<p><strong>ಬೆಂಗಳೂರು: </strong>ಆರೋಗ್ಯ ಕವಚ ಯೋಜನೆಯ `108~ ಅಂಬುಲೆನ್ಸ್ಗಳ ಮೇಲೆ ಇನ್ನು ಮುಂದೆ ಮುಖ್ಯಮಂತ್ರಿ, ಆರೋಗ್ಯ ಸಚಿವರ ಭಾವಚಿತ್ರವನ್ನು ಹಾಕದೆ ಇರಲು ಸರ್ಕಾರದ ತೀರ್ಮಾನಿಸಿದೆ.<br /> ಕೇಂದ್ರ ಸರ್ಕಾರದ ಆರ್ಥಿಕ ನೆರವಿನೊಂದಿಗೆ ರಾಜ್ಯ ಸರ್ಕಾರ ಈ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. <br /> </p>.<p>ಹೀಗಾಗಿ ರಾಜ್ಯದ ಮುಖ್ಯಮಂತ್ರಿ, ಆರೋಗ್ಯ ಸಚಿವರ ಭಾವಚಿತ್ರದ ಜೊತೆಗೆ ಪ್ರಧಾನಮಂತ್ರಿಗಳ ಭಾವಚಿತ್ರವನ್ನೂ ಅಂಬುಲೆನ್ಸ್ಗಳ ಮೇಲೆ ಹಾಕಬೇಕು ಎಂದು ಪ್ರತಿಪಕ್ಷದ ಸದಸ್ಯರು ವಿಧಾನ ಸಭೆಯಲ್ಲಿ ಆಗ್ರಹಿಸಿದ್ದರು. ಅಲ್ಲದೆ ಕಾಂಗ್ರೆಸ್ ಕಾರ್ಯಕರ್ತರು ಕೆಲವೆಡೆ ಮುಖ್ಯಮಂತ್ರಿ, ಆರೋಗ್ಯ ಸಚಿವರ ಭಾವಚಿತ್ರಗಳಿಗೆ ಮಸಿ ಬಳಿದಿದ್ದರು.<br /> <br /> ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು `108~ ಅಂಬುಲೆನ್ಸ್ಗಳ ಮೇಲೆ ಯಾರ ಭಾವಚಿತ್ರವನ್ನೂ ಹಾಕುವುದು ಬೇಡ ಎಂಬ ತೀರ್ಮಾನಕ್ಕೆ ಬಂದಿದ್ದಾರೆ.<br /> <br /> `ಕೇಂದ್ರ ಸರ್ಕಾರವೂ ಅನುದಾನ ನೀಡಿರುವುದರಿಂದ ರಾಜ್ಯದ ಮುಖ್ಯಮಂತ್ರಿಗಳ ಭಾವಚಿತ್ರವನ್ನು ಹಾಕುವುದು ಸರಿಯಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಬಿ.ಶ್ರೀರಾಮುಲು ಅವರ ಭಾವಚಿತ್ರ ತೆಗೆದು ಸರ್ಕಾರದ ಲಾಂಛನವನ್ನು ಮಾತ್ರ ಹಾಕಿ~ ಎಂಬುದಾಗಿ ಸದಾನಂದ ಗೌಡ ಅವರು ಸೂಚಿಸಿರುವುದಾಗಿ ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.<br /> <br /> ಈ ಯೋಜನೆ ಆರಂಭವಾಗಿ ಇದೇ ನವೆಂಬರ್ಗೆ ಮೂರು ವರ್ಷ ತುಂಬಲಿದ್ದು, ಇದುವರೆಗೆ 2.5 ಕೋಟಿ ತುರ್ತು ಕರೆಗಳನ್ನು ಸ್ವೀಕರಿಸಿದೆ. ಯೋಜನೆಗೆ ಇಲ್ಲಿಯವರೆಗೆ 221 ಕೋಟಿ ರೂಪಾಯಿ ವೆಚ್ಚವಾಗಿದೆ. ರಾಜ್ಯದಲ್ಲಿ ಪ್ರಸ್ತುತ 517 ಅಂಬುಲೆನ್ಸ್ಗಳು ಕಾರ್ಯಾಚರಣೆಯಲ್ಲಿವೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಆರೋಗ್ಯ ಕವಚ ಯೋಜನೆಯ `108~ ಅಂಬುಲೆನ್ಸ್ಗಳ ಮೇಲೆ ಇನ್ನು ಮುಂದೆ ಮುಖ್ಯಮಂತ್ರಿ, ಆರೋಗ್ಯ ಸಚಿವರ ಭಾವಚಿತ್ರವನ್ನು ಹಾಕದೆ ಇರಲು ಸರ್ಕಾರದ ತೀರ್ಮಾನಿಸಿದೆ.<br /> ಕೇಂದ್ರ ಸರ್ಕಾರದ ಆರ್ಥಿಕ ನೆರವಿನೊಂದಿಗೆ ರಾಜ್ಯ ಸರ್ಕಾರ ಈ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. <br /> </p>.<p>ಹೀಗಾಗಿ ರಾಜ್ಯದ ಮುಖ್ಯಮಂತ್ರಿ, ಆರೋಗ್ಯ ಸಚಿವರ ಭಾವಚಿತ್ರದ ಜೊತೆಗೆ ಪ್ರಧಾನಮಂತ್ರಿಗಳ ಭಾವಚಿತ್ರವನ್ನೂ ಅಂಬುಲೆನ್ಸ್ಗಳ ಮೇಲೆ ಹಾಕಬೇಕು ಎಂದು ಪ್ರತಿಪಕ್ಷದ ಸದಸ್ಯರು ವಿಧಾನ ಸಭೆಯಲ್ಲಿ ಆಗ್ರಹಿಸಿದ್ದರು. ಅಲ್ಲದೆ ಕಾಂಗ್ರೆಸ್ ಕಾರ್ಯಕರ್ತರು ಕೆಲವೆಡೆ ಮುಖ್ಯಮಂತ್ರಿ, ಆರೋಗ್ಯ ಸಚಿವರ ಭಾವಚಿತ್ರಗಳಿಗೆ ಮಸಿ ಬಳಿದಿದ್ದರು.<br /> <br /> ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು `108~ ಅಂಬುಲೆನ್ಸ್ಗಳ ಮೇಲೆ ಯಾರ ಭಾವಚಿತ್ರವನ್ನೂ ಹಾಕುವುದು ಬೇಡ ಎಂಬ ತೀರ್ಮಾನಕ್ಕೆ ಬಂದಿದ್ದಾರೆ.<br /> <br /> `ಕೇಂದ್ರ ಸರ್ಕಾರವೂ ಅನುದಾನ ನೀಡಿರುವುದರಿಂದ ರಾಜ್ಯದ ಮುಖ್ಯಮಂತ್ರಿಗಳ ಭಾವಚಿತ್ರವನ್ನು ಹಾಕುವುದು ಸರಿಯಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಬಿ.ಶ್ರೀರಾಮುಲು ಅವರ ಭಾವಚಿತ್ರ ತೆಗೆದು ಸರ್ಕಾರದ ಲಾಂಛನವನ್ನು ಮಾತ್ರ ಹಾಕಿ~ ಎಂಬುದಾಗಿ ಸದಾನಂದ ಗೌಡ ಅವರು ಸೂಚಿಸಿರುವುದಾಗಿ ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.<br /> <br /> ಈ ಯೋಜನೆ ಆರಂಭವಾಗಿ ಇದೇ ನವೆಂಬರ್ಗೆ ಮೂರು ವರ್ಷ ತುಂಬಲಿದ್ದು, ಇದುವರೆಗೆ 2.5 ಕೋಟಿ ತುರ್ತು ಕರೆಗಳನ್ನು ಸ್ವೀಕರಿಸಿದೆ. ಯೋಜನೆಗೆ ಇಲ್ಲಿಯವರೆಗೆ 221 ಕೋಟಿ ರೂಪಾಯಿ ವೆಚ್ಚವಾಗಿದೆ. ರಾಜ್ಯದಲ್ಲಿ ಪ್ರಸ್ತುತ 517 ಅಂಬುಲೆನ್ಸ್ಗಳು ಕಾರ್ಯಾಚರಣೆಯಲ್ಲಿವೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>