<p>ಕೋಲಾರ: ವೈದ್ಯಕೀಯ ಕ್ಷೇತ್ರದಲ್ಲಿ ಮಾನವ ಸಂಪನ್ಮೂಲದ ಕೊರತೆ ನೀಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ 100 ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ನಿರ್ಧರಿಸಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಗುಲಾಂ ನಬಿ ಆಜಾದ್ ಇಲ್ಲಿ ಶುಕ್ರವಾರ ತಿಳಿಸಿದರು.<br /> <br /> ನಗರದ ಹೊರವಲಯದ ಟಮಕದಲ್ಲಿರುವ ದೇವರಾಜ ಅರಸ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಬೆಳ್ಳಿ ಮಹೋತ್ಸವದ ಅಂಗವಾಗಿ ರಜತ ಭವನ, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಕ್ಕೆ ಶಂಕುಸ್ಥಾಪನೆ ಮಾಡಿ ಅವರು ಮಾತನಾಡಿದರು.<br /> <br /> ದೇಶದಲ್ಲಿ ಪ್ರಸ್ತುತ 7 ಲಕ್ಷ ವೈದ್ಯರಿದ್ದಾರೆ. ಆದರೆ ಇನ್ನೂ 7 ಲಕ್ಷ ವೈದ್ಯರು ಬೇಕಾಗಿದ್ದಾರೆ. <br /> ಅದಕ್ಕೆ ಇನ್ನಷ್ಟು ವೈದ್ಯಕೀಯ ಕಾಲೇಜುಗಳೂ ಅಗತ್ಯವಾಗಿದೆ. ಹೀಗಾಗಿ 100 ಹೆಚ್ಚುವರಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದರು.<br /> <br /> ವೈದ್ಯಕೀಯ ಕಾಲೇಜು ಸ್ಥಾಪನೆಗೆ ನಿಗದಿ ಮಾಡಿರುವ ನಿಯಮಗಳಲ್ಲಿಯೂ ಕೆಲವನ್ನು ಸಡಿಲಗೊಳಿಸಲಾಗಿದೆ. ಕಾಲೇಜು ಸ್ಥಾಪನೆಗೆ 25 ಎಕರೆ ಭೂಮಿ ಇರಬೇಕಿತ್ತು. ಆದರೆ ಅದನ್ನು 20 ಎಕರೆಗೆ ಇಳಿಸಲಾಗಿದೆ. <br /> ಕಾಲೇಜು ಸ್ಥಾಪನೆಗೆ ಬೇಕಾಗಿದ್ದ ಬಂಡವಾಳ ವೆಚ್ಚದಲ್ಲೂ ಶೇ 30ರಷ್ಟು ಕಡಿತವಾಗಲಿದೆ. ಹೀಗಾಗಿ ಕಾಲೇಜು ಸ್ಥಾಪನೆ ಮಾಡುವ ಉದ್ದೇಶವುಳ್ಳವರು ಉತ್ಸಾಹದಿಂದ ಮುಂದೆ ಬರಬಹುದು ಎಂದರು.<br /> <br /> ಪ್ರತಿ ವೈದ್ಯಕೀಯ ಕಾಲೇಜಿನಲ್ಲಿ ಈಗಿರುವಂತೆ ಪದವಿ ತರಗತಿಗೆ 150 ವಿದ್ಯಾರ್ಥಿಗಳ ಬದಲು 250 ಮಂದಿಯನ್ನು ದಾಖಲು ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. <br /> <br /> ಸ್ನಾತಕೋತ್ತರ ಪದವಿ ಪ್ರವೇಶ ಸಂಖ್ಯೆ ಏರಿಸಲಾಗುವುದು. ಬೋಧಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ಸದ್ಯಕ್ಕೆ ಸೇವೆಯಲ್ಲಿರುವವರ ನಿವೃತ್ತಿ ವಯಸ್ಸನ್ನು 65ರಿಂದ 70ಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ವೈದ್ಯಕೀಯ ಕ್ಷೇತ್ರದಲ್ಲಿ ಮಾನವ ಸಂಪನ್ಮೂಲದ ಕೊರತೆ ನೀಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ 100 ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ನಿರ್ಧರಿಸಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಗುಲಾಂ ನಬಿ ಆಜಾದ್ ಇಲ್ಲಿ ಶುಕ್ರವಾರ ತಿಳಿಸಿದರು.<br /> <br /> ನಗರದ ಹೊರವಲಯದ ಟಮಕದಲ್ಲಿರುವ ದೇವರಾಜ ಅರಸ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಬೆಳ್ಳಿ ಮಹೋತ್ಸವದ ಅಂಗವಾಗಿ ರಜತ ಭವನ, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಕ್ಕೆ ಶಂಕುಸ್ಥಾಪನೆ ಮಾಡಿ ಅವರು ಮಾತನಾಡಿದರು.<br /> <br /> ದೇಶದಲ್ಲಿ ಪ್ರಸ್ತುತ 7 ಲಕ್ಷ ವೈದ್ಯರಿದ್ದಾರೆ. ಆದರೆ ಇನ್ನೂ 7 ಲಕ್ಷ ವೈದ್ಯರು ಬೇಕಾಗಿದ್ದಾರೆ. <br /> ಅದಕ್ಕೆ ಇನ್ನಷ್ಟು ವೈದ್ಯಕೀಯ ಕಾಲೇಜುಗಳೂ ಅಗತ್ಯವಾಗಿದೆ. ಹೀಗಾಗಿ 100 ಹೆಚ್ಚುವರಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದರು.<br /> <br /> ವೈದ್ಯಕೀಯ ಕಾಲೇಜು ಸ್ಥಾಪನೆಗೆ ನಿಗದಿ ಮಾಡಿರುವ ನಿಯಮಗಳಲ್ಲಿಯೂ ಕೆಲವನ್ನು ಸಡಿಲಗೊಳಿಸಲಾಗಿದೆ. ಕಾಲೇಜು ಸ್ಥಾಪನೆಗೆ 25 ಎಕರೆ ಭೂಮಿ ಇರಬೇಕಿತ್ತು. ಆದರೆ ಅದನ್ನು 20 ಎಕರೆಗೆ ಇಳಿಸಲಾಗಿದೆ. <br /> ಕಾಲೇಜು ಸ್ಥಾಪನೆಗೆ ಬೇಕಾಗಿದ್ದ ಬಂಡವಾಳ ವೆಚ್ಚದಲ್ಲೂ ಶೇ 30ರಷ್ಟು ಕಡಿತವಾಗಲಿದೆ. ಹೀಗಾಗಿ ಕಾಲೇಜು ಸ್ಥಾಪನೆ ಮಾಡುವ ಉದ್ದೇಶವುಳ್ಳವರು ಉತ್ಸಾಹದಿಂದ ಮುಂದೆ ಬರಬಹುದು ಎಂದರು.<br /> <br /> ಪ್ರತಿ ವೈದ್ಯಕೀಯ ಕಾಲೇಜಿನಲ್ಲಿ ಈಗಿರುವಂತೆ ಪದವಿ ತರಗತಿಗೆ 150 ವಿದ್ಯಾರ್ಥಿಗಳ ಬದಲು 250 ಮಂದಿಯನ್ನು ದಾಖಲು ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. <br /> <br /> ಸ್ನಾತಕೋತ್ತರ ಪದವಿ ಪ್ರವೇಶ ಸಂಖ್ಯೆ ಏರಿಸಲಾಗುವುದು. ಬೋಧಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ಸದ್ಯಕ್ಕೆ ಸೇವೆಯಲ್ಲಿರುವವರ ನಿವೃತ್ತಿ ವಯಸ್ಸನ್ನು 65ರಿಂದ 70ಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>