<p><strong>ಯಲಹಂಕ:</strong> ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಸಂಸ್ಥಾಪನಾ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಇದೇ 15ರಂದು ವಿ.ವಿ ಆವರಣದಲ್ಲಿರುವ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆಯಲಿದೆ.<br /> <br /> ಈ ಕುರಿತು ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿ.ವಿ ಕುಲಪತಿ ಡಾ.ಕೆ. ನಾರಾಯಣಗೌಡ, `ಇದೇ 15ರಂದು ನಡೆಯಲಿರುವ ಸಂಸ್ಥಾಪನಾ ದಿನಾಚರಣೆ ಸಮಾರಂಭವನ್ನು ಸೆಲ್ಕೋ ಸೋಲಾರ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಹರೀಶ್ ಹಂದೆ ಉದ್ಘಾಟಿಸಲಿದ್ದಾರೆ. ಕೃಷಿ ಇಲಾಖೆ ಕಾರ್ಯದರ್ಶಿ ಡಾ.ಸಂದೀಪ್ ದವೆ ಇತರರು ಭಾಗವಹಿಸಲಿದ್ದಾರೆ~ ಎಂದರು.<br /> <br /> ಇದೇ ಸಂದರ್ಭದಲ್ಲಿ ಇಬ್ಬರಿಗೆ `ಅತ್ಯುತ್ತಮ ವಿಜ್ಞಾನಿ ಪ್ರಶಸ್ತಿ~ ಮತ್ತು ಒಬ್ಬರಿಗೆ `ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ~ ನೀಡಿ ಗೌರವಿಸಲಾಗುವುದು. ಹಾಗೆಯೇ ಮೂರು ಮಂದಿ ಪ್ರಾಧ್ಯಾಪಕರಿಗೆ `ಅತ್ಯುತ್ತಮ ಪ್ರಾಧ್ಯಾಪಕ ಪ್ರಶಸ್ತಿ~ ಪ್ರದಾನ ಮಾಡಲಾಗುವುದು. ಅಲ್ಲದೆ ಸಂಶೋಧನೆ ನಡೆಸಲು ಇತರೆ ಸಂಸ್ಥೆಗಳಿಂದ ಅನುದಾನ ಪಡೆಯಲು ಸಹಕರಿಸಿದ 30 ಮಂದಿ ವಿಜ್ಞಾನಿಗಳಿಗೆ ಪ್ರಶಸ್ತಿ ಮತ್ತು ಪ್ರಮಾಣಪತ್ರ ನೀಡಲಾಗುವುದು ಎಂದು ತಿಳಿಸಿದರು. ಪ್ರಸಕ್ತ ವರ್ಷದಲ್ಲಿ ಮಂಡ್ಯ ಹಾಗೂ ದಾವಣಗೆರೆ ಜಿಲ್ಲೆಯ ಕತ್ತಲಗೆರೆಯಲ್ಲಿ ಡಿಪ್ಲೊಮಾ ಕೋರ್ಸ್ಗಳನ್ನು ಆರಂಭಿಸಲಾಗಿದೆ ಎಂದರು.<br /> <br /> <strong>ರಾಷ್ಟ್ರೀಯ ಕೃಷಿಮೇಳ</strong><br /> ವಿಶ್ವವಿದ್ಯಾಲಯದ ವತಿಯಿಂದ ನವೆಂಬರ್ 16ರಿಂದ 20ರವರೆಗೆ ಐದು ದಿನ ಕಾಲ ರಾಷ್ಟ್ರೀಯ ಕೃಷಿ ಮೇಳವನ್ನು ಆಯೋಜಿಸಲಾಗುತ್ತಿದೆ. ಕೃಷಿ ವಿಶ್ವವಿದ್ಯಾಲಯ ಮತ್ತು ಇತರೆ ಸಂಸ್ಥೆಗಳು ಅಭಿವೃದ್ಧಿಪಡಿಸಿರುವ ತಂತ್ರಜ್ಞಾನವನ್ನು ರಾಜ್ಯದ ರೈತರಿಗೆ ಮಾತ್ರವಲ್ಲದೇ ಇತರೆ ರಾಜ್ಯಗಳ ರೈತರಿಗೂ ತಲುಪಿಸುವುದು. <br /> ಇತರೆ ವಿಶ್ವವಿದ್ಯಾಲಯಗಳು ಹಾಗೂ ಸಂಸ್ಥೆಗಳು ಅಭಿವೃದ್ಧಿಪಡಿಸಿರುವ ತಂತ್ರಜ್ಞಾನವನ್ನು ರಾಜ್ಯದ ರೈತರಿಗೆ ಪರಿಚಯಿಸಲಾಗುವುದು ಈ ಮೇಳದ ಉದ್ದೇಶ~ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಸಂಸ್ಥಾಪನಾ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಇದೇ 15ರಂದು ವಿ.ವಿ ಆವರಣದಲ್ಲಿರುವ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆಯಲಿದೆ.<br /> <br /> ಈ ಕುರಿತು ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿ.ವಿ ಕುಲಪತಿ ಡಾ.ಕೆ. ನಾರಾಯಣಗೌಡ, `ಇದೇ 15ರಂದು ನಡೆಯಲಿರುವ ಸಂಸ್ಥಾಪನಾ ದಿನಾಚರಣೆ ಸಮಾರಂಭವನ್ನು ಸೆಲ್ಕೋ ಸೋಲಾರ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಹರೀಶ್ ಹಂದೆ ಉದ್ಘಾಟಿಸಲಿದ್ದಾರೆ. ಕೃಷಿ ಇಲಾಖೆ ಕಾರ್ಯದರ್ಶಿ ಡಾ.ಸಂದೀಪ್ ದವೆ ಇತರರು ಭಾಗವಹಿಸಲಿದ್ದಾರೆ~ ಎಂದರು.<br /> <br /> ಇದೇ ಸಂದರ್ಭದಲ್ಲಿ ಇಬ್ಬರಿಗೆ `ಅತ್ಯುತ್ತಮ ವಿಜ್ಞಾನಿ ಪ್ರಶಸ್ತಿ~ ಮತ್ತು ಒಬ್ಬರಿಗೆ `ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ~ ನೀಡಿ ಗೌರವಿಸಲಾಗುವುದು. ಹಾಗೆಯೇ ಮೂರು ಮಂದಿ ಪ್ರಾಧ್ಯಾಪಕರಿಗೆ `ಅತ್ಯುತ್ತಮ ಪ್ರಾಧ್ಯಾಪಕ ಪ್ರಶಸ್ತಿ~ ಪ್ರದಾನ ಮಾಡಲಾಗುವುದು. ಅಲ್ಲದೆ ಸಂಶೋಧನೆ ನಡೆಸಲು ಇತರೆ ಸಂಸ್ಥೆಗಳಿಂದ ಅನುದಾನ ಪಡೆಯಲು ಸಹಕರಿಸಿದ 30 ಮಂದಿ ವಿಜ್ಞಾನಿಗಳಿಗೆ ಪ್ರಶಸ್ತಿ ಮತ್ತು ಪ್ರಮಾಣಪತ್ರ ನೀಡಲಾಗುವುದು ಎಂದು ತಿಳಿಸಿದರು. ಪ್ರಸಕ್ತ ವರ್ಷದಲ್ಲಿ ಮಂಡ್ಯ ಹಾಗೂ ದಾವಣಗೆರೆ ಜಿಲ್ಲೆಯ ಕತ್ತಲಗೆರೆಯಲ್ಲಿ ಡಿಪ್ಲೊಮಾ ಕೋರ್ಸ್ಗಳನ್ನು ಆರಂಭಿಸಲಾಗಿದೆ ಎಂದರು.<br /> <br /> <strong>ರಾಷ್ಟ್ರೀಯ ಕೃಷಿಮೇಳ</strong><br /> ವಿಶ್ವವಿದ್ಯಾಲಯದ ವತಿಯಿಂದ ನವೆಂಬರ್ 16ರಿಂದ 20ರವರೆಗೆ ಐದು ದಿನ ಕಾಲ ರಾಷ್ಟ್ರೀಯ ಕೃಷಿ ಮೇಳವನ್ನು ಆಯೋಜಿಸಲಾಗುತ್ತಿದೆ. ಕೃಷಿ ವಿಶ್ವವಿದ್ಯಾಲಯ ಮತ್ತು ಇತರೆ ಸಂಸ್ಥೆಗಳು ಅಭಿವೃದ್ಧಿಪಡಿಸಿರುವ ತಂತ್ರಜ್ಞಾನವನ್ನು ರಾಜ್ಯದ ರೈತರಿಗೆ ಮಾತ್ರವಲ್ಲದೇ ಇತರೆ ರಾಜ್ಯಗಳ ರೈತರಿಗೂ ತಲುಪಿಸುವುದು. <br /> ಇತರೆ ವಿಶ್ವವಿದ್ಯಾಲಯಗಳು ಹಾಗೂ ಸಂಸ್ಥೆಗಳು ಅಭಿವೃದ್ಧಿಪಡಿಸಿರುವ ತಂತ್ರಜ್ಞಾನವನ್ನು ರಾಜ್ಯದ ರೈತರಿಗೆ ಪರಿಚಯಿಸಲಾಗುವುದು ಈ ಮೇಳದ ಉದ್ದೇಶ~ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>