<p>ಬೆಂಗಳೂರು: ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘವು ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಕ್ಟೋಬರ್ 17 ರಂದು ನಗರ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಪ್ರತಿಭಟನೆ ಹಮ್ಮಿಕೊಂಡಿದೆ. <br /> <br /> `ಮಕ್ಕಳನ್ನು ಶಿಕ್ಷಣದೆಡೆಗೆ ಆಕರ್ಷಿಸುವ ಸಲುವಾಗಿ ತಂದ ಬಿಸಿಯೂಟದ ಯೋಜನೆಯಲ್ಲಿ ಕನಿಷ್ಠ ಉದ್ಯೋಗ ಭದ್ರತೆಯಿಲ್ಲದೇ ಅಡುಗೆ ಸಹಾಯಕರಾಗಿ ದುಡಿಯುತ್ತಿರುವ ಸಾವಿರಾರು ಮಹಿಳೆಯರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ~ ಎಂದು ಸಂಘದ ಅಧ್ಯಕ್ಷೆ ಎಸ್.ವರಲಕ್ಷ್ಮಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. <br /> <br /> `ಸರ್ಕಾರವು ಈ ಯೋಜನೆಯನ್ನು ಸರ್ಕಾರೇತರ ಸಂಸ್ಥೆಗಳಿಗೆ ಹಸ್ತಾಂತರಿಸುವ ಮೂಲಕ ಖಾಸಗೀಕರಣಗೊಳಿಸುತ್ತಿದೆ. ಇದರಿಂದ 30 ಸಾವಿರ ಮಹಿಳೆಯರು ನಿರುದ್ಯೋಗಿಗಳಾಗಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು~ ಎಂದು ಒತ್ತಾಯಿಸಿದರು. <br /> <br /> `ನೌಕರರನ್ನು ಖಾಯಂಗೊಳಿಸಬೇಕು. ಸಾಮಾಜಿಕ ಭದ್ರತೆ ಒಳಗೊಂಡಂತೆ ಇಎಸ್ಐ, ಭವಿಷ್ಯ ನಿಧಿ ಮತ್ತು ನಿವೃತ್ತಿ ವೇತನ ದೊರೆಯುವಂತೆ ಮಾಡಬೇಕು. ಇದರೊಂದಿಗೆ ರಾಜ್ಯದಾದ್ಯಂತ ಇರುವ ಬಿಸಿಯೂಟ ಕಾರ್ಮಿಕರ ನೇಮಕಾತಿಗೆ ಸಂಬಂಧಿಸಿದಂತೆ ಸೂಕ್ತ ಸೇವಾ ನಿಯಮಗಳನ್ನು ಜಾರಿಗೊಳಿಸಬೇಕು~ ಎಂದು ಒತ್ತಾಯಿಸಿದರು.<br /> <br /> `ಗುಣಮಟ್ಟದ ಹಾಗೂ ಸೂಕ್ತ ಪ್ರಮಾಣದ ಆಹಾರ ಧಾನ್ಯಗಳ ಪೂರೈಕೆಗೆ ನಿಗದಿತ ನಿಧಿಯನ್ನು ಮೀಸಲಿಡಬೇಕು. ಮತ್ತು ಎಲ್ಲಾ ಶಾಲೆಗಳಲ್ಲೂ ಬಿಸಿಯೂಟ ತಯಾರಿಕೆಗೆ ಅಗತ್ಯವಿರುವ ಮೂಲಭೂತ ಸೌಲಭ್ಯವನ್ನು ಒದಗಿಸಬೇಕು~ ಎಂದು ಆಗ್ರಹಿಸಿದರು.<br /> <br /> ಪ್ರಧಾನ ಕಾರ್ಯದರ್ಶಿ ಮಾಲಿನಿ ಮೇಸ್ತ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘವು ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಕ್ಟೋಬರ್ 17 ರಂದು ನಗರ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಪ್ರತಿಭಟನೆ ಹಮ್ಮಿಕೊಂಡಿದೆ. <br /> <br /> `ಮಕ್ಕಳನ್ನು ಶಿಕ್ಷಣದೆಡೆಗೆ ಆಕರ್ಷಿಸುವ ಸಲುವಾಗಿ ತಂದ ಬಿಸಿಯೂಟದ ಯೋಜನೆಯಲ್ಲಿ ಕನಿಷ್ಠ ಉದ್ಯೋಗ ಭದ್ರತೆಯಿಲ್ಲದೇ ಅಡುಗೆ ಸಹಾಯಕರಾಗಿ ದುಡಿಯುತ್ತಿರುವ ಸಾವಿರಾರು ಮಹಿಳೆಯರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ~ ಎಂದು ಸಂಘದ ಅಧ್ಯಕ್ಷೆ ಎಸ್.ವರಲಕ್ಷ್ಮಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. <br /> <br /> `ಸರ್ಕಾರವು ಈ ಯೋಜನೆಯನ್ನು ಸರ್ಕಾರೇತರ ಸಂಸ್ಥೆಗಳಿಗೆ ಹಸ್ತಾಂತರಿಸುವ ಮೂಲಕ ಖಾಸಗೀಕರಣಗೊಳಿಸುತ್ತಿದೆ. ಇದರಿಂದ 30 ಸಾವಿರ ಮಹಿಳೆಯರು ನಿರುದ್ಯೋಗಿಗಳಾಗಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು~ ಎಂದು ಒತ್ತಾಯಿಸಿದರು. <br /> <br /> `ನೌಕರರನ್ನು ಖಾಯಂಗೊಳಿಸಬೇಕು. ಸಾಮಾಜಿಕ ಭದ್ರತೆ ಒಳಗೊಂಡಂತೆ ಇಎಸ್ಐ, ಭವಿಷ್ಯ ನಿಧಿ ಮತ್ತು ನಿವೃತ್ತಿ ವೇತನ ದೊರೆಯುವಂತೆ ಮಾಡಬೇಕು. ಇದರೊಂದಿಗೆ ರಾಜ್ಯದಾದ್ಯಂತ ಇರುವ ಬಿಸಿಯೂಟ ಕಾರ್ಮಿಕರ ನೇಮಕಾತಿಗೆ ಸಂಬಂಧಿಸಿದಂತೆ ಸೂಕ್ತ ಸೇವಾ ನಿಯಮಗಳನ್ನು ಜಾರಿಗೊಳಿಸಬೇಕು~ ಎಂದು ಒತ್ತಾಯಿಸಿದರು.<br /> <br /> `ಗುಣಮಟ್ಟದ ಹಾಗೂ ಸೂಕ್ತ ಪ್ರಮಾಣದ ಆಹಾರ ಧಾನ್ಯಗಳ ಪೂರೈಕೆಗೆ ನಿಗದಿತ ನಿಧಿಯನ್ನು ಮೀಸಲಿಡಬೇಕು. ಮತ್ತು ಎಲ್ಲಾ ಶಾಲೆಗಳಲ್ಲೂ ಬಿಸಿಯೂಟ ತಯಾರಿಕೆಗೆ ಅಗತ್ಯವಿರುವ ಮೂಲಭೂತ ಸೌಲಭ್ಯವನ್ನು ಒದಗಿಸಬೇಕು~ ಎಂದು ಆಗ್ರಹಿಸಿದರು.<br /> <br /> ಪ್ರಧಾನ ಕಾರ್ಯದರ್ಶಿ ಮಾಲಿನಿ ಮೇಸ್ತ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>