<p><strong>ಸುವರ್ಣಸೌಧ (ಬೆಳಗಾವಿ): </strong>ರಾಜ್ಯದಲ್ಲಿ 32 ಲಕ್ಷ ಮಂದಿ ಹೊಸ ಪಡಿತರ ಚೀಟಿಗಳನ್ನು ಕೋರಿ ಅರ್ಜಿ ಸಲ್ಲಿಸಿದ್ದು, 14 ಲಕ್ಷ ಪಡಿತರ ಚೀಟಿಗಳು ವಿತರಣೆಗೆ ಸಿದ್ಧವಾಗಿವೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ವಿಧಾನ ಪರಿಷತ್ಗೆ ತಿಳಿಸಿದರು.<br /> <br /> ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ವೈ.ಎ.ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘14 ಲಕ್ಷ ಅರ್ಜಿಗಳ ಪರಿಶೀಲನೆ ಮುಗಿದಿದ್ದು, ಪಡಿತರ ಚೀಟಿಗಳು ವಿತರಣೆಗೆ ಸಿದ್ಧವಾಗಿವೆ. ಉಳಿದ ಅರ್ಜಿಗಳನ್ನು ಪರಿಶೀಲಿಸಿ ಜನವರಿ ಅಂತ್ಯದೊಳಗೆ ವಿಲೇವಾರಿ ಮಾಡಲಾಗುವುದು’ ಎಂದರು.<br /> <br /> 96.87 ಲಕ್ಷ ಕುಟುಂಬಗಳು ಅನ್ನಭಾಗ್ಯ ಯೋಜನೆಯ ಲಾಭ ಪಡೆಯುತ್ತಿವೆ. ಡಿಸೆಂಬರ್ ತಿಂಗಳಿಗೆ ಈ ಯೋಜನೆಗೆ 2,81,049 ಟನ್ ಆಹಾರ ಧಾನ್ಯದ ಅಗತ್ಯವಿದೆ. ಕೇಂದ್ರ ಸರ್ಕಾರ 2,04,144 ಟನ್ ಆಹಾರ ಧಾನ್ಯ ಒದಗಿಸುತ್ತಿದೆ. ರಾಜ್ಯ ಸರ್ಕಾರ 76,905 ಟನ್ ಆಹಾರ ಧಾನ್ಯವನ್ನು ಹೊಂದಿಸಿಕೊಳ್ಳುತ್ತಿದೆ ಎಂದು ವಿವರ ನೀಡಿದರು.<br /> <br /> ಕೇಂದ್ರ ಸರ್ಕಾರದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಜಾರಿಯ ನಿಯಮಾವಳಿಗಳು ರಚನೆ ಆದ ಬಳಿಕ ರಾಜ್ಯ ಸರ್ಕಾರ ಆಹಾರ ಧಾನ್ಯಗಳ ಖರೀದಿಗೆ ವೆಚ್ಚ ಮಾಡುತ್ತಿರುವ ಮೊತ್ತದಲ್ಲಿ ಇಳಿಕೆ ಆಗಲಿದೆ. ಇದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಹೆಚ್ಚಿನ ಮೊತ್ತ ಇಳಿಕೆ ಆಗಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುವರ್ಣಸೌಧ (ಬೆಳಗಾವಿ): </strong>ರಾಜ್ಯದಲ್ಲಿ 32 ಲಕ್ಷ ಮಂದಿ ಹೊಸ ಪಡಿತರ ಚೀಟಿಗಳನ್ನು ಕೋರಿ ಅರ್ಜಿ ಸಲ್ಲಿಸಿದ್ದು, 14 ಲಕ್ಷ ಪಡಿತರ ಚೀಟಿಗಳು ವಿತರಣೆಗೆ ಸಿದ್ಧವಾಗಿವೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ವಿಧಾನ ಪರಿಷತ್ಗೆ ತಿಳಿಸಿದರು.<br /> <br /> ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ವೈ.ಎ.ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘14 ಲಕ್ಷ ಅರ್ಜಿಗಳ ಪರಿಶೀಲನೆ ಮುಗಿದಿದ್ದು, ಪಡಿತರ ಚೀಟಿಗಳು ವಿತರಣೆಗೆ ಸಿದ್ಧವಾಗಿವೆ. ಉಳಿದ ಅರ್ಜಿಗಳನ್ನು ಪರಿಶೀಲಿಸಿ ಜನವರಿ ಅಂತ್ಯದೊಳಗೆ ವಿಲೇವಾರಿ ಮಾಡಲಾಗುವುದು’ ಎಂದರು.<br /> <br /> 96.87 ಲಕ್ಷ ಕುಟುಂಬಗಳು ಅನ್ನಭಾಗ್ಯ ಯೋಜನೆಯ ಲಾಭ ಪಡೆಯುತ್ತಿವೆ. ಡಿಸೆಂಬರ್ ತಿಂಗಳಿಗೆ ಈ ಯೋಜನೆಗೆ 2,81,049 ಟನ್ ಆಹಾರ ಧಾನ್ಯದ ಅಗತ್ಯವಿದೆ. ಕೇಂದ್ರ ಸರ್ಕಾರ 2,04,144 ಟನ್ ಆಹಾರ ಧಾನ್ಯ ಒದಗಿಸುತ್ತಿದೆ. ರಾಜ್ಯ ಸರ್ಕಾರ 76,905 ಟನ್ ಆಹಾರ ಧಾನ್ಯವನ್ನು ಹೊಂದಿಸಿಕೊಳ್ಳುತ್ತಿದೆ ಎಂದು ವಿವರ ನೀಡಿದರು.<br /> <br /> ಕೇಂದ್ರ ಸರ್ಕಾರದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಜಾರಿಯ ನಿಯಮಾವಳಿಗಳು ರಚನೆ ಆದ ಬಳಿಕ ರಾಜ್ಯ ಸರ್ಕಾರ ಆಹಾರ ಧಾನ್ಯಗಳ ಖರೀದಿಗೆ ವೆಚ್ಚ ಮಾಡುತ್ತಿರುವ ಮೊತ್ತದಲ್ಲಿ ಇಳಿಕೆ ಆಗಲಿದೆ. ಇದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಹೆಚ್ಚಿನ ಮೊತ್ತ ಇಳಿಕೆ ಆಗಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>