<p><strong>ಹಾಸನ:</strong> ‘ದಲಿತ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ವತಿಯಿಂದ ಡಿ. 15ರಂದು ನಗರದ ಅಂಬೇಡ್ಕರ್ ಭವನದಲ್ಲಿ ಇದೇ ಮೊದಲ ಬಾರಿ ಜಿಲ್ಲಾಮಟ್ಟದ ದಲಿತ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ’ ಎಂದು ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ಹೆತ್ತೂರು ತಿಳಿಸಿದರು.<br /> <br /> ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಸಮ್ಮೇಳನದ ಬಗ್ಗೆ ಮಾಹಿತಿ ನೀಡಿದರು.<br /> <br /> ‘ಹಿರಿಯ ಸಾಹಿತಿ ದುದ್ದ ಶ್ರೀನಿವಾಸ್ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, 15ರಂದು ಬೆಳಿಗ್ಗೆ ನಗರಸಭೆ ಅಧ್ಯಕ್ಷೆ ಶ್ರೀವಿದ್ಯಾ ಧ್ವಜಾರೋಹಣ ನೆರವೇರಿಸುವ ಮೂಲಕ ಸಮ್ಮೇಳನಕ್ಕೆ ಚಾಲನೆ ನೀಡುವರು.<br /> <br /> ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಪ್ರಾದೇಶಿಕ ಸಾರಿಗೆ ಆಯುಕ್ತರ ಕಚೇರಿಯ ಅಧಿಕಾರಿ ಮುಗವಳ್ಳಿ ಕೇಶವ ಧರಣಿ ಚಾಲನೆ ನೀಡಲಿದ್ದು, ಸಮ್ಮೇಳನವನ್ನು ಸಾಹಿತಿ ಅರವಿಂದ ಮಾಲಗತ್ತಿ ಉದ್ಘಾಟಿಸುವರು.<br /> <br /> ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ಪುಸ್ತಕ ಮಳಿಗೆ ಉದ್ಘಾಟನೆ ಮಾಡಲಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣವರ ಅಂಬೇಡ್ಕರ್ ಭಾವಚಿತ್ರ ಅನಾವರಣ ಮಾಡುವರು ಎಂದರು.<br /> <br /> ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ದಲಿತ ಸಾಹಿತ್ಯ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ ಅರ್ಜುನ ಗೊಳಸಂಗಿ, ಮಾಜಿ ಪ್ರಧಾನಿ ಹಾಗೂ ಸಂಸದ ಎಚ್.ಡಿ. ದೇವೇಗೌಡ, ಶಾಸಕ ಎಚ್.ಎಸ್. ಪ್ರಕಾಶ್ ಪಾಲ್ಗೊಳ್ಳಲಿದ್ದಾರೆ.<br /> <br /> ಮೂರು ಗೋಷ್ಠಿಗಳು ನಡೆಯುವವು. ‘ಬೂಸ ಸಾಹಿತ್ಯಕ್ಕೆ 40 ವರ್ಷ ಒಂದು ಚಿಂತನೆ’ ಕುರಿತು ಮೊದಲನೆ ಗೋಷ್ಠಿ ನಡೆಯಲಿದ್ದು, ಕೆ.ಟಿ. ಶಿವಪ್ರಸಾದ್, ಕೃಷ್ಣದಾಸ್, ಎಂ. ವೆಂಕಟಸ್ವಾಮಿ ಗೋಷ್ಠಿಯಲ್ಲಿ ಭಾಗವಹಿಸುವರು.<br /> <br /> ಎರಡನೇ ಗೋಷ್ಠಿಯಲ್ಲಿ ‘ದಲಿತ ಚಳವಳಿ ಮತ್ತು ಮಹಿಳೆ’ ವಿಷಯದ ಬಗ್ಗೆ ಸಾಹಿತಿಗಳಾದ ಬಾನು ಮುಷ್ತಾಕ್, ಸರಸ್ವತಿ, ಸಮತಾ, ದೇಶಮಾನೆ, ಅನಸೂಯ ಭಾಗವಹಿಸುವರು. ಡಿ.ಎಸ್.ಎಸ್. ಮಹಿಳಾ ಘಟಕದ ಮೊದಲ ಅಧ್ಯಕ್ಷೆ ಗಂಗಮ್ಮ ಅಧ್ಯಕ್ಷತೆ ವಹಿಸುವರು.<br /> <br /> ಕೊನೆಯಲ್ಲಿ ನಡೆಯುವ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ಎಂ.ಎಸ್. ಶೇಖರ್ ವಹಿಸುವರು. ಹರೀಶ್ ಕಟ್ಟೆ ಬೆಳಗಲಿ, ಸಬ್ಬು ಹೊಲೆಯಾರ್, ಆನಂದ್, ಐಚನಹಳ್ಳಿ ಕೃಷ್ಣಪ್ಪ, ತಾರಾ ಚಂದ್ರ ಹಾಗೂ ಇತರರು ಪಾಲ್ಗೊಳ್ಳುವರು.<br /> <br /> ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ದಸಂಸದ ಮಾವಳ್ಳಿ ಶಂಕರ್ ಸಮಾರೋಪ ಭಾಷಣ ಮಾಡುವರು. ಮುಖ್ಯ ಅತಿಥಿಗಳಾಗಿ ಎಲ್. ಹನುಮಂತಯ್ಯ, ಆರ್.ಪಿ. ವೆಂಕಟೇಶಮೂರ್ತಿ, ನರೇಂದ್ರ ಪಾಲ್ಗೊಳ್ಳುವರು.<br /> <br /> ಸಮ್ಮೇಳನದಲ್ಲಿ ಹಿರಿಯ ದಲಿತ ಮುಖಂಡ ನಾರಾಯಣ್ ದಾಸ್ ಅವರಿಗೆ ‘ದಲಿತ ಚೇತನ’ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.<br /> <br /> ಪರಿಷತ್ನ ಉಪಾಧ್ಯಕ್ಷ ಸತೀಶ್, ಕಾರ್ಯದರ್ಶಿ ವೆಂಕಟೇಶ್, ಜಿಲ್ಲಾ ಸಂಚಾಲಕಿ ಸುವರ್ಣ, ಪ್ರಧಾನ ಕಾರ್ಯದರ್ಶಿ ಹುಳುವಾರೆ ಪ್ರಕಾಶ್, ಹಿರಿಯ ದಲಿತ ಮುಖಂಡ ನಾರಾಯಣ್ ದಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ‘ದಲಿತ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ವತಿಯಿಂದ ಡಿ. 15ರಂದು ನಗರದ ಅಂಬೇಡ್ಕರ್ ಭವನದಲ್ಲಿ ಇದೇ ಮೊದಲ ಬಾರಿ ಜಿಲ್ಲಾಮಟ್ಟದ ದಲಿತ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ’ ಎಂದು ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ಹೆತ್ತೂರು ತಿಳಿಸಿದರು.<br /> <br /> ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಸಮ್ಮೇಳನದ ಬಗ್ಗೆ ಮಾಹಿತಿ ನೀಡಿದರು.<br /> <br /> ‘ಹಿರಿಯ ಸಾಹಿತಿ ದುದ್ದ ಶ್ರೀನಿವಾಸ್ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, 15ರಂದು ಬೆಳಿಗ್ಗೆ ನಗರಸಭೆ ಅಧ್ಯಕ್ಷೆ ಶ್ರೀವಿದ್ಯಾ ಧ್ವಜಾರೋಹಣ ನೆರವೇರಿಸುವ ಮೂಲಕ ಸಮ್ಮೇಳನಕ್ಕೆ ಚಾಲನೆ ನೀಡುವರು.<br /> <br /> ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಪ್ರಾದೇಶಿಕ ಸಾರಿಗೆ ಆಯುಕ್ತರ ಕಚೇರಿಯ ಅಧಿಕಾರಿ ಮುಗವಳ್ಳಿ ಕೇಶವ ಧರಣಿ ಚಾಲನೆ ನೀಡಲಿದ್ದು, ಸಮ್ಮೇಳನವನ್ನು ಸಾಹಿತಿ ಅರವಿಂದ ಮಾಲಗತ್ತಿ ಉದ್ಘಾಟಿಸುವರು.<br /> <br /> ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ಪುಸ್ತಕ ಮಳಿಗೆ ಉದ್ಘಾಟನೆ ಮಾಡಲಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣವರ ಅಂಬೇಡ್ಕರ್ ಭಾವಚಿತ್ರ ಅನಾವರಣ ಮಾಡುವರು ಎಂದರು.<br /> <br /> ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ದಲಿತ ಸಾಹಿತ್ಯ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ ಅರ್ಜುನ ಗೊಳಸಂಗಿ, ಮಾಜಿ ಪ್ರಧಾನಿ ಹಾಗೂ ಸಂಸದ ಎಚ್.ಡಿ. ದೇವೇಗೌಡ, ಶಾಸಕ ಎಚ್.ಎಸ್. ಪ್ರಕಾಶ್ ಪಾಲ್ಗೊಳ್ಳಲಿದ್ದಾರೆ.<br /> <br /> ಮೂರು ಗೋಷ್ಠಿಗಳು ನಡೆಯುವವು. ‘ಬೂಸ ಸಾಹಿತ್ಯಕ್ಕೆ 40 ವರ್ಷ ಒಂದು ಚಿಂತನೆ’ ಕುರಿತು ಮೊದಲನೆ ಗೋಷ್ಠಿ ನಡೆಯಲಿದ್ದು, ಕೆ.ಟಿ. ಶಿವಪ್ರಸಾದ್, ಕೃಷ್ಣದಾಸ್, ಎಂ. ವೆಂಕಟಸ್ವಾಮಿ ಗೋಷ್ಠಿಯಲ್ಲಿ ಭಾಗವಹಿಸುವರು.<br /> <br /> ಎರಡನೇ ಗೋಷ್ಠಿಯಲ್ಲಿ ‘ದಲಿತ ಚಳವಳಿ ಮತ್ತು ಮಹಿಳೆ’ ವಿಷಯದ ಬಗ್ಗೆ ಸಾಹಿತಿಗಳಾದ ಬಾನು ಮುಷ್ತಾಕ್, ಸರಸ್ವತಿ, ಸಮತಾ, ದೇಶಮಾನೆ, ಅನಸೂಯ ಭಾಗವಹಿಸುವರು. ಡಿ.ಎಸ್.ಎಸ್. ಮಹಿಳಾ ಘಟಕದ ಮೊದಲ ಅಧ್ಯಕ್ಷೆ ಗಂಗಮ್ಮ ಅಧ್ಯಕ್ಷತೆ ವಹಿಸುವರು.<br /> <br /> ಕೊನೆಯಲ್ಲಿ ನಡೆಯುವ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ಎಂ.ಎಸ್. ಶೇಖರ್ ವಹಿಸುವರು. ಹರೀಶ್ ಕಟ್ಟೆ ಬೆಳಗಲಿ, ಸಬ್ಬು ಹೊಲೆಯಾರ್, ಆನಂದ್, ಐಚನಹಳ್ಳಿ ಕೃಷ್ಣಪ್ಪ, ತಾರಾ ಚಂದ್ರ ಹಾಗೂ ಇತರರು ಪಾಲ್ಗೊಳ್ಳುವರು.<br /> <br /> ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ದಸಂಸದ ಮಾವಳ್ಳಿ ಶಂಕರ್ ಸಮಾರೋಪ ಭಾಷಣ ಮಾಡುವರು. ಮುಖ್ಯ ಅತಿಥಿಗಳಾಗಿ ಎಲ್. ಹನುಮಂತಯ್ಯ, ಆರ್.ಪಿ. ವೆಂಕಟೇಶಮೂರ್ತಿ, ನರೇಂದ್ರ ಪಾಲ್ಗೊಳ್ಳುವರು.<br /> <br /> ಸಮ್ಮೇಳನದಲ್ಲಿ ಹಿರಿಯ ದಲಿತ ಮುಖಂಡ ನಾರಾಯಣ್ ದಾಸ್ ಅವರಿಗೆ ‘ದಲಿತ ಚೇತನ’ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.<br /> <br /> ಪರಿಷತ್ನ ಉಪಾಧ್ಯಕ್ಷ ಸತೀಶ್, ಕಾರ್ಯದರ್ಶಿ ವೆಂಕಟೇಶ್, ಜಿಲ್ಲಾ ಸಂಚಾಲಕಿ ಸುವರ್ಣ, ಪ್ರಧಾನ ಕಾರ್ಯದರ್ಶಿ ಹುಳುವಾರೆ ಪ್ರಕಾಶ್, ಹಿರಿಯ ದಲಿತ ಮುಖಂಡ ನಾರಾಯಣ್ ದಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>