<p><strong>ಬೆಂಗಳೂರು:</strong> ಕಾರ್ಪೋರೇಟ್ ವಲಯ, ದಾನಿಗಳು ಹಾಗೂ ಸಂಘ ಸಂಸ್ಥೆಗಳನ್ನು ಶಿಕ್ಷಣ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಸರ್ಕಾರಿ ಶಾಲೆಯನ್ನು `ಶಿಕ್ಷಣ ಸಾಮರಸ್ಯ ವಿದ್ಯಾಕೇಂದ್ರ'ಗಳಾಗಿ ಪರಿವರ್ತಿಸಲು ಸರ್ಕಾರ ತೀರ್ಮಾನಿಸಿದೆ.<br /> <br /> 2013-14ನೇ ಸಾಲಿನ ಬಜೆಟ್ನಲ್ಲಿ ಈ ವಿಷಯ ಪ್ರಕಟಿಸಿದ್ದು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮೂಲಸೌಕರ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಅಲ್ಲದೆ ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಗೆ ದಾಖಲಾತಿ ಉತ್ತೇಜಿಸಲು ಹೆಣ್ಣು ಮಕ್ಕಳಿಗೆ ಪ್ರತಿದಿನದ ಹಾಜರಾತಿಗೆ ಎರಡು ರೂಪಾಯಿ ಪ್ರೋತ್ಸಾಹಧನ ನೀಡಲಾಗುತ್ತದೆ.<br /> <br /> * ಪ್ರಾಥಮಿಕ ಶಿಕ್ಷಣಕ್ಕೆ ರೂ15,680 ಕೋಟಿ ಅನುದಾನ<br /> * ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ. ಉತ್ತಮ ತರಬೇತಿ ಪಡೆದ ಶಿಕ್ಷಕರ ನೇಮಕ<br /> * ಗುಣಮಟ್ಟದ ಶಿಕ್ಷಣಕ್ಕಾಗಿ ಶಿಕ್ಷಕರ ವಿದ್ಯಾರ್ಹತೆ ಹೆಚ್ಚಿಸಲು ಯೋಚನೆ<br /> * ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಪರೀಕ್ಷಾ ಮಾಹಿತಿ<br /> * ಸಾರ್ವಜನಿಕ ಗ್ರಂಥಾಲಯಗಳಲ್ಲಿ ಹಂತ ಹಂತವಾಗಿ ಡಿಜಿಟಲ್ ಜ್ಞಾನ ಕೇಂದ್ರಗಳ ಸ್ಥಾಪನೆ<br /> * 500ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಇರುವ ದೊಡ್ಡ ಶಾಲೆಗಳಿಗೆ ಬಿಸಿಯೂಟ ತಯಾರಿಕೆಗೆ ರೂ10 ಕೋಟಿ ವೆಚ್ಚದಲ್ಲಿ ಸ್ಟೀಮ್ ಬಾಯ್ಲರ್ಗಳ ವ್ಯವಸ್ಥೆ<br /> * ಮಾತೃಭಾಷೆ ಜೊತೆಗೆ 1ನೇ ತರಗತಿಯಿಂದ ಪರಿಣಾಮಕಾರಿಯಾಗಿ ಇಂಗ್ಲಿಷ್ ಭಾಷೆ ಕಲಿಕೆ<br /> * ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸಹಯೋಗದಲ್ಲಿ ಪ್ರಾಯೋಗಿಕವಾಗಿ ಟೆಲಿಶಿಕ್ಷಣ ಕಾರ್ಯಕ್ರಮ<br /> * ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಹಂತ ಹಂತವಾಗಿ ದೂರಸಂವೇದಿ ಶಿಕ್ಷಣ ಕಾರ್ಯಕ್ರಮ ಜಾರಿ<br /> * ಬೆಂಗಳೂರಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗೆ ರೂ 3 ಕೋಟಿ<br /> * ಉನ್ನತ ಶಿಕ್ಷಣ<br /> * ಈ ಬಾರಿ ಉನ್ನತ ಶಿಕ್ಷಣಕ್ಕೆ ರೂ3,243 ಕೋಟಿ ಅನುದಾನ<br /> * 15 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ಸ್ಥಾಪನೆ<br /> * ಶೈಕ್ಷಣಿಕವಾಗಿ ಹಿಂದುಳಿದ ಬ್ಲಾಕ್ಗಳಲ್ಲಿ ಸುಸಜ್ಜಿತ 15 ಹೊಸ ಕಾಲೇಜುಗಳ ಸ್ಥಾಪನೆ<br /> * ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್, ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ನೈಪುಣ್ಯ ನಿಧಿ ಕಾರ್ಯಕ್ರಮ<br /> * ಮುಕ್ತ ಮೂಲ ನಾಯಕತ್ವ ಕಾರ್ಯಕ್ರಮದಡಿ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ 10 ಸಾವಿರ ವಿದ್ಯಾರ್ಥಿಗಳಿಗೆ ತರಬೇತಿ<br /> * ಧಾರವಾಡದಲ್ಲಿ ಉನ್ನತ ಶಿಕ್ಷಣ ಅಕಾಡೆಮಿ<br /> * ವಾರ್ಷಿಕ ರೂ2.5 ಲಕ್ಷಕ್ಕಿಂತ ಕಡಿಮೆ ಆದಾಯದ ಬಡ ವಿದ್ಯಾರ್ಥಿ ಉನ್ನತ ಶಿಕ್ಷಣಕ್ಕೆ ಬ್ಯಾಂಕಿನಿಂದ ಸಾಲ ಪಡೆದರೆ `ರಾಜೀವ್ಗಾಂಧಿ ಶಿಷ್ಯವೇತನ'<br /> * ವಿಶ್ವವಿದ್ಯಾಲಯ, ಕಾಲೇಜು ಹಾಗೂ ಪಾಲಿಟೆಕ್ನಿಕ್ಗಳಲ್ಲಿ ಇನೋವೇಷನ್ ಕ್ಲಬ್ಗಳ ಸ್ಥಾಪನೆ<br /> * ಎಚ್ಐವಿ, ಕುಷ್ಠರೋಗ ಪೀಡಿತರ ಅರ್ಹ ಮಕ್ಕಳಿಗೆ ಉಚಿತವಾಗಿ ಉನ್ನತ ಶಿಕ್ಷಣ, ವಿದ್ಯಾರ್ಥಿ ವೇತನ<br /> * ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿ<br /> * ಗದಗದಲ್ಲಿ ಕರ್ನಾಟಕ ವಿವಿ ಸ್ನಾತಕೋತ್ತರ ಕೇಂದ್ರ ಸ್ಥಾಪನೆ<br /> * ಗುಲ್ಬರ್ಗದ ಸಿದ್ಧಾರ್ಥ ವಿಹಾರ ಟ್ರಸ್ಟ್ನಿಂದ ಸ್ಥಾಪಿಸಲಾಗುವ ಪಾಲಿ, ಸಂಸ್ಕೃತ ಹಾಗೂ ತುಲನಾತ್ಮಕ ತತ್ವಶಾಸ್ತ್ರದ ಅಂತರರಾಷ್ಟ್ರೀಯ ಅಧ್ಯಯನ ಸಂಸ್ಥೆಗೆ ಅನುದಾನ<br /> * ಮಹಿಳಾ ವಿವಿ ವ್ಯಾಪ್ತಿಯನ್ನು ಇಡೀ ರಾಜ್ಯಕ್ಕೆ ವಿಸ್ತರಿಸುವ ಉದ್ದೇಶದಿಂದ ಮಂಡ್ಯದಲ್ಲಿ ವಿಸ್ತರಣಾ ಕೇಂದ್ರ ಸ್ಥಾಪಿಸಲು ರೂ30 ಕೋಟಿ ಅನುದಾನ<br /> * ಮೈಸೂರು ವಿವಿಯಲ್ಲಿ ನಾಲ್ವಡಿ ಒಡೆಯರ್ ಸಾಮಾಜಿಕ ಅಭಿವೃದ್ಧಿ ಅಧ್ಯಯನ ಪೀಠ ಸ್ಥಾಪನೆ<br /> * ಬೆಳಗಾವಿಯ ರಾಣಿಚೆನ್ನಮ್ಮ, ವಿಜಾಪುರ ಮಹಿಳಾ ವಿವಿ ಹಾಗೂ ದಾವಣಗೆರೆ ವಿವಿಗೆ ತಲಾ ರೂ5 ಕೋಟಿ ಅನುದಾನ<br /> * 25 ಸರ್ಕಾರಿ ಕಾಲೇಜುಗಳಲ್ಲಿ ಶೈಕ್ಷಣಿಕ ಉತ್ಕೃಷ್ಟತೆ ಹೆಚ್ಚಿಸಿಹೆಚ್ಚಿಸಿ ಶೈಕ್ಷಣಿಕ ಸ್ವಾಯತ್ತತೆಗೆ ಅರ್ಹಗೊಳಿಸಲು ತಲಾ ರೂ2 ಕೋಟಿ ಅನುದಾನ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಾರ್ಪೋರೇಟ್ ವಲಯ, ದಾನಿಗಳು ಹಾಗೂ ಸಂಘ ಸಂಸ್ಥೆಗಳನ್ನು ಶಿಕ್ಷಣ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಸರ್ಕಾರಿ ಶಾಲೆಯನ್ನು `ಶಿಕ್ಷಣ ಸಾಮರಸ್ಯ ವಿದ್ಯಾಕೇಂದ್ರ'ಗಳಾಗಿ ಪರಿವರ್ತಿಸಲು ಸರ್ಕಾರ ತೀರ್ಮಾನಿಸಿದೆ.<br /> <br /> 2013-14ನೇ ಸಾಲಿನ ಬಜೆಟ್ನಲ್ಲಿ ಈ ವಿಷಯ ಪ್ರಕಟಿಸಿದ್ದು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮೂಲಸೌಕರ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಅಲ್ಲದೆ ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಗೆ ದಾಖಲಾತಿ ಉತ್ತೇಜಿಸಲು ಹೆಣ್ಣು ಮಕ್ಕಳಿಗೆ ಪ್ರತಿದಿನದ ಹಾಜರಾತಿಗೆ ಎರಡು ರೂಪಾಯಿ ಪ್ರೋತ್ಸಾಹಧನ ನೀಡಲಾಗುತ್ತದೆ.<br /> <br /> * ಪ್ರಾಥಮಿಕ ಶಿಕ್ಷಣಕ್ಕೆ ರೂ15,680 ಕೋಟಿ ಅನುದಾನ<br /> * ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ. ಉತ್ತಮ ತರಬೇತಿ ಪಡೆದ ಶಿಕ್ಷಕರ ನೇಮಕ<br /> * ಗುಣಮಟ್ಟದ ಶಿಕ್ಷಣಕ್ಕಾಗಿ ಶಿಕ್ಷಕರ ವಿದ್ಯಾರ್ಹತೆ ಹೆಚ್ಚಿಸಲು ಯೋಚನೆ<br /> * ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಪರೀಕ್ಷಾ ಮಾಹಿತಿ<br /> * ಸಾರ್ವಜನಿಕ ಗ್ರಂಥಾಲಯಗಳಲ್ಲಿ ಹಂತ ಹಂತವಾಗಿ ಡಿಜಿಟಲ್ ಜ್ಞಾನ ಕೇಂದ್ರಗಳ ಸ್ಥಾಪನೆ<br /> * 500ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಇರುವ ದೊಡ್ಡ ಶಾಲೆಗಳಿಗೆ ಬಿಸಿಯೂಟ ತಯಾರಿಕೆಗೆ ರೂ10 ಕೋಟಿ ವೆಚ್ಚದಲ್ಲಿ ಸ್ಟೀಮ್ ಬಾಯ್ಲರ್ಗಳ ವ್ಯವಸ್ಥೆ<br /> * ಮಾತೃಭಾಷೆ ಜೊತೆಗೆ 1ನೇ ತರಗತಿಯಿಂದ ಪರಿಣಾಮಕಾರಿಯಾಗಿ ಇಂಗ್ಲಿಷ್ ಭಾಷೆ ಕಲಿಕೆ<br /> * ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸಹಯೋಗದಲ್ಲಿ ಪ್ರಾಯೋಗಿಕವಾಗಿ ಟೆಲಿಶಿಕ್ಷಣ ಕಾರ್ಯಕ್ರಮ<br /> * ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಹಂತ ಹಂತವಾಗಿ ದೂರಸಂವೇದಿ ಶಿಕ್ಷಣ ಕಾರ್ಯಕ್ರಮ ಜಾರಿ<br /> * ಬೆಂಗಳೂರಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗೆ ರೂ 3 ಕೋಟಿ<br /> * ಉನ್ನತ ಶಿಕ್ಷಣ<br /> * ಈ ಬಾರಿ ಉನ್ನತ ಶಿಕ್ಷಣಕ್ಕೆ ರೂ3,243 ಕೋಟಿ ಅನುದಾನ<br /> * 15 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ಸ್ಥಾಪನೆ<br /> * ಶೈಕ್ಷಣಿಕವಾಗಿ ಹಿಂದುಳಿದ ಬ್ಲಾಕ್ಗಳಲ್ಲಿ ಸುಸಜ್ಜಿತ 15 ಹೊಸ ಕಾಲೇಜುಗಳ ಸ್ಥಾಪನೆ<br /> * ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್, ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ನೈಪುಣ್ಯ ನಿಧಿ ಕಾರ್ಯಕ್ರಮ<br /> * ಮುಕ್ತ ಮೂಲ ನಾಯಕತ್ವ ಕಾರ್ಯಕ್ರಮದಡಿ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ 10 ಸಾವಿರ ವಿದ್ಯಾರ್ಥಿಗಳಿಗೆ ತರಬೇತಿ<br /> * ಧಾರವಾಡದಲ್ಲಿ ಉನ್ನತ ಶಿಕ್ಷಣ ಅಕಾಡೆಮಿ<br /> * ವಾರ್ಷಿಕ ರೂ2.5 ಲಕ್ಷಕ್ಕಿಂತ ಕಡಿಮೆ ಆದಾಯದ ಬಡ ವಿದ್ಯಾರ್ಥಿ ಉನ್ನತ ಶಿಕ್ಷಣಕ್ಕೆ ಬ್ಯಾಂಕಿನಿಂದ ಸಾಲ ಪಡೆದರೆ `ರಾಜೀವ್ಗಾಂಧಿ ಶಿಷ್ಯವೇತನ'<br /> * ವಿಶ್ವವಿದ್ಯಾಲಯ, ಕಾಲೇಜು ಹಾಗೂ ಪಾಲಿಟೆಕ್ನಿಕ್ಗಳಲ್ಲಿ ಇನೋವೇಷನ್ ಕ್ಲಬ್ಗಳ ಸ್ಥಾಪನೆ<br /> * ಎಚ್ಐವಿ, ಕುಷ್ಠರೋಗ ಪೀಡಿತರ ಅರ್ಹ ಮಕ್ಕಳಿಗೆ ಉಚಿತವಾಗಿ ಉನ್ನತ ಶಿಕ್ಷಣ, ವಿದ್ಯಾರ್ಥಿ ವೇತನ<br /> * ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿ<br /> * ಗದಗದಲ್ಲಿ ಕರ್ನಾಟಕ ವಿವಿ ಸ್ನಾತಕೋತ್ತರ ಕೇಂದ್ರ ಸ್ಥಾಪನೆ<br /> * ಗುಲ್ಬರ್ಗದ ಸಿದ್ಧಾರ್ಥ ವಿಹಾರ ಟ್ರಸ್ಟ್ನಿಂದ ಸ್ಥಾಪಿಸಲಾಗುವ ಪಾಲಿ, ಸಂಸ್ಕೃತ ಹಾಗೂ ತುಲನಾತ್ಮಕ ತತ್ವಶಾಸ್ತ್ರದ ಅಂತರರಾಷ್ಟ್ರೀಯ ಅಧ್ಯಯನ ಸಂಸ್ಥೆಗೆ ಅನುದಾನ<br /> * ಮಹಿಳಾ ವಿವಿ ವ್ಯಾಪ್ತಿಯನ್ನು ಇಡೀ ರಾಜ್ಯಕ್ಕೆ ವಿಸ್ತರಿಸುವ ಉದ್ದೇಶದಿಂದ ಮಂಡ್ಯದಲ್ಲಿ ವಿಸ್ತರಣಾ ಕೇಂದ್ರ ಸ್ಥಾಪಿಸಲು ರೂ30 ಕೋಟಿ ಅನುದಾನ<br /> * ಮೈಸೂರು ವಿವಿಯಲ್ಲಿ ನಾಲ್ವಡಿ ಒಡೆಯರ್ ಸಾಮಾಜಿಕ ಅಭಿವೃದ್ಧಿ ಅಧ್ಯಯನ ಪೀಠ ಸ್ಥಾಪನೆ<br /> * ಬೆಳಗಾವಿಯ ರಾಣಿಚೆನ್ನಮ್ಮ, ವಿಜಾಪುರ ಮಹಿಳಾ ವಿವಿ ಹಾಗೂ ದಾವಣಗೆರೆ ವಿವಿಗೆ ತಲಾ ರೂ5 ಕೋಟಿ ಅನುದಾನ<br /> * 25 ಸರ್ಕಾರಿ ಕಾಲೇಜುಗಳಲ್ಲಿ ಶೈಕ್ಷಣಿಕ ಉತ್ಕೃಷ್ಟತೆ ಹೆಚ್ಚಿಸಿಹೆಚ್ಚಿಸಿ ಶೈಕ್ಷಣಿಕ ಸ್ವಾಯತ್ತತೆಗೆ ಅರ್ಹಗೊಳಿಸಲು ತಲಾ ರೂ2 ಕೋಟಿ ಅನುದಾನ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>