<p><strong>ಮಹದೇವಪುರ:</strong> `ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಈ ತಿಂಗಳ 10ರಿಂದ ಒಂದು ರೂಪಾಯಿಗೆ ಒಂದು ಕೆ.ಜಿ. ಅಕ್ಕಿಯನ್ನು ವಿತರಿಸಲು ಆದೇಶ ನೀಡಲಾಗಿದೆ' ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.<br /> <br /> ದೊಡ್ಡನೆಕ್ಕುಂದಿ ಗ್ರಾಮದಲ್ಲಿ ಭಾನುವಾರ ನಡೆದ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. `ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಘೋಷಣೆ ಮಾಡಿದ ಮೊದಲ ಯೋಜನೆ ಇದಾಗಿದೆ. ರಾಜ್ಯದಲ್ಲಿನ ಎಲ್ಲಾ ಬಡವರ ಹಸಿವನ್ನು ನೀಗಿಸುವ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ' ಎಂದು ಅವರು ಹೇಳಿದರು.<br /> <br /> `ಅಲ್ಲದೆ ರಾಜ್ಯದಲ್ಲಿನ ಎಲ್ಲ ವರ್ಗದವರಿಗೂ ಪಡಿತರ ಚೀಟಿಯನ್ನು ನೀಡುವ ಉದ್ದೇಶದಿಂದ ಇಂಟರ್ನೆಟ್ ಮೂಲಕ ನೋಂದಣಿ ಕಾರ್ಯವನ್ನು ಕೈಗೊಳ್ಳಲಾಗಿದೆ. ಈಗಾಗಲೇ ರಾಜ್ಯದಲ್ಲಿ ಒಟ್ಟು 12 ಲಕ್ಷ ಜನರು ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಿದ್ದಾರೆ' ಎಂದರು.<br /> <br /> ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, `ಕಳೆದ ಐದು ವರ್ಷಗಳ ಅವಧಿಯಲ್ಲಿ ರಾಜ್ಯದ ಸಂಪತ್ತನ್ನು ಲೂಟಿ ಮಾಡಿರುವ ಬಿಜೆಪಿ ಸರ್ಕಾರ ಭ್ರಷ್ಟಾಚಾರದ ಭೂತವನ್ನು ಬಿಟ್ಟು ಹೋಗಿದೆ. ಅದನ್ನು ಹೊಡೆದು ತೊಲಗಿಸಲು ಕಾಂಗ್ರೆಸ್ ಸಾಕಷ್ಟು ಶ್ರಮವಹಿಸಬೇಕಿದೆ' ಎಂದರು.<br /> <br /> `ರಾಜ್ಯದ ಅಭಿವೃದ್ಧಿ ನೆಪದಲ್ಲಿ ಜನತೆಯ ಹಣವನ್ನು ಕಬಳಿಸಿರುವ ಬಿಜೆಪಿ ಪಕ್ಷದ ನಾಯಕರು ಹೀನಾಯ ಸೋಲು ಕಂಡಿದ್ದಾರೆ. ಅಲ್ಲದೆ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಲು ಕೂಡಾ ಅವಕಾಶ ಇಲ್ಲದಂತಹ ಸ್ಥಿತಿಯಲ್ಲಿ ಬಿಜೆಪಿ ಪಕ್ಷ ಇದೆ' ಎಂದು ಹೇಳಿದರು.<br /> <br /> ದೊಡ್ಡನೆಕ್ಕುಂದಿ ನಗರಸಭೆಯ ಮಾಜಿ ಸದಸ್ಯ, ಬಿಜೆಪಿಯ ಭಾಸ್ಕರ್ ರೆಡ್ಡಿ ಅವರನ್ನು ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಯಿತು. ಶಾಸಕ ಬಿ.ಶಿವಣ್ಣ, ಕಾಂಗ್ರೆಸ್ ಮುಖಂಡರಾದ ಎಚ್.ಕೆ.ನಾರಾಯಣಸ್ವಾಮಿ, ಎಂ.ವೇಣುಗೋಪಾಲ್ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹದೇವಪುರ:</strong> `ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಈ ತಿಂಗಳ 10ರಿಂದ ಒಂದು ರೂಪಾಯಿಗೆ ಒಂದು ಕೆ.ಜಿ. ಅಕ್ಕಿಯನ್ನು ವಿತರಿಸಲು ಆದೇಶ ನೀಡಲಾಗಿದೆ' ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.<br /> <br /> ದೊಡ್ಡನೆಕ್ಕುಂದಿ ಗ್ರಾಮದಲ್ಲಿ ಭಾನುವಾರ ನಡೆದ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. `ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಘೋಷಣೆ ಮಾಡಿದ ಮೊದಲ ಯೋಜನೆ ಇದಾಗಿದೆ. ರಾಜ್ಯದಲ್ಲಿನ ಎಲ್ಲಾ ಬಡವರ ಹಸಿವನ್ನು ನೀಗಿಸುವ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ' ಎಂದು ಅವರು ಹೇಳಿದರು.<br /> <br /> `ಅಲ್ಲದೆ ರಾಜ್ಯದಲ್ಲಿನ ಎಲ್ಲ ವರ್ಗದವರಿಗೂ ಪಡಿತರ ಚೀಟಿಯನ್ನು ನೀಡುವ ಉದ್ದೇಶದಿಂದ ಇಂಟರ್ನೆಟ್ ಮೂಲಕ ನೋಂದಣಿ ಕಾರ್ಯವನ್ನು ಕೈಗೊಳ್ಳಲಾಗಿದೆ. ಈಗಾಗಲೇ ರಾಜ್ಯದಲ್ಲಿ ಒಟ್ಟು 12 ಲಕ್ಷ ಜನರು ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಿದ್ದಾರೆ' ಎಂದರು.<br /> <br /> ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, `ಕಳೆದ ಐದು ವರ್ಷಗಳ ಅವಧಿಯಲ್ಲಿ ರಾಜ್ಯದ ಸಂಪತ್ತನ್ನು ಲೂಟಿ ಮಾಡಿರುವ ಬಿಜೆಪಿ ಸರ್ಕಾರ ಭ್ರಷ್ಟಾಚಾರದ ಭೂತವನ್ನು ಬಿಟ್ಟು ಹೋಗಿದೆ. ಅದನ್ನು ಹೊಡೆದು ತೊಲಗಿಸಲು ಕಾಂಗ್ರೆಸ್ ಸಾಕಷ್ಟು ಶ್ರಮವಹಿಸಬೇಕಿದೆ' ಎಂದರು.<br /> <br /> `ರಾಜ್ಯದ ಅಭಿವೃದ್ಧಿ ನೆಪದಲ್ಲಿ ಜನತೆಯ ಹಣವನ್ನು ಕಬಳಿಸಿರುವ ಬಿಜೆಪಿ ಪಕ್ಷದ ನಾಯಕರು ಹೀನಾಯ ಸೋಲು ಕಂಡಿದ್ದಾರೆ. ಅಲ್ಲದೆ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಲು ಕೂಡಾ ಅವಕಾಶ ಇಲ್ಲದಂತಹ ಸ್ಥಿತಿಯಲ್ಲಿ ಬಿಜೆಪಿ ಪಕ್ಷ ಇದೆ' ಎಂದು ಹೇಳಿದರು.<br /> <br /> ದೊಡ್ಡನೆಕ್ಕುಂದಿ ನಗರಸಭೆಯ ಮಾಜಿ ಸದಸ್ಯ, ಬಿಜೆಪಿಯ ಭಾಸ್ಕರ್ ರೆಡ್ಡಿ ಅವರನ್ನು ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಯಿತು. ಶಾಸಕ ಬಿ.ಶಿವಣ್ಣ, ಕಾಂಗ್ರೆಸ್ ಮುಖಂಡರಾದ ಎಚ್.ಕೆ.ನಾರಾಯಣಸ್ವಾಮಿ, ಎಂ.ವೇಣುಗೋಪಾಲ್ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>