<p><strong>ಮುಧೋಳ: </strong>ಗ್ರಾಮೀಣ ಕಲೆಗಳ ಉಳಿವಿಗಾಗಿ, ಕಲಾವಿದರನ್ನು ಪ್ರೋತ್ಸಾಹಿಸಲು ರಾಜ್ಯದಾದ್ಯಂತ 100 ಸಾಂಸ್ಕೃತಿಕ ಭವನಗಳ ನಿರ್ಮಾಣಕ್ಕೆ ಈಗಾಗಲೇ ಹಣ ಮಂಜೂರಾಗಿದ್ದು, ಇನ್ನೂ 100 ಭವನಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಸಣ್ಣ ನೀರಾವರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಕಲೆ, ಸಂಸ್ಕೃತಿ ಸಂಪ್ರದಾಯಗಳು ನಶಿಸಿ ಹೋಗುತ್ತಿವೆ. ಗ್ರಾಮೀಣ ಕಲಾವಿದರನ್ನು ಗುರುತಿಸುವವರಿಲ್ಲದೆ, ಬಹುತೇಕ ಕಲಾವಿದರ ಕಲೆಗಳು ವ್ಯರ್ಥವಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕೆಲವು ಆಯ್ದ ಗ್ರಾಮಗಳಲ್ಲಿ ಸಾಂಸ್ಕೃತಿಕ ಭವನಗಳನ್ನು ನಿರ್ಮಿಸಿ ಅಲ್ಲಿನ ಕಲೆ ಹಾಗೂ ಕಲಾವಿದರನ್ನು ಪ್ರೋತ್ಸಾಹಿಸಲು ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಈ ಮುಂಚೆ ಒಂದು ಸಾಂಸ್ಕೃತಿಕ ಭವನಕ್ಕೆ ರೂ. 2 ಲಕ್ಷ ಕೊಡಲಾಗುತ್ತಿತ್ತು, ಆದರೆ ಇದೀಗ ನಮ್ಮ ಸರ್ಕಾರದಲ್ಲಿ ರೂ. 10 ಲಕ್ಷ ನೀಡಲಾಗುತ್ತಿದೆ. ಸಾಂಸ್ಕೃತಿಕ ಭವನಗಳಿಗೆ ಸ್ಥಳೀಯ ಶ್ರೇಷ್ಠ ದಿವಂಗತ ಕಲಾವಿದರ ಹೆಸರನ್ನು ಇಡಲಾಗುತ್ತಿದೆ ಎಂದು ಹೇಳಿದರು.</p>.<p><strong>ರನ್ನ ಉತ್ಸವ:</strong> ಈ ಬಾರಿ ರನ್ನ ಉತ್ಸವವನ್ನು ಮುಧೋಳದಲ್ಲಿ ವಿಜೃಂಭಣೆಯಿಂದ ಆಚರಿಸಲು ನಿಶ್ಚಯಿಸಲಾಗಿದೆ. ಜಾನಪದ ಪ್ರಶಸ್ತಿ ನೀಡುವುದು ಮತ್ತು ಕಾರ್ಯಕ್ರಮದ ಪೂರ್ಣ ಜವಾಬ್ದಾರಿಯನ್ನು ರನ್ನ ಪ್ರತಿಷ್ಠಾನಕ್ಕೆ ವಹಿಸಲಾಗುವುದು. ಏಪ್ರಿಲ್ ಅಥವಾ ಮೇ ತಿಂಗಳ ಮೊದಲ ವಾರದಲ್ಲಿ ದಿನಾಂಕ ನಿಗದಿ ಪಡಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಧೋಳ: </strong>ಗ್ರಾಮೀಣ ಕಲೆಗಳ ಉಳಿವಿಗಾಗಿ, ಕಲಾವಿದರನ್ನು ಪ್ರೋತ್ಸಾಹಿಸಲು ರಾಜ್ಯದಾದ್ಯಂತ 100 ಸಾಂಸ್ಕೃತಿಕ ಭವನಗಳ ನಿರ್ಮಾಣಕ್ಕೆ ಈಗಾಗಲೇ ಹಣ ಮಂಜೂರಾಗಿದ್ದು, ಇನ್ನೂ 100 ಭವನಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಸಣ್ಣ ನೀರಾವರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಕಲೆ, ಸಂಸ್ಕೃತಿ ಸಂಪ್ರದಾಯಗಳು ನಶಿಸಿ ಹೋಗುತ್ತಿವೆ. ಗ್ರಾಮೀಣ ಕಲಾವಿದರನ್ನು ಗುರುತಿಸುವವರಿಲ್ಲದೆ, ಬಹುತೇಕ ಕಲಾವಿದರ ಕಲೆಗಳು ವ್ಯರ್ಥವಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕೆಲವು ಆಯ್ದ ಗ್ರಾಮಗಳಲ್ಲಿ ಸಾಂಸ್ಕೃತಿಕ ಭವನಗಳನ್ನು ನಿರ್ಮಿಸಿ ಅಲ್ಲಿನ ಕಲೆ ಹಾಗೂ ಕಲಾವಿದರನ್ನು ಪ್ರೋತ್ಸಾಹಿಸಲು ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಈ ಮುಂಚೆ ಒಂದು ಸಾಂಸ್ಕೃತಿಕ ಭವನಕ್ಕೆ ರೂ. 2 ಲಕ್ಷ ಕೊಡಲಾಗುತ್ತಿತ್ತು, ಆದರೆ ಇದೀಗ ನಮ್ಮ ಸರ್ಕಾರದಲ್ಲಿ ರೂ. 10 ಲಕ್ಷ ನೀಡಲಾಗುತ್ತಿದೆ. ಸಾಂಸ್ಕೃತಿಕ ಭವನಗಳಿಗೆ ಸ್ಥಳೀಯ ಶ್ರೇಷ್ಠ ದಿವಂಗತ ಕಲಾವಿದರ ಹೆಸರನ್ನು ಇಡಲಾಗುತ್ತಿದೆ ಎಂದು ಹೇಳಿದರು.</p>.<p><strong>ರನ್ನ ಉತ್ಸವ:</strong> ಈ ಬಾರಿ ರನ್ನ ಉತ್ಸವವನ್ನು ಮುಧೋಳದಲ್ಲಿ ವಿಜೃಂಭಣೆಯಿಂದ ಆಚರಿಸಲು ನಿಶ್ಚಯಿಸಲಾಗಿದೆ. ಜಾನಪದ ಪ್ರಶಸ್ತಿ ನೀಡುವುದು ಮತ್ತು ಕಾರ್ಯಕ್ರಮದ ಪೂರ್ಣ ಜವಾಬ್ದಾರಿಯನ್ನು ರನ್ನ ಪ್ರತಿಷ್ಠಾನಕ್ಕೆ ವಹಿಸಲಾಗುವುದು. ಏಪ್ರಿಲ್ ಅಥವಾ ಮೇ ತಿಂಗಳ ಮೊದಲ ವಾರದಲ್ಲಿ ದಿನಾಂಕ ನಿಗದಿ ಪಡಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>