<p><strong>ಬೆಂಗಳೂರು:</strong> ವಿವಿಧ ಅಪರಾಧ ಪ್ರಕರಣಗಳನ್ನು ಭೇದಿಸಿರುವ ನಗರದ ಕೇಂದ್ರ ವಿಭಾಗದ ಪೊಲೀಸರು 81 ಆರೋಪಿಗಳನ್ನು ಬಂಧಿಸಿ ಚಿನ್ನಾಭರಣ ಮತ್ತು ಬೈಕ್ಗಳು ಸೇರಿದಂತೆ ಒಟ್ಟು 1.65 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.<br /> <br /> ‘ಕಳವು, ದರೋಡೆ ಪ್ರಕರಣಗಳನ್ನು ಪತ್ತೆ ಮಾಡಿರುವ ಕೇಂದ್ರ ವಿಭಾಗದ ಸಿಬ್ಬಂದಿ ಎರಡೂವರೆ ಕೆ.ಜಿ ಚಿನ್ನಾಭರಣ, 13 ಲಕ್ಷ ನಗದು, 108 ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ’ ಎಂದು ನಗರ ಪೊಲೀಸ್ ಕಮಿಷನರ್ ಶಂಕರ್ ಬಿದರಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> ‘ಕೇಂದ್ರ ವಿಭಾಗದ ಪೊಲೀಸರು ಪ್ರತಿಭಟನೆ, ಕಾನೂನು ಸುವ್ಯವಸ್ಥೆ, ಅತಿ ಗಣ್ಯ ವ್ಯಕ್ತಿಗಳ ಆಗಮನ ಮತ್ತು ನಿರ್ಗಮನದ ಸಂದರ್ಭದಲ್ಲಿ ಭದ್ರತಾ ಕಾರ್ಯ ನಿರ್ವಹಿಸುವುದರ ಜತೆಗೆ ಅಪರಾಧ ಪ್ರಕರಣಗಳನ್ನು ಪತ್ತೆ ಮಾಡುವಲ್ಲೂ ನಿರೀಕ್ಷೆಗೂ ಮೀರಿ ಕೆಲಸ ಮಾಡಿದ್ದಾರೆ. <br /> <br /> ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿರುವ ಈ ಸಿಬ್ಬಂದಿ ತಂಡಕ್ಕೆ ಎರಡು ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುತ್ತದೆ’ ಎಂದು ಬಿದರಿ ಹೇಳಿದರು.<br /> <br /> ಕಳವು ಪ್ರಕರಣದ ಆರೋಪಿಗಳಾದ ಮಹೇಶ, ಮುನಿರಾಜ, ಮಂಜುನಾಥ ಹಾಗೂ ಹರ್ಷದ್ ಪಾಷಾ ಎಂಬುವರನ್ನು ಬಂಧಿಸಿರುವ ಕಬ್ಬನ್ಪಾರ್ಕ್ ಪೊಲೀಸರು 52.28 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.<br /> <br /> ಬೀಗ ಹಾಕಿದ ಮನೆಗಳಿಗೆ ನುಗ್ಗಿ ಕಳವು ಮಾಡುತ್ತಿದ್ದ ಆರೋಪದ ಮೇಲೆ ಭಾರತಿನಗರದ ವೇಲು (26) ಎಂಬಾತನನ್ನು ಬಂಧಿಸಿರುವ ಅಶೋಕನಗರ ಪೊಲೀಸರು 45 ಲಕ್ಷ ರೂಪಾಯಿ ಬೆಲೆ ಬಾಳುವ ಸುಮಾರು ಎರಡು ಕೆ.ಜಿ ಚಿನ್ನಾಭರಣ ಜಫ್ತಿ ಮಾಡಿದ್ದಾರೆ.<br /> <br /> ಅಶೋಕನಗರ, ರಾಮಮೂರ್ತಿನಗರ, ಬಾಣಸವಾಡಿ, ವಿದ್ಯಾರಣ್ಯಪುರ, ಸುಬ್ರಹ್ಮಣ್ಯಪುರ ಸೇರಿದಂತೆ ಹಲವು ಪೊಲೀಸ್ ಠಾಣೆಗಳ ವ್ಯಾಪ್ತಿಯ ಮನೆಗಳಲ್ಲಿ ಆತ ಕಳವು ಮಾಡಿದ್ದ. <br /> ಅಲ್ಲದೇ ಕನ್ನಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಣಸವಾಡಿ, ಚಂದ್ರಾಲೇಔಟ್, ಪುಲಿ ಕೇಶಿನಗರ ಮತ್ತು ಎಚ್ಎಸ್ಆರ್ ಲೇಔಟ್ ಪೊಲೀಸರು ವೇಲುನನ್ನು ಈ ಹಿಂದೆ ಬಂಧಿಸಿದ್ದರು.<br /> <br /> ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದ ಆತ ಪುನಃ ಕಳವು ಮಾಡುವುದನ್ನು ಮುಂದುವರಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಕೇಂದ್ರ ವಿಭಾಗದ ಡಿಸಿಪಿ ಡಾ.ಜಿ.ರಮೇಶ್ ಅವರ ಮಾರ್ಗದರ್ಶನದಲ್ಲಿ ಹಲಸೂರುಗೇಟ್ ಉಪವಿಭಾಗದ ಎಸಿಪಿ ಗಚ್ಚಿನಕಟ್ಟಿ, ಕಬ್ಬನ್ಪಾರ್ಕ್ ಉಪವಿಭಾಗದ ಎಸಿಪಿ ದೇವರಾಜು, ಶೇಷಾದ್ರಿಪುರ ಉಪವಿಭಾಗದ ಎಸಿಪಿ ಎಚ್.ಎಂ.ಓಂಕಾರಯ್ಯ ಮತ್ತು ಸಿಬ್ಬಂದಿ ತಂಡ ಈ ಪ್ರಕರಣಗಳನ್ನು ಭೇದಿಸಿದೆ. <br /> <br /> ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಟಿ.ಸುನಿಲ್ಕುಮಾರ್, ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ನಿಸಾರ್ ಅಹಮ್ಮದ್ ಅವರು ಪತ್ರಿಕಾ ಗೋಷ್ಠಿಯಲ್ಲಿ ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿವಿಧ ಅಪರಾಧ ಪ್ರಕರಣಗಳನ್ನು ಭೇದಿಸಿರುವ ನಗರದ ಕೇಂದ್ರ ವಿಭಾಗದ ಪೊಲೀಸರು 81 ಆರೋಪಿಗಳನ್ನು ಬಂಧಿಸಿ ಚಿನ್ನಾಭರಣ ಮತ್ತು ಬೈಕ್ಗಳು ಸೇರಿದಂತೆ ಒಟ್ಟು 1.65 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.<br /> <br /> ‘ಕಳವು, ದರೋಡೆ ಪ್ರಕರಣಗಳನ್ನು ಪತ್ತೆ ಮಾಡಿರುವ ಕೇಂದ್ರ ವಿಭಾಗದ ಸಿಬ್ಬಂದಿ ಎರಡೂವರೆ ಕೆ.ಜಿ ಚಿನ್ನಾಭರಣ, 13 ಲಕ್ಷ ನಗದು, 108 ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ’ ಎಂದು ನಗರ ಪೊಲೀಸ್ ಕಮಿಷನರ್ ಶಂಕರ್ ಬಿದರಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> ‘ಕೇಂದ್ರ ವಿಭಾಗದ ಪೊಲೀಸರು ಪ್ರತಿಭಟನೆ, ಕಾನೂನು ಸುವ್ಯವಸ್ಥೆ, ಅತಿ ಗಣ್ಯ ವ್ಯಕ್ತಿಗಳ ಆಗಮನ ಮತ್ತು ನಿರ್ಗಮನದ ಸಂದರ್ಭದಲ್ಲಿ ಭದ್ರತಾ ಕಾರ್ಯ ನಿರ್ವಹಿಸುವುದರ ಜತೆಗೆ ಅಪರಾಧ ಪ್ರಕರಣಗಳನ್ನು ಪತ್ತೆ ಮಾಡುವಲ್ಲೂ ನಿರೀಕ್ಷೆಗೂ ಮೀರಿ ಕೆಲಸ ಮಾಡಿದ್ದಾರೆ. <br /> <br /> ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿರುವ ಈ ಸಿಬ್ಬಂದಿ ತಂಡಕ್ಕೆ ಎರಡು ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುತ್ತದೆ’ ಎಂದು ಬಿದರಿ ಹೇಳಿದರು.<br /> <br /> ಕಳವು ಪ್ರಕರಣದ ಆರೋಪಿಗಳಾದ ಮಹೇಶ, ಮುನಿರಾಜ, ಮಂಜುನಾಥ ಹಾಗೂ ಹರ್ಷದ್ ಪಾಷಾ ಎಂಬುವರನ್ನು ಬಂಧಿಸಿರುವ ಕಬ್ಬನ್ಪಾರ್ಕ್ ಪೊಲೀಸರು 52.28 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.<br /> <br /> ಬೀಗ ಹಾಕಿದ ಮನೆಗಳಿಗೆ ನುಗ್ಗಿ ಕಳವು ಮಾಡುತ್ತಿದ್ದ ಆರೋಪದ ಮೇಲೆ ಭಾರತಿನಗರದ ವೇಲು (26) ಎಂಬಾತನನ್ನು ಬಂಧಿಸಿರುವ ಅಶೋಕನಗರ ಪೊಲೀಸರು 45 ಲಕ್ಷ ರೂಪಾಯಿ ಬೆಲೆ ಬಾಳುವ ಸುಮಾರು ಎರಡು ಕೆ.ಜಿ ಚಿನ್ನಾಭರಣ ಜಫ್ತಿ ಮಾಡಿದ್ದಾರೆ.<br /> <br /> ಅಶೋಕನಗರ, ರಾಮಮೂರ್ತಿನಗರ, ಬಾಣಸವಾಡಿ, ವಿದ್ಯಾರಣ್ಯಪುರ, ಸುಬ್ರಹ್ಮಣ್ಯಪುರ ಸೇರಿದಂತೆ ಹಲವು ಪೊಲೀಸ್ ಠಾಣೆಗಳ ವ್ಯಾಪ್ತಿಯ ಮನೆಗಳಲ್ಲಿ ಆತ ಕಳವು ಮಾಡಿದ್ದ. <br /> ಅಲ್ಲದೇ ಕನ್ನಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಣಸವಾಡಿ, ಚಂದ್ರಾಲೇಔಟ್, ಪುಲಿ ಕೇಶಿನಗರ ಮತ್ತು ಎಚ್ಎಸ್ಆರ್ ಲೇಔಟ್ ಪೊಲೀಸರು ವೇಲುನನ್ನು ಈ ಹಿಂದೆ ಬಂಧಿಸಿದ್ದರು.<br /> <br /> ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದ ಆತ ಪುನಃ ಕಳವು ಮಾಡುವುದನ್ನು ಮುಂದುವರಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಕೇಂದ್ರ ವಿಭಾಗದ ಡಿಸಿಪಿ ಡಾ.ಜಿ.ರಮೇಶ್ ಅವರ ಮಾರ್ಗದರ್ಶನದಲ್ಲಿ ಹಲಸೂರುಗೇಟ್ ಉಪವಿಭಾಗದ ಎಸಿಪಿ ಗಚ್ಚಿನಕಟ್ಟಿ, ಕಬ್ಬನ್ಪಾರ್ಕ್ ಉಪವಿಭಾಗದ ಎಸಿಪಿ ದೇವರಾಜು, ಶೇಷಾದ್ರಿಪುರ ಉಪವಿಭಾಗದ ಎಸಿಪಿ ಎಚ್.ಎಂ.ಓಂಕಾರಯ್ಯ ಮತ್ತು ಸಿಬ್ಬಂದಿ ತಂಡ ಈ ಪ್ರಕರಣಗಳನ್ನು ಭೇದಿಸಿದೆ. <br /> <br /> ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಟಿ.ಸುನಿಲ್ಕುಮಾರ್, ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ನಿಸಾರ್ ಅಹಮ್ಮದ್ ಅವರು ಪತ್ರಿಕಾ ಗೋಷ್ಠಿಯಲ್ಲಿ ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>