಕರಣ ಕಾಮಗಾರಿಯನ್ನು ₹258.56 ಕೋಟಿ ವೆಚ್ಚದಲ್ಲಿ ಶೀಘ್ರ ಕೈಗೆತ್ತಿಕೊಳ್ಳಲಿದೆ. <br /> <br /> ಮೇಯರ್ ಬಿ.ಎನ್.ಮಂಜುನಾಥ ರೆಡ್ಡಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಹೆಬ್ಬಾಳ ವಿಧಾನಸಭಾ ಕ್ಷೇತ್ರ ಸೇರಿದಂತೆ ನಗರದ 211.96 ಕಿ.ಮೀ. ರಸ್ತೆಗೆ ಡಾಂಬರು ಹಾಕಲಾಗುವುದು. ತೀವ್ರ ಹದಗೆಟ್ಟ ರಸ್ತೆಗಳಿಗೆ ಮೊದಲ ಆದ್ಯತೆಯಾಗಿ ಡಾಂಬರೀಕರಣ ಮಾಡಲಾಗುವುದು’ ಎಂದರು.<br /> <br /> ಬೆಂಗಳೂರು ನಗರ ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಮಾತನಾಡಿ, ‘ನಗರೋತ್ಥಾನ ಯೋಜನೆಯಡಿ ವಿವಿಧ ಯೋಜನೆಗಳಿಗೆ ₹700 ಕೋಟಿ ಮಂಜೂರು ಮಾಡಲಾಗಿದೆ. ಇದಕ್ಕಾಗಿ ಫೆ.25ರಂದು ಟೆಂಡರ್ ಕರೆಯಲಾಗುವುದು’ ಎಂದರು.<br /> <br /> ‘ನಾಲ್ಕು ತಿಂಗಳಲ್ಲಿ ನಗರದ ಎಲ್ಲ ರಸ್ತೆಗಳನ್ನು ಡಾಂಬರೀಕರಣ ಮಾಡಲಾಗುವುದು. ತ್ಯಾಜ್ಯ ವಿಲೇವಾರಿ ಸಮಸ್ಯೆ ಬಗೆಹರಿಸಲು ಬಿಬಿಎಂಪಿ ಈಗಾಗಲೇ 7 ಸಂಸ್ಕರಣಾ ಘಟಕಗಳನ್ನು ಆರಂಭಿಸಿದೆ’ ಎಂದು ಹೇಳಿದರು.<br /> <br /> ‘ನೈರುತ್ಯ ಹಾಗೂ ಈಶಾನ್ಯ ಪ್ರದೇಶಗಳಲ್ಲಿ ಸಂಚಾರ ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದರು. ಲೋಕೋಪಯೋಗಿ ಸಚಿವ ಎಚ್.ಸಿ. ಮಹದೇವಪ್ಪ ಮಾತನಾಡಿ, ‘ಲೋಕೋಪಯೋಗಿ ಇಲಾಖೆ ಹೊಸ ಕಾರಿಡಾರ್ಗಳ ನಿರ್ಮಾಣಕ್ಕೆ ₹400 ಕೋಟಿ ಹಾಗೂ ಸಂಚಾರ ಮುಕ್ತ ರಸ್ತೆಗಳಿಗೆ ₹200 ಕೋಟಿ ಮಂಜೂರು ಮಾಡಿದೆ’ ಎಂದರು.<br /> <br /> ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭರೆಡ್ಡಿ ಮಾತನಾಡಿ, ‘ರಾಜ್ಯ ಸರ್ಕಾರ ನಗರೋತ್ಥಾನ ಯೋಜನೆಯಡಿ ಹೆಚ್ಚು ಹಣ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>