<p>ಬೆಂಗಳೂರು: `ಮಕ್ಕಳಲ್ಲಿರುವ ಅಪೌಷ್ಟಿಕತೆ ತಡೆಗಟ್ಟಲು ಪಾಲಿಕೆ ವ್ಯಾಪ್ತಿಯ ಆರು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜುಲೈ 15ರಿಂದ ಹಮ್ಮಿಕೊಳ್ಳಲಾಗುವುದು~ ಎಂದು ಪಾಲಿಕೆ ಆಯುಕ್ತ ಎಂ.ಕೆ. ಶಂಕರಲಿಂಗೇಗೌಡ ತಿಳಿಸಿದರು.<br /> <br /> ಆರೋಗ್ಯ ಇಲಾಖೆಯ ಅಧಿಕಾರಿಗಳು, ವೈದ್ಯಕೀಯ ಹಾಗೂ ನರ್ಸಿಂಗ್ ಕಾಲೇಜುಗಳ ಮುಖ್ಯಸ್ಥರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಜೊತೆಗೆ ಇತ್ತೀಚೆಗೆ ಸಭೆ ನಡೆಸಿದ ಅವರು, `ಈ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಯಶಸ್ವಿಗೊಳಿಸಲು ವಲಯ ಮಟ್ಟದಲ್ಲಿ ವೈದ್ಯಾಧಿಕಾರಿಗಳು, ಶುಶ್ರೂಷಕಿಯರು, ಸ್ವಯಂಸೇವಾ ಸಂಘದ ಸದಸ್ಯರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯಿಂದ ಮಕ್ಕಳ ತಪಾಸಣೆಗಾಗಿ ಅವಶ್ಯಕವಾದ ವೈದ್ಯಕೀಯ ಉಪಕರಣಗಳ ಏರ್ಪಾಡು ಹಾಗೂ ಶಿಬಿರಕ್ಕಾಗಿ ಸೂಕ್ತ ಸ್ಥಳಗಳನ್ನು ಗುರುತಿಸಲಾಗಿದೆ. ಈ ಶಿಬಿರದಲ್ಲಿ ಮಕ್ಕಳ ತಜ್ಞರಿಂದ ತಪಾಸಣೆ ನಡೆಸಿ, ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುವುದು~ ಎಂದರು.<br /> <br /> `ಜುಲೈ 8ರಿಂದ 14ರ ವರೆಗೆ ಪಾಲಿಕೆಯ ಆರೋಗ್ಯ ವಿಭಾಗದ ವೈದ್ಯರು, ಶುಶ್ರೂಷಕಿಯರು, ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮಕ್ಕಳ ತಪಾಸಣೆ ನಡೆಸಿ, ಅಪೌಷ್ಟಿಕತೆಯಿಂದ ನರಳುತ್ತಿರುವ ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಆರೋಗ್ಯ ಶಿಬಿರಗಳಿಗೆ ಕರೆತರಬೇಕು ಎಂದು ಪೋಷಕರನ್ನು ವಿನಂತಿಸುವರು. ಈ ಸಂದರ್ಭದಲ್ಲಿ ಸಾರ್ವಜನಿಕರು ಪಾಲಿಕೆಯ ಸಿಬ್ಬಂದಿಯ ಜೊತೆಗೆ ಸಹಕರಿಸಬೇಕು~ ಎಂದರು. <br /> <br /> `ಪಾಲಿಕೆಯ ಎಲ್ಲಾ ವಾರ್ಡ್ಗಳ ರೆಫರಲ್ ಆಸ್ಪತ್ರೆ, ಹೆರಿಗೆ ಆಸ್ಪತ್ರೆ, ಆರೋಗ್ಯ ಕೇಂದ್ರ, ಔಷಧಾಲಯ, ಇ.ಎಸ್.ಐ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳು, ರೈಲ್ವೆ ಆಸ್ಪತ್ರೆಗಳು ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರಗಳಲ್ಲಿ ಮಕ್ಕಳ ತಪಾಸಣೆಗಾಗಿ ಆರೋಗ್ಯ ಶಿಬಿರಗಳನ್ನು ಏರ್ಪಡಿಸಲಾಗುವುದು~ ಎಂದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ಮಕ್ಕಳಲ್ಲಿರುವ ಅಪೌಷ್ಟಿಕತೆ ತಡೆಗಟ್ಟಲು ಪಾಲಿಕೆ ವ್ಯಾಪ್ತಿಯ ಆರು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜುಲೈ 15ರಿಂದ ಹಮ್ಮಿಕೊಳ್ಳಲಾಗುವುದು~ ಎಂದು ಪಾಲಿಕೆ ಆಯುಕ್ತ ಎಂ.ಕೆ. ಶಂಕರಲಿಂಗೇಗೌಡ ತಿಳಿಸಿದರು.<br /> <br /> ಆರೋಗ್ಯ ಇಲಾಖೆಯ ಅಧಿಕಾರಿಗಳು, ವೈದ್ಯಕೀಯ ಹಾಗೂ ನರ್ಸಿಂಗ್ ಕಾಲೇಜುಗಳ ಮುಖ್ಯಸ್ಥರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಜೊತೆಗೆ ಇತ್ತೀಚೆಗೆ ಸಭೆ ನಡೆಸಿದ ಅವರು, `ಈ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಯಶಸ್ವಿಗೊಳಿಸಲು ವಲಯ ಮಟ್ಟದಲ್ಲಿ ವೈದ್ಯಾಧಿಕಾರಿಗಳು, ಶುಶ್ರೂಷಕಿಯರು, ಸ್ವಯಂಸೇವಾ ಸಂಘದ ಸದಸ್ಯರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯಿಂದ ಮಕ್ಕಳ ತಪಾಸಣೆಗಾಗಿ ಅವಶ್ಯಕವಾದ ವೈದ್ಯಕೀಯ ಉಪಕರಣಗಳ ಏರ್ಪಾಡು ಹಾಗೂ ಶಿಬಿರಕ್ಕಾಗಿ ಸೂಕ್ತ ಸ್ಥಳಗಳನ್ನು ಗುರುತಿಸಲಾಗಿದೆ. ಈ ಶಿಬಿರದಲ್ಲಿ ಮಕ್ಕಳ ತಜ್ಞರಿಂದ ತಪಾಸಣೆ ನಡೆಸಿ, ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುವುದು~ ಎಂದರು.<br /> <br /> `ಜುಲೈ 8ರಿಂದ 14ರ ವರೆಗೆ ಪಾಲಿಕೆಯ ಆರೋಗ್ಯ ವಿಭಾಗದ ವೈದ್ಯರು, ಶುಶ್ರೂಷಕಿಯರು, ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮಕ್ಕಳ ತಪಾಸಣೆ ನಡೆಸಿ, ಅಪೌಷ್ಟಿಕತೆಯಿಂದ ನರಳುತ್ತಿರುವ ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಆರೋಗ್ಯ ಶಿಬಿರಗಳಿಗೆ ಕರೆತರಬೇಕು ಎಂದು ಪೋಷಕರನ್ನು ವಿನಂತಿಸುವರು. ಈ ಸಂದರ್ಭದಲ್ಲಿ ಸಾರ್ವಜನಿಕರು ಪಾಲಿಕೆಯ ಸಿಬ್ಬಂದಿಯ ಜೊತೆಗೆ ಸಹಕರಿಸಬೇಕು~ ಎಂದರು. <br /> <br /> `ಪಾಲಿಕೆಯ ಎಲ್ಲಾ ವಾರ್ಡ್ಗಳ ರೆಫರಲ್ ಆಸ್ಪತ್ರೆ, ಹೆರಿಗೆ ಆಸ್ಪತ್ರೆ, ಆರೋಗ್ಯ ಕೇಂದ್ರ, ಔಷಧಾಲಯ, ಇ.ಎಸ್.ಐ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳು, ರೈಲ್ವೆ ಆಸ್ಪತ್ರೆಗಳು ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರಗಳಲ್ಲಿ ಮಕ್ಕಳ ತಪಾಸಣೆಗಾಗಿ ಆರೋಗ್ಯ ಶಿಬಿರಗಳನ್ನು ಏರ್ಪಡಿಸಲಾಗುವುದು~ ಎಂದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>