ಬೆಂಗಳೂರು: ಕನ್ನಡ ನುಡಿತೇರು ಜಾಗೃತಿ ಕಾರ್ಯಕ್ರಮವನ್ನು ಇದೇ 12ರಿಂದ 15ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗಿದ್ದು, ಇದೇ 12ರಂದು ಸುಳ್ಯದಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಇದಕ್ಕೆ ಚಾಲನೆ ನೀಡಲಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ `ಮುಖ್ಯಮಂತ್ರಿ~ಚಂದ್ರು ತಿಳಿಸಿದರು. 15ರಂದು ಸಂಜೆ ಕುಂದಾಪುರದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.
ಬಹುಭಾಷೆ, ಬಹುಸಂಸ್ಕೃತಿಯ ಜನರು ವಾಸಿಸುತ್ತಿರುವ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕನ್ನಡತನವನ್ನು ಜಾಗೃತಿಗೊಳಿಸಲು ನುಡಿತೇರು ಹಮ್ಮಿಕೊಂಡಿದೆ ಎಂದು ತಿಳಿಸಿದರು.