<p><strong>ವಿಜಯಪುರ:</strong> ಪಟ್ಟಣದ ದೇವನಹಳ್ಳಿ-ಸೂಲಿಬೆಲೆ ರಸ್ತೆಯಲ್ಲಿರುವ ಕೆ.ಆರ್.ಎಂ. ಕಾಂಪ್ಲೆಕ್ಸ್ನಲ್ಲಿ ನಡೆಯುತ್ತಿದ್ದ ಜೂಜು ಅಡ್ಡೆಯ ಮೇಲೆ ಪೊಲೀಸರು ಮಂಗಳವಾರ ಹಠಾತ್ ದಾಳಿ ನಡೆಸಿ 54 ಜನರನ್ನು ಬಂಧಿಸಿದ್ದು ಅವರಿಂದ ಸುಮಾರು 16 ಲಕ್ಷ ರೂಪಾಯಿಗಳಿಗೂ ಹೆಚ್ಚು ನಗದು ವಶಪಡಿಸಿಕೊಂಡಿದ್ದಾರೆ<br /> <br /> ದಾಳಿ ವೇಳೆ ಜೂಜಾಟದಲ್ಲಿ ತೊಡಗಿದ್ದ 54 ಜನರನ್ನು ಬಂಧಿಸಲಾಗಿದ್ದು ಅವರ ಬಳಿಯಿದ್ದ 16 ಲಕ್ಷದ 7 ಸಾವಿರ ರೂಪಾಯಿಗಳ ಬೃಹತ್ ನಗದು ಹಣ ಮತ್ತು 40 ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. <br /> ಬೆಂಗಳೂರು ಗ್ರಾಮಾಂತರ ಎಸ್.ಪಿ. ಪ್ರಕಾಶ್ ನೇತೃತ್ವದಲ್ಲಿ ಮಂಗಳವಾರ ಮಧ್ಯಾಹ್ನ ಈ ಕಾರ್ಯಾಚರಣೆ ನಡೆಸಲಾಯಿತು. <br /> <br /> ಬಂಧಿತರೆಲ್ಲರೂ ಹೆಚ್ಚಿನವರು ಆಂಧ್ರಪ್ರದೇಶ, ಹುಬ್ಬಳಿ, ಧಾರವಾಡ, ಬಳ್ಳಾರಿ, ಬಿಜಾಪುರ, ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರದ ಸುತ್ತಮುತ್ತಲಿನವರು ಎನ್ನಲಾಗಿದೆ.<br /> <br /> ಆಂಧ್ರಪ್ರದೇಶದ ಪುಲಿವೆಂದಲ ನಿವಾಸಿಗಳಾದ ನರಸಾ ರೆಡ್ಡಿ ಮತ್ತು ಶ್ರೀನಿವಾಸ್ ಮತ್ತು ದೇವನಹಳ್ಳಿ ನವೀನ್ ಎಂಬುವರು ಕಳೆದ ಒಂದು ತಿಂಗಳಿನಿಂದಲೂ ಇಲ್ಲಿ ಜೂಜು ನಡೆಸುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. <br /> <br /> ಚನ್ನರಾಯಪಟ್ಟಣ ಹೋಬಳಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ ಎಸ್.ಪಿ. ಪ್ರಕಾಶ್ ಸುದ್ದಿಗಾರರೊಂದಿಗೆ ಮಾತನಾಡಿ, `ಖಚಿತ ಮಾಹಿತಿಯ ಮೇರೆಗೆ ಈ ದಾಳಿ ನಡೆಸಲಾಗಿದೆ. <br /> <br /> ಇಲ್ಲಿ ಒಂದು ತಿಂಗಳಿನಿಂದ ಅಂದರ್ ಬಾಹರ್ ಇಸ್ಪೀಟ್ ಆಟದ ಜೂಜು ನಡೆಯುತ್ತಿತ್ತು. ಇಬ್ಬರು ಡಿವೈಎಸ್ಪಿ, ನಾಲ್ವರು ಕ್ರೈಂ ಇನ್ಸ್ಪೆಕ್ಟರ್ಗಳು , 40 ಕಾನ್ಸ್ಟೇಬಲ್ತಂಡವು ಈ ಜೂಜು ಅಡ್ಡೆ ಮೇಲೆ ದಾಳಿ ನಡೆಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಪಟ್ಟಣದ ದೇವನಹಳ್ಳಿ-ಸೂಲಿಬೆಲೆ ರಸ್ತೆಯಲ್ಲಿರುವ ಕೆ.ಆರ್.ಎಂ. ಕಾಂಪ್ಲೆಕ್ಸ್ನಲ್ಲಿ ನಡೆಯುತ್ತಿದ್ದ ಜೂಜು ಅಡ್ಡೆಯ ಮೇಲೆ ಪೊಲೀಸರು ಮಂಗಳವಾರ ಹಠಾತ್ ದಾಳಿ ನಡೆಸಿ 54 ಜನರನ್ನು ಬಂಧಿಸಿದ್ದು ಅವರಿಂದ ಸುಮಾರು 16 ಲಕ್ಷ ರೂಪಾಯಿಗಳಿಗೂ ಹೆಚ್ಚು ನಗದು ವಶಪಡಿಸಿಕೊಂಡಿದ್ದಾರೆ<br /> <br /> ದಾಳಿ ವೇಳೆ ಜೂಜಾಟದಲ್ಲಿ ತೊಡಗಿದ್ದ 54 ಜನರನ್ನು ಬಂಧಿಸಲಾಗಿದ್ದು ಅವರ ಬಳಿಯಿದ್ದ 16 ಲಕ್ಷದ 7 ಸಾವಿರ ರೂಪಾಯಿಗಳ ಬೃಹತ್ ನಗದು ಹಣ ಮತ್ತು 40 ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. <br /> ಬೆಂಗಳೂರು ಗ್ರಾಮಾಂತರ ಎಸ್.ಪಿ. ಪ್ರಕಾಶ್ ನೇತೃತ್ವದಲ್ಲಿ ಮಂಗಳವಾರ ಮಧ್ಯಾಹ್ನ ಈ ಕಾರ್ಯಾಚರಣೆ ನಡೆಸಲಾಯಿತು. <br /> <br /> ಬಂಧಿತರೆಲ್ಲರೂ ಹೆಚ್ಚಿನವರು ಆಂಧ್ರಪ್ರದೇಶ, ಹುಬ್ಬಳಿ, ಧಾರವಾಡ, ಬಳ್ಳಾರಿ, ಬಿಜಾಪುರ, ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರದ ಸುತ್ತಮುತ್ತಲಿನವರು ಎನ್ನಲಾಗಿದೆ.<br /> <br /> ಆಂಧ್ರಪ್ರದೇಶದ ಪುಲಿವೆಂದಲ ನಿವಾಸಿಗಳಾದ ನರಸಾ ರೆಡ್ಡಿ ಮತ್ತು ಶ್ರೀನಿವಾಸ್ ಮತ್ತು ದೇವನಹಳ್ಳಿ ನವೀನ್ ಎಂಬುವರು ಕಳೆದ ಒಂದು ತಿಂಗಳಿನಿಂದಲೂ ಇಲ್ಲಿ ಜೂಜು ನಡೆಸುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. <br /> <br /> ಚನ್ನರಾಯಪಟ್ಟಣ ಹೋಬಳಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ ಎಸ್.ಪಿ. ಪ್ರಕಾಶ್ ಸುದ್ದಿಗಾರರೊಂದಿಗೆ ಮಾತನಾಡಿ, `ಖಚಿತ ಮಾಹಿತಿಯ ಮೇರೆಗೆ ಈ ದಾಳಿ ನಡೆಸಲಾಗಿದೆ. <br /> <br /> ಇಲ್ಲಿ ಒಂದು ತಿಂಗಳಿನಿಂದ ಅಂದರ್ ಬಾಹರ್ ಇಸ್ಪೀಟ್ ಆಟದ ಜೂಜು ನಡೆಯುತ್ತಿತ್ತು. ಇಬ್ಬರು ಡಿವೈಎಸ್ಪಿ, ನಾಲ್ವರು ಕ್ರೈಂ ಇನ್ಸ್ಪೆಕ್ಟರ್ಗಳು , 40 ಕಾನ್ಸ್ಟೇಬಲ್ತಂಡವು ಈ ಜೂಜು ಅಡ್ಡೆ ಮೇಲೆ ದಾಳಿ ನಡೆಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>